ನಂದಿಬೆಟ್ಟಕ್ಕೆ ಹೋಗುತ್ತಿದ್ದ ಕಾರು ಭೀಕರ ಅಪಘಾತ: ನಾಲ್ವರ ಸಾವು
ದೇವನಹಳ್ಳಿ, ಆಗಸ್ಟ್ 24: ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ನಡೆದಿದೆ.
ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹಂದ್ರಹಳ್ಳಿ ಸಮೀಪ ಈ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಯುವಕರಾಗಿದ್ದಾರೆ. ಮೃತ ದುರ್ದೈವಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ನಕ್ಕಲಪಲ್ಲಿ ಗ್ರಾಮದ ರಮೇಶ್ (30), ಮಂಜುನಾಥ್ (26), ಅಶೋಕ್ ರೆಡ್ಡಿ (26) ಮತ್ತು ಗೌರೀಶ್ (23) ಎಂದು ಗುರುತಿಸಲಾಗಿದೆ.
ಒಂಬತ್ತು ಮಂದಿ ಗೆಳೆಯರು ಶನಿವಾರ ಬೆಳಿಗ್ಗೆ ಸೂರ್ಯೋದಯ ವೀಕ್ಷಿಸಲು ನಸುಕಿನಲ್ಲಿ ಹೊರಟಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಗಾಯಗೊಂಡ ಉಳಿದ ಐವರನ್ನು ಬೆಂಗಳೂರು ಮತ್ತು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಂದಿಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ವಿಪರೀತ ವಾಹನ ಸಂಚಾರ ಇರುತ್ತದೆ. ಅದರಲ್ಲಿಯೂ ವಾರಾಂತ್ಯದಲ್ಲಿ ಅಧಿಕ ಸಂಖ್ಯೆಯ ಪ್ರವಾಸಿಗರು ಅಲ್ಲಿಗೆ ಭೇಟಿ ನೀಡುತ್ತಾರೆ. ಕೆಲವರು ರಾತ್ರಿಯಿಡೀ ಅಲ್ಲಿನ ರೆಸಾರ್ಟ್ಗಳಲ್ಲಿ ಕಳೆಯಲು ತೆರಳಿದರೆ, ಹೆಚ್ಚಿನ ಪ್ರವಾಸಿಗರು ಸೂರ್ಯೋದಯ ವೇಳೆಗೆ ಅಲ್ಲಿ ಇರುವಂತೆ ನಸುಕಿನಲ್ಲಿ ಪ್ರಯಾಣಿಸುತ್ತಾರೆ. ಇಲ್ಲಿನ ಹೈವೇಗಳಲ್ಲಿ ವಾಹನಗಳು ಹೆಚ್ಚು ವೇಗವಾಗಿ ಚಲಿಸುತ್ತವೆ. ಚಾಲಕರೂ ನಿದ್ದೆಗೆಟ್ಟಿರುವುದರಿಂದ ದೇವನಹಳ್ಳಿ ಸುತ್ತಮುತ್ತ ಅಪಘಾತಗಳು ಹೆಚ್ಚು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications