ಕೊವೀಡ್ ಬೂಸ್ಟರ್ ಡೋಸ್ ಪಡೆದವರಿಗೆ ನಾಲ್ಕನೇ ಡೋಸ್ ಅಗತ್ಯವಿಲ್ಲ: ಜಯದೇವ ಸಂಸ್ಥೆ ಅಧ್ಯಯನ
ಬೆಂಗಳೂರು, ಜ.11: ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದವರು ಲಸಿಕೆಯ ನಾಲ್ಕನೇ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಅಧ್ಯಯನ ವರದಿ ನೀಡಿದೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಬೂಸ್ಟರ್ ಡೋಸ್ ಪಡೆದ 350 ಆರೋಗ್ಯ ಕಾರ್ಯಕರ್ತರ ಮೇಲೆ ಪ್ರಯೋಗ ನಡೆಸಿದ್ದು, ರೋಗನಿರೋಧಕ ಸ್ಥಿತಿಯನ್ನು ಹೆಚ್ಚಿಸುವ ಪ್ರತಿಕಾಯಗಳ ಗಮನಾರ್ಹವಾಗಿ ವೃದ್ಧಿಯಾಗಿದೆ ಎಂದು ವರದಿ ನೀಡಿದೆ. ಈ ಹಿನ್ನೆಲೆ ಬೂಸ್ಟರ್ ಡೋಸ್ ಪಡೆದವರು ಕೊರೊನಾ ಲಸಿಕೆಯ ನಾಲ್ಕನೇ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಅಧ್ಯಯನವು ತೀರ್ಮಾನಿಸಿದೆ.
ಈ 350 ಮಂದಿಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರು, ನರ್ಸ್ಗಳು, ತಂತ್ರಜ್ಞರು, ವಾರ್ಡ್ ಸಹಾಯಕರು ಮತ್ತು ಇತರ ಕಚೇರಿ ಸಿಬ್ಬಂದಿ ಸೇರಿದ್ದಾರೆ.

19 ರಿಂದ 60 ವರ್ಷಗಳ ನಡುವಿನ ಎಲ್ಲಾ ವಯಸ್ಕರಲ್ಲೂ ಅಂದರೆ 148 ಪುರುಷರು ಮತ್ತು 202 ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿಯಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ ಎಂದು ತೋರಿಸಿದೆ ಎಂದು ಅಧ್ಯಯನವು ತಿಳಿಸಿದೆ.
ಬೆಂಗಳೂರು ಕೇಂದ್ರ ಕಛೇರಿಯ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಮಾತನಾಡಿ, ಈ 19 ರಿಂದ 60 ವರ್ಷಗಳ ನಡುವಿನ ಎಲ್ಲರಲ್ಲೂ ಬೂಸ್ಟರ್ ಡೋಸ್ ಪಡೆದ 12 ತಿಂಗಳ ನಂತರವೂ ರೋಗನಿರೋಧಕ ಶಕ್ತಿಯು ಉತ್ತಮವಾಗಿದೆ ಎಂದಿದ್ದಾರೆ.
"ವಿಶ್ವದ ಕೆಲವು ಭಾಗಗಳಲ್ಲಿ ಒಮಿಕ್ರಾನ್ನ ಬಿಎಫ್ 7 ಮತ್ತು ಎಕ್ಸ್ಬಿಬಿಯ ಹೊಸ ರೂಪಾಂತರಗಳು ಕಾಣಿಸಿಕೊಂಡಿದ್ದು, ಹೊಸ ಕೊರೊನಾ ಸಾಂಕ್ರಾಮಿಕದ ಆತಂಕ ಎದುರಾಗಿದೆ. ಹೀಗಾಗಿ ಆರೋಗ್ಯ ಸಂಪನ್ಮೂಲಗಳು, ಮಾನವಶಕ್ತಿ ಮತ್ತು ಮೂಲಸೌಕರ್ಯಗಳ ವಿಷಯದಲ್ಲಿ ನಮ್ಮ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಇದರಿಂದ ಸಾರ್ವಜನಿಕ ಆರೋಗ್ಯ ನೀತಿಗಳನ್ನು ನಮ್ಮ ಜನಸಂಖ್ಯೆಗೆ ತಕ್ಕಂತೆ ರೂಪಿಸಬಹುದು" ಎಂದಿದ್ದಾರೆ.

ಮುಂದುವರಿದು "ಅನೇಕ ಆರೋಗ್ಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಮಾನ್ಯವಾಗಿ ಎರಡನೇ ಬೂಸ್ಟರ್ ಅಥವಾ ನಾಲ್ಕನೇ ಡೋಸ್ ಲಸಿಕೆ ತೆಗೆದುಕೊಳ್ಳಬೇಕೇ ಎಂದು ಪದೇ ಪದೇ ಕೇಳುತ್ತಿದ್ದರು. ಈ ಹಿನ್ನೆಲೆ ನಡೆದ ಅಧ್ಯಯನದಲ್ಲಿ 99.4 ಪ್ರತಿಶತದಷ್ಟು ಆರೋಗ್ಯ ಕಾರ್ಯಕರ್ತರ ರೋಗನಿರೋಧಕ ಶಕ್ತಿಯಲ್ಲಿ ಗಮನಾರ್ಹ ಬದಲಾವಣೆಗಳಾಗಿರುವುದು ಕಂಡು ಬಂದಿದೆ. ಹೀಗಾಗಿ ನಾಲ್ಕನೇ ಡೋಸ್ ಲಸಿಕೆ ಅಗತ್ಯವಿಲ್ಲ ಎಂಬ ಅಂಶವನ್ನು ಈ ಅಧ್ಯಯನವು ತಿಳಿಸುತ್ತದೆ. ಆದರೆ, ಬೂಸ್ಟರ್ ಡೋಸ್ ತೆಗೆದುಕೊಳ್ಳದವರು ಅದನ್ನು ತೆಗೆದುಕೊಳ್ಳಬೇಕು ಎಂದು ಅಧ್ಯಯನ ಮತ್ತಷ್ಟು ಒತ್ತಿಹೇಳುತ್ತದೆ" ಎಂದು ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications