ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ, ರೋಗಿಗಳು ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವು

|
Google Oneindia Kannada News

ಬೆಂಗಳೂರು, ನವೆಂಬರ್ 18 : ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೊಸೂರು ಬಳಿ ನಡೆದಿದೆ. ಆಂಬ್ಯಲೆನ್ಸ್‌ನಲ್ಲಿ ಇಬ್ಬರು ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು, ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಆಂಬ್ಯುಲೆನ್ಸ್ ಚಾಲಕ ಜೈಸೂರ್ಯ, ಸಹಾಯಕ ಮದನ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರು ರೋಗಿಳು ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು, ಶವಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು, ಕಣ್ಣು ದಾನ ಮಾಡಿದ ಪೋಷಕರುಅಪಘಾತದಲ್ಲಿ ವಿದ್ಯಾರ್ಥಿನಿ ಸಾವು, ಕಣ್ಣು ದಾನ ಮಾಡಿದ ಪೋಷಕರು

ತಿರುಚಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಬ್ಯುಲೆನ್ಸ್ ಭಾನುವಾರ ಮುಂಜಾನೆ 3.30ರ ಸುಮಾರಿಗೆ ಲಾರಿಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ. ಡೀಸೆಲ್ ಖಾಲಿಯಾಗಿ ಲಾರಿಯನ್ನು ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ.

ಹೊಸ ವಾಹನಗಳಿಗೆ ದೀರ್ಘಾವಧಿ ವಿಮೆ: ಸೆ. 1ರಿಂದ ಜಾರಿಹೊಸ ವಾಹನಗಳಿಗೆ ದೀರ್ಘಾವಧಿ ವಿಮೆ: ಸೆ. 1ರಿಂದ ಜಾರಿ

Four dead in ambulance truck accident in Hosur

ಎಚ್1 ಎನ್‌1 ಜ್ವರದಿಂದ ಬಳಲುತ್ತಿದ್ದ ಇಬ್ಬರು ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು. ಇಬ್ಬರು ರೋಗಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಸ್ತೆ ಅಪಘಾತದಿಂದ ನೊಂದವರನ್ನು ನೆನಸಿಕೊಳ್ಳಲು ವಾಕಾಥಾನ್ರಸ್ತೆ ಅಪಘಾತದಿಂದ ನೊಂದವರನ್ನು ನೆನಸಿಕೊಳ್ಳಲು ವಾಕಾಥಾನ್

English summary
Four people killed in spot in a road accident near Hosur. Ambulance slammed into the back of an truck on Sunday, November 18, 2018 early morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X