ವೇಮ ರೆಡ್ಡಿ ಸಮಾಜ ಸಂಘಟನೆ ಭರವಸೆ ಕೊಟ್ಟ ಜನಾರ್ದನ ರೆಡ್ಡಿ
ಬೆಂಗಳೂರು, ಜನವರಿ 19: "ಹೇಮ-ವೇಮ ರೆಡ್ಡಿ ಸಮಾಜದ ಸಂಘಟನೆಗೆ ಕಾರ್ಯಕ್ರಮದ ರೂಪುರೇಶೆಗಳು ಸಿದ್ಧವಾಗಿದ್ದು, ಶೀರ್ಘದಲ್ಲಿಯೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು" ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭರವಸೆ ನೀಡಿದರು.
ತತ್ವಜ್ಞಾನಿ ವೇಮನರ 609ನೇ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ಬೆಂಗಳೂರಿನ ಬಸವೇಶ್ವರ ಸರ್ಕಲ್ ನಲ್ಲಿರುವ ಹೈಪಾಯಿಂಟ್ ಕಚೇರಿಯಲ್ಲಿ ಹೇಮ-ವೇಮ ರೆಡ್ಡಿ ಜನಸಂಘ ಕರ್ನಾಟಕದ ಮುಖ್ಯ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಕಳೆದ ಆರೇಳು ತಿಂಗಳಿನಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸಂಘದ ಕಾರ್ಯಗಳಿಗೆ ಅಡೆತಡೆಯಾಗಿದೆ. ಹೀಗಿದ್ದರೂ ಕಾರ್ಯಕ್ರಮವನ್ನು ಅತ್ಯಂತ ವೇಗವಾಗಿ ಆರಂಭಿಸಿ, ಸಮಾಜದ ಎಲ್ಲಾ ಮುಖಂಡರುಗಳನ್ನು, ಯುವಕರನ್ನು ಸಂಪರ್ಕಿಸಿ ಸಂಘಟಿಸುವತ್ತ ರೂಪುರೇಶೆಗಳನ್ನು ರಚಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾರ್ಯರೂಪಕ್ಕೆ ಬಲಿದೆ" ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು. ರೆಡ್ಡಿ ಸಮಾಜ ಸ್ವಾಮೀಜಿ ಶಾಂತಮಲ್ಲಿಕಾರ್ಜುನ ಸ್ವಾಮಿ, ಹೆಡಗಿನಮುದ್ರ ಸ್ವಾಮಿ ವೇಮನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಶೀರ್ವಚನ ನೀಡಿದ ಸ್ವಾಮೀಜಿಗಳು ವೇಮನರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಸಮಾಜದ ಬಾಂಧವರು ಇತರೆ ಸಮಾಜದವರೊಂದಿಗೆ ಐಕ್ಯತೆ ಹಾಗೂ ಸ್ನೇಹ ಭಾವನೆಯಿಂದಿದ್ದು, ಸಮಾಜದ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.
Recommended Video
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications