ಪಟಾಕಿ ಸಿಡಿಸಿ ಜನರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮಕ್ಕೆ ಸುರೇಶ್ಕುಮಾರ್ ಪತ್ರ
ಬೆಂಗಳೂರು, ಮೇ 23 : ಹುಟ್ಟುಹಬ್ಬದ ನೆಪದಲ್ಲಾಗಲಿ.. ಐಪಿಎಲ್ ಮ್ಯಾಚ್ ಗಳಲ್ಲಿ ಗೆದ್ದ ಖುಷಿಯಲ್ಲಾಗಲಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮಾಜಿ ಸಚಿವ ಹಾಗೂ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಪಶ್ಚಿಮ ವಿಭಾಗದ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಪ್ರತೀ ದಿನ ರಾತ್ರಿ ಹತ್ತು ಗಂಟೆಯ ನಂತರ ಬೆಂಗಳೂರಿನಲ್ಲಿ ವಿವಿಧ ಕಾರಣಗಳಿಗಾಗಿ ಪಟಾಕಿ ಸಿಡಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಪಟಾಕಿ ಶಬ್ಧದಿಂದ ಶಿಶು ಮಕ್ಕಳಿಗೆ, ತುಂಬು ಗರ್ಭಿಣಿಯರಿಗೆ, ವಯೋವೃದ್ಧರಿಗಷ್ಟೇ ಅಲ್ಲದೆ ಪ್ರಾಣಿಪಕ್ಷಿಗಳಿಗಳಿಗೂ ತೊಂದರೆಯಾಗುತ್ತಿದ್ದು, ಕೂಡಲೇ ಕ್ರಮ ಜರುಗಿಸುವಂತೆ ಮನವಿ ಪತ್ರ ನೀಡಿದ್ದಾರೆ.

ಉಪ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ ಹಾಗೂ ಉಪ ಪೊಲೀಸ್ ಆಯುಕ್ತರು, ಪಶ್ಚಿಮ, ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ, ಸಹಾಯಕ ಪೊಲೀಸ್ ಆಯುಕ್ತರು, ವಿಜಯನಗರ ಇವರುಗಳಿಗೆ ಪತ್ರ ಬರೆದಿದ್ದಾರೆ. ಜನರಿಗೆ ತೊಂದರೆಯಾಗುತ್ತಿರುವ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಹಾಗೂ ಈ ರೀತಿಯ ಘಟನೆಗಳು ಪತ್ತೆಯಾದಲ್ಲಿ ನಿಯಾಮಾನುಸಾರ ಕ್ರಮ ಜರುಗಿಸಲು ತಮ್ಮ ವಲಯದ ಎಲ್ಲಾ ಹೊಯ್ಸಳ ಸಿಬ್ಬಂದಿ ಮತ್ತು ಬೀಟ್ ಕರ್ತವ್ಯದಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಮಾಜಿ ಸಚಿವ ಸುರೇಶ್ ಕುಮಾರ್ ಪತ್ರದಲ್ಲಿ ಕೋರಲಾಗಿದೆ.

ಕಳೆದ ದೀಪಾವಳಿ ಸಮಯದಲ್ಲಿ ಹಸಿರು ಪಟಾಕಿಗಳನ್ನ ಮಾತ್ರ ಮಾರಾಟ ಮಾಡುವಂತೆ ಕೊರೋನಾ ಸಮಯದಲ್ಲಿ ರಾಜ್ಯ ಸರ್ಕಾರ ಆದೇಶ ಮಾಡಲಾಗಿತ್ತು. ಸರ್ಕಾರದ ಈ ನಿರ್ಧಾರವನ್ನ ಪರಿಸರ ಪ್ರೇಮಿಗಳು ಸಹ ಸ್ವಾಗತ ಮಾಡಿದರು. ಇದೀಗ ದೀಪಾವಳಿಯೂ ಇಲ್ಲ ಏನೂ ಇಲ್ಲ. ಆದರೂ ಅತಿಯಾದ ಪಟಾಕಿ ಸಿಡಿಸುವಂತಹ ಘಟನೆಗಳು ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಣೆ ಸಮಯದಲ್ಲಿ, ಕ್ರಿಕೆಟ್ ಪಂದ್ಯಾವಳಿ ಗೆದ್ದ ಖುಷಿಯಲ್ಲಿ ಪಟಾಕಿ ಸಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಪಶ್ಚಿಮ ಭಾಗದಲ್ಲಿ ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ ಭಾಗಗಳಲ್ಲಿ ಮಾಲಿನ್ಯ ರಹಿತಕ್ಕೆ ಆಸ್ಪದ ನೀಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಜಿ ಸಚಿವ ಸುರೇಶ್ ಪಶ್ಚಿಮ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications