Breaking: 'ಜಾಹೀರಾತಿನಲ್ಲಿ ಬೇಕೆಂದೇ ನೆಹರೂ ಚಿತ್ರ ಕೈಬಿಟ್ಟಿದ್ದೇವೆ'
ಬೆಂಗಳೂರು, ಆಗಸ್ಟ್ 14: ರಾಜ್ಯ ಸರಕಾರ ನೀಡಿರುವ ಜಾಹೀರಾತಿನಲ್ಲಿ ನೆಹರು ಅವರಿಗೆ ಅವಮಾನ ಮಾಡಲಾಗಿದೆ ಎಂದು ರಾಜ್ಯದಲ್ಲಿ ಆಕ್ರೋಶ ಹೆಚ್ಚಾಗುತ್ತಿರುವ ಸಮಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಬಿಜೆಪಿ ಸರಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
"ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ " ಎಂದು ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉದ್ದೇಶಪೂರ್ವಕವಾಗಿ ನೆಹರು ಫೋಟೋವನ್ನು ಪತ್ರಿಕೆಯಲ್ಲಿ ನೀಡಿದ ಸರ್ಕಾರಿ ಜಾಹೀರಾತಿನಲ್ಲಿ ಕೈ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೌದು ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ" ಎಂದರು.

"ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರು ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂರವರ ಫೋಟೋವನ್ನು ನಾವು ಹಾಕುವುದಿಲ್ಲ" ಎಂದು ಬಿಜೆಪಿ ಸರಕಾರದ ಕ್ರಮಕ್ಕೆ ಸಮರ್ಥನೆ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ''












Click it and Unblock the Notifications