ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೇಮ ರೆಡ್ಡಿ ಸಮಾಜ ಸಂಘಟನೆ ಭರವಸೆ ಕೊಟ್ಟ ಜನಾರ್ದನ ರೆಡ್ಡಿ

|
Google Oneindia Kannada News

ಬೆಂಗಳೂರು, ಜನವರಿ 19: "ಹೇಮ-ವೇಮ ರೆಡ್ಡಿ ಸಮಾಜದ ಸಂಘಟನೆಗೆ ಕಾರ್ಯಕ್ರಮದ ರೂಪುರೇಶೆಗಳು ಸಿದ್ಧವಾಗಿದ್ದು, ಶೀರ್ಘದಲ್ಲಿಯೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು" ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭರವಸೆ ನೀಡಿದರು.

ತತ್ವಜ್ಞಾನಿ ವೇಮನರ 609ನೇ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ಬೆಂಗಳೂರಿನ ಬಸವೇಶ್ವರ ಸರ್ಕಲ್ ನಲ್ಲಿರುವ ಹೈಪಾಯಿಂಟ್ ಕಚೇರಿಯಲ್ಲಿ ಹೇಮ-ವೇಮ ರೆಡ್ಡಿ ಜನಸಂಘ ಕರ್ನಾಟಕದ ಮುಖ್ಯ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಕಳೆದ ಆರೇಳು ತಿಂಗಳಿನಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸಂಘದ ಕಾರ್ಯಗಳಿಗೆ ಅಡೆತಡೆಯಾಗಿದೆ. ಹೀಗಿದ್ದರೂ ಕಾರ್ಯಕ್ರಮವನ್ನು ಅತ್ಯಂತ ವೇಗವಾಗಿ ಆರಂಭಿಸಿ, ಸಮಾಜದ ಎಲ್ಲಾ ಮುಖಂಡರುಗಳನ್ನು, ಯುವಕರನ್ನು ಸಂಪರ್ಕಿಸಿ ಸಂಘಟಿಸುವತ್ತ ರೂಪುರೇಶೆಗಳನ್ನು ರಚಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾರ್ಯರೂಪಕ್ಕೆ ಬಲಿದೆ" ಎಂದು ತಿಳಿಸಿದರು.

Former Minsiter Janardhana Reddy Assured To Organise Hema Vema Reddy Society

 ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ಕೊಟ್ಟಿದ್ಯಾಕೆ? ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ಕೊಟ್ಟಿದ್ಯಾಕೆ?

Recommended Video

ಬಿಎಂಟಿಸಿ ಬಸ್ ಅಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರು!! | Oneindia Kannada

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು. ರೆಡ್ಡಿ ಸಮಾಜ ಸ್ವಾಮೀಜಿ ಶಾಂತಮಲ್ಲಿಕಾರ್ಜುನ ಸ್ವಾಮಿ, ಹೆಡಗಿನಮುದ್ರ ಸ್ವಾಮಿ ವೇಮನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಶೀರ್ವಚನ ನೀಡಿದ ಸ್ವಾಮೀಜಿಗಳು ವೇಮನರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಸಮಾಜದ ಬಾಂಧವರು ಇತರೆ ಸಮಾಜದವರೊಂದಿಗೆ ಐಕ್ಯತೆ ಹಾಗೂ ಸ್ನೇಹ ಭಾವನೆಯಿಂದಿದ್ದು, ಸಮಾಜದ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

English summary
Former minsiter Janardhana Reddy assured plans will be ready to organise Hema vema reddy society in coming days
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X