ಬೆಂಗಳೂರು ಬಳಿ ಐಫೋನ್ ತಯಾರಿಕಾ ಕಂಪನಿಗೆ ಭೂಮಿ ನೀಡಿದ ಸರ್ಕಾರ- ಎಲ್ಲಿ? ಎಷ್ಟು ಸಾವಿರ ಉದ್ಯೋಗ ಸೃಷ್ಟಿ? ತಿಳಿಯಿರಿ
ಬೆಂಗಳೂರು, ಜುಲೈ 11: ಬೆಂಗಳೂರಿನ ಬಳಿ ಐಫೋನ್ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರವು ಫಾಕ್ಸ್ಕಾನ್ ಕಂಪನಿಗೆ ಭೂಮಿಯನ್ನು ಹಸ್ತಾಂತರಿಸಿದೆ. ತೈವಾನ್ ಮೂಲಕ ಎಲೆಕ್ಟ್ರಾನಿಕ್ ತಯಾರಕ ಕಂಪನಿಯು ಇದೇ ತಿಂಗಳು ಘಟಕವನ್ನು ನಿರ್ಮಿಸುವ ಕಾರ್ಯವನ್ನು ಆರಂಭಿಸಲಿದೆ ಎಂದು ತಿಳಿದುಬಂದಿದೆ.
ಇದೇ ಸಂಸ್ಥೆಯಿಂದ ಹೂಡಿಕೆಯನ್ನು ಆಕರ್ಷಿಸಲು ನೆರೆಯ ತೆಲಂಗಾಣದಿಂದ ತೀವ್ರವಾದ ಲಾಬಿ ನಡೆದಿದೆ. ಇದರ ನಡುವೆಯೇ ಫಾಕ್ಸ್ಕಾನ್ ಕಂಪನಿಗೆ ಸರ್ಕಾರ ಜಾಗ ನೀಡಿರುವುದು ಉದ್ಯೋಗ ಆಕಾಂಕ್ಷಿಗಳ ಭರವಸೆಯನ್ನು ಹೆಚ್ಚಿಸದೆ.
ರಾಜ್ಯದಲ್ಲಿ ಐಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸಲು 968 ಮಿಲಿಯನ್ ಡಾಲರ್ಗಳನ್ನು ಹೂಡಿಕೆ ಮಾಡುವುದಾಗಿ ಮಾರ್ಚ್ನಲ್ಲಿ ಫಾಕ್ಸ್ಕಾನ್ ಘೋಷಿಸಿತ್ತು.

ತೈವಾನ್ ಮೂಲಕ ಕಂಪನಿಯು ಗುಜರಾತ್ನಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಹಿಂದೆ ಸರಿದಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಭೂಮಿ ತೆಗೆದುಕೊಂಡಿರುವುದು ಆಶಾದಾಯಕವಾಗಿದೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಹರ್ಷ ವ್ಯಕ್ತಪಡಿಸಿದೆ.
ಕರ್ನಾಟಕದಲ್ಲಿ ಯೋಜನೆಗಾಗಿ ಫಾಕ್ಸ್ಕಾನ್ ಈಗಾಗಲೇ ಭೂಮಿಯನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣ 'ಇಂಡಿಯನ್ ಎಕ್ಸ್ಪ್ರೆಸ್' ಪತ್ರಿಕೆಗೆ ತಿಳಿಸಿದ್ದಾರೆ.
'ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶದಲ್ಲಿನ ಭೂಮಿಯನ್ನು ಹಸ್ತಾರಿಸಲಾಗಿದೆ. 300 ಎಕರೆ ಪ್ರದೇಶದಲ್ಲಿ ಅವರ ಫೋನ್ ಉತ್ಪಾದನಾ ಘಟಕವು ಬರಲಿದೆ' ಎಂದು ಅವರು ಹೇಳಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು, 'ಏಪ್ರಿಲ್ 2024 ರಿಂದ ಫಾಕ್ಸ್ಕಾನ್ ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ. ಬೆಂಗಳೂರಿನ ಸ್ಥಾವರದಲ್ಲಿ ಐಫೋನ್ಗಳ ಉತ್ಪಾದನೆಯನ್ನು ಪ್ರಾರಂಭಿಸಲಿದೆ' ಎಂದು ಹೇಳಿದ್ದಾರೆ.
ಜುಲೈ 1 ರೊಳಗೆ ಭೂಮಿಯನ್ನು ಹಸ್ತಾಂತರಿಸುವುದಾಗಿ ಘೋಷಿಸಿದ್ದಲ್ಲದೆ, ರಾಜ್ಯ ಸರ್ಕಾರವು 5 ಕನಿಷ್ಠ ಲಿಕ್ವಿಡ್ ಡಿಸ್ಚಾರ್ಜ್ಗಳನ್ನು ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ. ನೀರು, ವಿದ್ಯುತ್ ಸರಬರಾಜು, ರಸ್ತೆ ಸಂಪರ್ಕ ಮತ್ತು ಇತರ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪಾಟೀಲ್ ತಿಳಿಸಿದರು.
ಈ ಯೋಜನೆಗೆ 8, 000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗುತ್ತಿದೆ. ಇದು 50, 000 ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications