ಶಿವಾಜಿನಗರದ ಹೊಸ ಸುದ್ದಿ; ರೋಷನ್ ಬೇಗ್ ಕಾಂಗ್ರೆಸ್ಗೆ ವಾಪಸ್?
ಬೆಂಗಳೂರು, ಜೂನ್ 12 : 2019ರ ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದ ಮಾಜಿ ಸಚಿವ ರೋಷನ್ ಬೇಗ್ ಪಕ್ಷದಿಂದ ಅಮಾನತುಗೊಂಡಿದ್ದರು. ಆದರೆ, ಯಾವುದೇ ಪಕ್ಷ ಸೇರದೆ ತಟಸ್ಥವಾಗಿ ಉಳಿದಿದ್ದರು.
Recommended Video
ಈಗ ಶಿವಾಜಿನಗರದಿಂದ ಹೊಸ ಸುದ್ದಿಯೊಂದು ಬಂದಿದೆ. ರೋಷನ್ ಬೇಗ್ ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಕರ್ನಾಟಕ ಕಾಂಗ್ರೆಸ್ನ ಕೆಲವು ನಾಯಕರು ಸಹ ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ. ಬಿ. ಪಾಟೀಲ್ ಈ ಕುರಿತು ಹೇಳಿಕೆ ನೀಡಿದ್ದು, "ಕಾಂಗ್ರೆಸ್ಗೆ ಬರುತ್ತೇವೆ ಎಂದವರನ್ನೆಲ್ಲ ಸೇರಿಸಿಕೊಳ್ಳಲು ಆಗಲ್ಲ. ಅದಕ್ಕಾಗಿಯೇ ಒಂದು ಸಮಿತಿ ಇದೆ. ಬರುವವರಿಂದ ನಮಗೆ ಹಾನಿಯಾಗಬಾರದು. ಹೋಗುವಾಗ ಏನು ಹಾನಿ ಮಾಡಿದ್ದಾರೆ? ಎಂದು ನೋಡಬೇಕಾಗುತ್ತದೆ" ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ ನೀಡಿದ್ದರು. ಆದರೆ, ಇತರ ಅನರ್ಹ ಶಾಸಕರ ಜೊತೆ ಅವರು ಬಿಜೆಪಿ ಸೇರಿರಲಿಲ್ಲ, ಶಿವಾಜಿನಗರ ಉಪ ಚುನಾವಣೆಯಿಂದ ಸಹ ದೂರವುಳಿದಿದ್ದರು.

ಹಿರಿಯರು ತೀರ್ಮಾನ ಮಾಡುತ್ತಾರೆ
ಮಾಜಿ ಸಚಿವ ಎಂ. ಬಿ. ಪಾಟೀಲ್, "ರೋಷನ್ ಬೇಗ್ ಅವರು ಬರ್ತಾರೋ, ಇಲ್ಲವೋ ಗೊತ್ತಿಲ್ಲ. ನಮ್ಮ ನಾಯಕರ ಜೊತೆ ಚರ್ಚೆ ಮಾಡಿರಬಹುದು. ಪಕ್ಷದ ಚೌಕಟ್ಟಿನಲ್ಲಿ ಮೊದಲು ಚರ್ಚೆ ಮಾಡಬೇಕು. ಆ ನಂತರ ಹಿರಿಯರು ತೀರ್ಮಾನ ಮಾಡುತ್ತಾರೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ. ಕೆ. ಶಿವಕುಮಾರ್ ನಿರ್ಧಾರ ಮಾಡುತ್ತಾರೆ" ಎಂದು ಹೇಳಿದ್ದಾರೆ.

ಬಿಜೆಪಿ ಏಕೆ ಸೇರಲಿಲ್ಲ?
ಮಾಜಿ ಸಚಿವ ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಅಮಾನತುಗೊಂಡರೂ ಸಹ ಅವರು ಬಿಜೆಪಿ ಸೇರಲಿಲ್ಲ. ಐಎಂಎ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿ ಬಂದಿತ್ತು. ಆದ್ದರಿಂದ, ಅವರು ಬಿಜೆಪಿ ಸೇರುವುದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿರಲಿಲ್ಲ ಎಂಬ ಸುದ್ದಿಗಳು ಇವೆ.

ಉಪ ಚುನಾವಣೆ ಟಿಕೆಟ್ ಸಿಗಲಿಲ್ಲ
ರೋಷನ್ ಬೇಗ್ ಅವರು ಬಿಜೆಪಿ ಸೇರಲಿಲ್ಲ. ಶಿವಾಜಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ. ಸರವಣ ಅವರು ಬಿಜೆಪಿಯಿಂದ ಕಣಕ್ಕಿಳಿದರೂ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ರಿಜ್ವಾನ್ ಅರ್ಷದ್ ಉಪ ಚುನಾವಣೆಯಲ್ಲಿ ಗೆದ್ದರು. ಈಗ ರೋಷನ್ ಬೇಗ್ ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಪಕ್ಷದಿಂದ ಅಮಾನತು
ಲೋಕಸಭೆ ಚುನಾವಣೆ ಮುಗಿದ ಬಳಿಕ ರೋಷನ್ ಬೇಗ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ವಿರುದ್ಧ ಟೀಕಾ ಪ್ರಕಾರ ನಡೆಸಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ 2019ರ ಜೂನ್ನಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications