ಬೆಂಗಳೂರಲ್ಲಿ ನಾಲ್ವರು ಸುಪಾರಿ ಹಂತಕರ ಬಂಧನ
ಬೆಂಗಳೂರು, ಸೆಪ್ಟೆಂಬರ್, 07 : ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿನ ಟೈಮ್ಸ್ ಬಾರ್ನ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿದ್ದ ನಾಲ್ವರು ಸುಪಾರಿ ಹಂತಕರನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ನಾಲ್ವರ ಬಂಧನದ ಬಗ್ಗೆ ಮಾಹಿತಿ ನೀಡಿದರು. ಬಂಧಿತರು ಬೆಳ್ತಂಗಡಿಯ ಅನ್ವರ್ ಹಸನ್ (32), ಮೂಡಬಿದಿರೆಯ ಇಮ್ರಾನ್ (33), ಸುರೇಶ್ (28) ಹಾಗೂ ಆಂಧ್ರಪ್ರದೇಶದ ಸುಹೈಲ್ ಖಾನ್ (26).[ಬಾರ್ ಮಾಲೀಕನ ಮೇಲೆ ಗುಂಡಿನ ದಾಳಿ]

ಆ.17ರಂದು ಟೈಮ್ಸ್ ಬಾರ್ನ ಮಾಲೀಕ ಚೇತನ್ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆ ಮಾಡಲು ಪ್ರಯತ್ನ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ರಾಕೇಶ್ ಅಲಿಯಾಸ್ ಅಲ್ತಾಫ್ ಮತ್ತು ಅಸ್ಗರ್ ಅಲಿ ಅಲಿಯಾಸ್ ಮುನ್ನಾ ಎಂಬುವವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ['ಬೆಂಗಳೂರು ನನಗೆ ಹೊಸದಲ್ಲ' : ನೂತನ ಆಯುಕ್ತ ಮೇಘರಿಕ್]
ಹತ್ಯೆಯ ಪ್ರಯತ್ನ ಏಕೆ? : ತಲೆಮರೆಸಿಕೊಂಡಿರುವ ರಾಕೇಶ್ ಮತ್ತು ಬಾರ್ ಮಾಲೀಕ ಚೇತನ್ ಹಿಂದೆ ವ್ಯಾಪಾರದಲ್ಲಿ ಪಾಲುದಾರರಾಗಿದ್ದರು. ನಂತರ ಮೈಮನಸ್ಸು ಉಂಟಾಗಿ ಬೇರೆ-ಬೇರೆಯಾಗಿದ್ದರು. ದುಬೈಗೆ ತೆರಳಿದ್ದ ರಾಕೇಶ್ 15 ಲಕ್ಷ ಹಣ ನೀಡುವಂತೆ ಚೇತನ್ಗೆ ಬೇಡಿಕೆ ಇಟ್ಟಿದ್ದ.
ಹಣ ನೀಡಲು ನಿರಾಕರಿಸಿದ್ದರಿಂದ ಅಸ್ಗರ್ ಅಲಿ ಜೊತೆ ಸೇರಿ ಚೇತನ್ ಹತ್ಯೆಗೆ ಸಂಚು ರೂಪಿಸಿದ್ದ. ಬಂಧಿತ ಇಮ್ರಾನ್ಗೆ 15 ಲಕ್ಷ ರೂ.ಗೆ ಸುಪಾರಿ ನೀಡಿ ಚೇತನ್ ಕೊಲೆ ಮಾಡಲು ತಿಳಿಸಲಾಗಿತ್ತು. 1 ಲಕ್ಷ ರೂ.ಗಳ ಮುಂಗಡ ಹಣವನ್ನು ನೀಡಲಾಗಿತ್ತು.
ಇಮ್ರಾನ್ ತನ್ನ ಸಹಚರರ ಜೊತೆ ಬೆಂಗಳೂರಿಗೆ ಬಂದು ಬಾರ್ ಮಾಲೀಕ ಚೇತನ್ ಬಗ್ಗೆ ವಿವರಗಳನ್ನು ಸಂಗ್ರಹಿಸಿ ಆ.17ರಂದು ಬಾರ್ನಲ್ಲಿ ಆತನ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದರು. ಚೇತನ್ ಬೆನ್ನಿಗೆ ಗುಂಡು ತಗುಲಿದ್ದು, ಅವರು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ಚಿತ್ರ ಮಾಹಿತಿ : ಬೆಂಗಳೂರು ಪೊಲೀಸ್]
Tweet by Deputy Commissioner of Police - Central DivisionBengaluru CityShri. Sandeep Patil, IPS@DCPCentralBCP@...
Posted by BENGALURU CITY POLICE onMonday, September 7, 2015
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications