ಪೊಲೀಸರಿಗೆ ಆಟ ಆಡಿಸುತ್ತಿದ್ದ ನಾಲ್ಕು ಪುಂಡರು ಕೊನೆಗೂ ಅಂದರ್!
ಬೆಂಗಳೂರು, ಮೇ. 31: ಅದು ಇನ್ನೂ ಮೀಸೆ ಚಿಗುರದ ವಯಸ್ಸಿನ ನಾಲ್ಕು ಹುಡುಗರ ಕಳ್ಳ ಗ್ಯಾಂಗ್. ಬೈಕ್ ಕಳ್ಳತನ ಹಾಗೂ ಸುಲಿಗೆ ಮಾಡುವ ಈ ಗ್ಯಾಂಗ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗುತ್ತಿದ್ದರು. ಮೂರು ಸಲ ಪೊಲೀಸರಿಗೆ ಟಾಂಗ್ ನೀಡಿದ್ದ ಕಳ್ಳರು ನಾಲ್ಕನೇ ಸಲ ಕೊರೊನಾ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ನಾಲ್ವರು ಕಳ್ಳರ ಕಳ್ಳತನ ಪ್ರಕರಣಗಳ ಚರಿತ್ರೆಯನ್ನು ಹನುಮಂತನಗರ ಠಾಣೆ ಪೊಲೀಸರು ಬಯಲಿಗೆ ಎಳೆದಿದ್ದಾರೆ.
ಮೊಹಮ್ಮದ್ ಯೂಸುಫ್(19), ಮೊಹಮ್ಮದ್ ತೌಸಿಫ್(19), ಶ್ರೀನಿವಾಸ್(22) ಹಾಗೂ ಸೈಯ್ಯದ್ ಸಾಹೇಬ(22) ಬಂಧಿತರು. ಚಾಕು ಹಾಗೂ ಡ್ರಾಗರ್ ತೋರಿಸಿ ಮೊಬೈಲ್ ಹಾಗೂ ಬೈಕ್ ಕದಿಯುತ್ತಿದ್ದರು. ಮೇ. 25 ರಂದು ಬೆಳಗಿನ ಜಾವ ಹನುಮಂತನಗರದಲ್ಲಿ ಶಬರೀಶ್ ಎಂಬುವವರಿಗೆ ಚಾಕು ತೋರಿಸಿ ಬೈಕ್ ಕದ್ದಿದ್ದರು.
ಬಂಧಿತ ಆರೋಪಿಗಳಿಂದ ಮೈಸೂರಿನಲ್ಲಿ ಸುಲಿಗೆ ಹಾಗೂ ಬ್ಯಾಟರಾಯನಪುರದಲ್ಲಿ ಕಳವು ಪ್ರಕರಣ ಪತ್ತೆಯಾಗಿವೆ. ಇದರ ಜತೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಡಿದ್ದ ಸುಲಿಗೆ ಪ್ರಕರಣವೂ ಪತ್ತೆ ಮಾಡಿದಂತಾಗಿದೆ. ಮೇ. 26 ರಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಸಂಬಂಧ ವಾಹನ ತಪಾಸಣೆ ನಡೆಸುತ್ತಿದ್ದರು.

Recommended Video
ಮಾರುತಿ 800 ಕಾರ್ನಲ್ಲಿ ಬಂದಿದ್ದ ಕಳ್ಳರು ಪೊಲೀಸರನ್ನು ನೋಡಿ ತಪ್ಪಿಸಿ ಕೊಂಡು ಪರಾರಿಯಾಗಿದ್ದರು. ಕಾರನ್ನು ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದರು. ಅರೋಪಿಗಳನ್ನು ಬೆನ್ನತ್ತಿ ಹಿಡಿದಾಗ ಸುಲಿಗೆ ಹಾಗೂ ಕಳವು ಪ್ರಕರಣ ಪತ್ತೆಯಾಗಿದ್ದು, ಬಂಧಿತರಿಂದ 5.30 ಲಕ್ಷ ರೂ. ಬೆಲೆ ಬಾಳುವ ಮಾರುತಿ ಕಾರು, ಬೈಕ್ ವಶಪಡಿಸಿಕೊಳ್ಳಲಾಗಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications