ಫೇಸ್ಬುಕ್ಕಿಗೆ ಮಾಜಿ ಸಂಸದೆ ರಮ್ಯಾ ರೀ ಎಂಟ್ರಿ, ನ್ಯಾಯಕ್ಕಾಗಿ ಆಗ್ರಹ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ನಿರ್ವಹಣೆ ವಿಭಾಗದ ಮಾಜಿ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಅವರ ಫೇಸ್ಬುಕ್ ಅಧಿಕೃತ ಖಾತೆ ಸಕ್ರಿಯವಾಗಿದೆ.
ಲೋಕಸಭೆ ಚುನಾವಣೆಯ ಸೋಲಿನ ನಂತರ ದಿವ್ಯಸ್ಪಂದನ ಅವರ ಫೇಸ್ಬುಕ್, ಟ್ವಿಟ್ಟರ್ ಖಾತೆ ಖಾತೆಯನ್ನು ನಿಷ್ಕ್ರಿಯ(deactivated)ವಾಗಿತ್ತು. ಎಲ್ಲಾ ಟ್ವೀಟ್ ಡಿಲೀಟ್ ಆಗಿತ್ತು.
ಲೋಕಸಭೆ ಚುನಾವಣೆಯ ಸೋಲಿನ ನಂತರವು ಒಂದಷ್ಟು ದಿನ ಟ್ವಿಟ್ಟರ್ ನಲ್ಲಿ active ಆಗಿಯೇ ಇದ್ದ ರಮ್ಯಾ ಇದ್ಯಾಕೆ ಇದ್ದಕ್ಕಿದ್ದಂತೆ ಮೈಕ್ರೋ ಬ್ಲಾಗಿಂಗ್ ಸೈಟ್ ನಿಂದ ಹೊರಹೋದರು ಎಂಬ ಅನುಮಾನ ಎದ್ದಿತ್ತು.

ಕೇವಲ ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂ ಮಾತ್ರವಲ್ಲದೆ ದಿವ್ಯ ಸ್ಪಂದನ ಅವರು ಕಾಂಗ್ರೆಸ್ ನ ಆಂತರಿಕ ವಾಟ್ಸಾಪ್ ಗ್ರೂಪ್ ನಿಂದಲೂ ಎಕ್ಸಿಟ್ ಆಗಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿತ್ತು. ಅವರು ರಾಜಕಾರಣದಿಂದ ಕೆಲ ಕಾಲ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದಂತಿದೆ ಎಂದು ಪಕ್ಷದ ಕೆಲವು ಮೂಲಗಳು ತಿಳಿಸಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.
ಆದರೆ, ಈಗ ಫೇಸ್ಬುಕ್ ನಲ್ಲಿ ಅವರ ಅಧಿಕೃತ ಪುಟ ಸಕ್ರಿಯವಾಗಿದೆ. ಮೇ 29, 2019 ರ ನಂತರ ಜೂನ್ 3 ರಂದು ಮೊದಲ ಪೋಸ್ಟ್ ಹಾಕಿದ್ದಾರೆ.

ಕೇರಳದ ಗರ್ಭವತಿ ಆನೆಯನ್ನು ಅನಾನಸ್ ಪಟಾಕಿ ಮೂಲಕ ಕೊಂದ ಪಾತಕಿಗಳನ್ನು ಬಂಧಿಸಿ, ಆನೆಗೆ ನ್ಯಾಯ ಸಿಗಬೇಕಿದೆ ಎಂದು ಚೇಂಜ್. ಆರ್ಗ್ ನಲ್ಲಿರುವ ಆನ್ ಲೈನ್ ಪಿಟೀಷನ್ ಹಂಚಿಕೊಂಡಿದ್ದಾರೆ. ರಮ್ಯಾ ಅವರ ಮರು ಆಗಮನವನ್ನು ಅವರ ಅಭಿಮಾನಿಗಳು ಮುಕ್ತವಾಗಿ ಸ್ವಾಗತಿಸಿದ್ದಾರೆ.
2019ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52(543) ಸ್ಥಾನಗಳಲ್ಲಿ ಗೆದ್ದು ಹೀನಾಯ ಪ್ರದರ್ಶನ ತೋರಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಅಂದರೆ ಮೇ 01 ರಂದು ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications