Foxconn: ಬೆಂಗಳೂರಿನ ದೇವನಹಳ್ಳಿಯಲ್ಲಿ ಐಫೋನ್ ಉತ್ಪಾದನೆ ಆರಂಭಕ್ಕೆ ದಿನಾಂಕ ಫೀಕ್ಸ್: ಎಂಬಿಪಾ
ಬೆಂಗಳೂರು, ಮೇ 31: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸಲಿದೆ. ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಮಾಹಿತಿ ನೀಡಿದರು.
ಕಂಪನಿಯ ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡವು ಸೌಜನ್ಯದ ಭೇಟಿ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ITIR) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮೊದಲೇ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದರು.
ಕಂಪನಿಯು ದಿನಕ್ಕೆ 50ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ. ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ.
ಕೌಶಲ್ಯಗಳ ತರಬೇತಿಗೆ ಕಂಪನಿ ಆದ್ಯತೆ
ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ್ಯದ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ದೊರಕುವಂತೆ ಮಾಡಲು ಕಂಪನಿ ಆದ್ಯತೆ ಕೊಡುವುದಾಗಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಪಾವತಿ ಮಾಡಿದೆ.
ಇದಕ್ಕೂ ಮುನ್ನ ಜುಬಿಲಿಯಂಟ್ ಫುಡ್ ವರ್ಕ್ಸ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್ ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್ ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕೈಗಾರಿಕಾ ಸಚಿವರೊಂದಿಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಹಾಗೂ ಕಂಪನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಉಪಸ್ಥಿತರಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications