ಜಡ್ಜ್ ಮುಂದೆ ತಪ್ಪೊಪ್ಪಿಕೊಂಡ 'ಸೃಷ್ಟಿ' ಗುರುಮೂರ್ತಿ
ಬೆಂಗಳೂರು, ಅ.12: ಬಂಜೆತನ ನಿವಾರಿಸುವುದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಮತ್ತು ಬಾಡಿಗೆ ತಾಯಿಯಿಂದ ಪಡೆದ ಮಗುವನ್ನು ಅದಲು ಬದಲು ಮಾಡಿರುವ ಆರೋಪ ಹೊತ್ತಿರುವ ಸ್ತ್ರೀರೋಗ ತಜ್ಞ ಕೆ.ಟಿ ಗುರುಮೂರ್ತಿ ತನ್ನ ತಪ್ಪೊಪ್ಪಿಕೊಂಡಿದ್ದಾನೆ.7ನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಅವರ ಮುಂದೆ ಆರೋಪಿ ಗುರುಮೂರ್ತಿಯನ್ನು ಭಾನುವಾರ ಮಗುವಿನ ಗೊಂದಲದ ಕಥೆ ವಿವರಿಸಿದ್ದಾನೆ. ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಒಂದು ವಾರಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಬಸವಶ್ವೇರನಗರದ ಹಾವನೂರು ಸರ್ಕಲ್ ಬಳಿ ಇರುವ ಸೃಷ್ಟಿ ಗ್ಲೋಬಲ್ ಮೆಡಿಕೇರ್ ಅಂಡ್ ರಿಸರ್ಚ್ ಫೌಂಡೇಶನ್ನ ಸಂಸ್ಥಾಪಕ ಕೆ.ಟಿ.ಗುರುಮೂರ್ತಿ ಈ ಹಿಂದೆ ಕೂಡಾ ಇಂಥದ್ದೇ ವಂಚನೆ ಆರೋಪದ ಮೇಲೆ ನಂದಿನಿ ಲೇಔಟ್ ಪೊಲೀಸರಿಂದ ಬಂಧಿತನಾಗಿದ್ದ.ಈಗ ಡಾನ್ ಬಾಸ್ಕೋ ಹಾಗೂ ಸರಳಾ ದೇವಿ ದಂಪತಿಗೆ ಮೋಸ ಮಾಡಿದ ಆರೋಪದ ಮೇಲೆ ಬಂಧಿತನಾಗಿ ವಿಚಾರಣೆ ಎದುರಿಸುತ್ತಿದ್ದಾನೆ. [ಬಂಜೆತನ ನಿವಾರಕ 'ನಕಲಿ' ವೈದ್ಯ ಗುರುಮೂರ್ತಿ]
ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯಲು ಸಹಕಾರ ನೀಡುವುದಾಗಿ ಡಾನ್ ಬಾಸ್ಕೋ ಹಾಗೂ ಸರಳಾದೇವಿ ಅವರಿಗೆ ನಂಬಿಸಿದ್ದಾನೆ. ಇದಕ್ಕಾಗಿ ಮುಂಗಡ ಹಣ ರೂಪದಲ್ಲಿ 3.50 ಲಕ್ಷ ಪಡೆದಿದ್ದಾನೆ. ನಂತರ ಡಾನ್ ಬಾಸ್ಕೋ ಅವರ ವೀರ್ಯ ಸಂಗ್ರಹಿಸಲಾಗಿದೆ. ವೀರ್ಯ ಶಕ್ತಿಯುತವಾಗಿದ್ದು, ನಿಮ್ಮ ವೀರ್ಯವನ್ನು ಬಾಡಿಗೆ ತಾಯಿ ಗರ್ಭಕ್ಕೆ ಸೇರಿಸಲಾಗುವುದು ಈ ಬಗ್ಗೆ ನಿಮಗೆ ಕಾಲ ಕಾಲಕ್ಕೆ ಮಾಹಿತಿ ನೀಡುತ್ತೇವೆ ಎಂದು ಗುರುಮೂರ್ತಿ ಹೇಳಿದ್ದಾನೆ.

ಮದುವೆಯಾಗಿ ಎಂಟು ವರ್ಷವಾದರೂ ಮಕ್ಕಳ ಭಾಗ್ಯ ಕಾಣದ ಮೂಡಲಪಾಳ್ಯ ಬಳಿಯ ಸಂಜೀವಿನಿನಗರದ ಬಾಸ್ಕೊ ದಂಪತಿಗೆ ಗುರುಮೂರ್ತಿ ಮೇಲೆ ನಂಬಿಕೆ ಹುಟ್ಟಿದೆ. ಬಾಸ್ಕೋ ಅವರ ವೀರ್ಯ ಪಡೆದ ಏಳು ತಿಂಗಳ ನಂತರ ನಿಮಗೆ ಹೆಣ್ಣು ಮಗು ಹುಟ್ಟಿದೆ ಎಂದು ಸೃಷ್ಟಿ ಗ್ಲೋಬಲ್ ಆಸ್ಪತ್ರೆಯಿಂದ ಕರೆ ಬಂದಿದೆ. [ಗುರುಮೂರ್ತಿ ಹಳೆ ಕೇಸ್ ಡೀಟೈಲ್ಸ್]
ಏಳೇ ತಿಂಗಳಿಗೆ ಮಗು ಹೇಗೆ ಹುಟ್ಟಲು ಸಾಧ್ಯ ಅವಧಿಗೆ ಮುನ್ನ ಹುಟ್ಟಿದ ಮಗು ಏಕೆ ಎಂದು ಪ್ರಶ್ನಿಸಿದ ಬಾಸ್ಕೋ ಅವರನ್ನು ಗುರುಮೂರ್ತಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅದರೆ, ಕಳೆದ ನಾಲ್ಕು ವರ್ಷಗಳಲ್ಲಿ ಮಗುವಿನಲ್ಲಿ ಬೆಳವಣಿಗೆ ಕುಂಠಿತವಾಗುತ್ತಿರುವುದು ಬಾಸ್ಕೊ ದಂಪತಿಗೆ ಆತಂಕ ತಂದಿದೆ. ಮಗುವಿನ ಆರೋಗ್ಯದ ಏರುಪೇರು, ಬೆಳವಣಿಗೆ ಕುಂಠಿತಗೊಂಡಿರುವ ಬಗ್ಗೆ ಗುರುಮೂರ್ತಿಯನ್ನು ಪ್ರಶ್ನಿಸಿದ ಬಾಸ್ಕೋಗೆ ಬೆದರಿಕೆ ಒಡ್ಡಲಾಗಿದೆ. ಮಗುವಿನ ಬಗ್ಗೆ ಕೊರಗಿ ಕೊರಗಿ ಸರಳಾದೇವಿ ಅವರು ಇತ್ತೀಚೆಗೆ ನಿಧನರಾಗಿದ್ದಾರೆ.
ಬಾಸ್ಕೊ ಅವರಿಗೆ ಇದು ತನ್ನ ವೀರ್ಯದಿಂದ ಜನಿಸಿದ ಮಗು ಎಂಬುದರ ಬಗ್ಗೆ ಮೊದಲಿನಿಂದಲೂ ಅನುಮಾನ ಇದ್ದೇ ಇತ್ತು. ಮಗುವಿನ ನಿಜವಾದ ತಂದೆ ಯಾರು ಎಂದು ತಿಳಿಯಲು ನಿರ್ಧರಿಸುತ್ತಾರೆ. ಈ ಕಾರಣಕ್ಕಾಗಿ ಅವರು ಸೆಪ್ಟೆಂಬರ್ನಲ್ಲಿ ಹೈದರಾಬಾದ್ನ ಪ್ರಯೋಗಾಲಯವೊಂದರಲ್ಲಿ ತಮ್ಮ ಹಾಗೂ ಮಗುವಿನ ಡಿಎನ್ಎ ಪರೀಕ್ಷೆ ಮಾಡಿಸಿದ್ದರು. ಡಿಎನ್ಎ ಪರೀಕ್ಷೆಯಲ್ಲಿ ಬಾಸ್ಕೊ ಅವರು ಮಗುವಿನ ನಿಜವಾದ ತಂದೆಯಲ್ಲ ಎಂಬ ಸಂಗತಿ ಬಹಿರಂಗವಾಗಿತ್ತು
ಪೊಲೀಸರಿಗೆ ಇತ್ತೀಚೆಗೆ ದೂರು ನೀಡಿದ್ದರು. ಆ ದೂರಿನ ಅನ್ವಯ ಗುರುಮೂರ್ತಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಮಕ್ಕಳ ಅಪಹರಣ ಮತ್ತು ಮಾರಾಟ, ವಂಚನೆ, ಶಾಂತಿ ಕದಡುವ ಉದ್ದೇಶದಿಂದ ನಿಂದನೆ ಹಾಗೂ ಅಪರಾಧ ಸಂಚು ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications