ಇನ್ಸ್ ಪೆಕ್ಟರ್ ರಫೀಕ್ ಬೆಳಗ್ಗೆ ಅರೆಸ್ಟ್, ಸಂಜೆಗೆ ರಿಲೀಸ್
ಬೆಂಗಳೂರು, ಜು. 18: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಂಧಿತರಾಗಿದ್ದ ಪುಲಿಕೇಶಿನಗರ ಇನ್ಸ್ ಪೆಕ್ಟರ್ ಮಹಮ್ಮದ್ ರಫೀಕ್ ಅವರು ಸಂಜೆ ವೇಳೆಗೆ ರಿಲೀಸ್ ಆಗಿದ್ದಾರೆ. ಇತ್ತೀಚೆಗೆ ಫ್ರೇಜರ್ಟೌನ್ ಬಳಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಸರಿಯಾದ ರೀತಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳದೆ ಕರ್ತವ್ಯ ಲೋಪ ಎಸಗಿದ ಆರೋಪವನ್ನು ರಫೀಕ್ ಎದುರಿಸುತ್ತಿದ್ದಾರೆ.
ಇದೀಗ ಬಂದಿರುವ ಸುದ್ದಿ: ಇನ್ಸ್ ಪೆಕ್ಟರ್ ರಫೀಕ್ ಅವರನ್ನು ಬಂಧಿಸಿದ ಮೇಲೆ ಸುಮಾರು ಎರಡೂವರೆ ಗಂಟೆಗಳ ಕಾಲ ಹಲಸೂರು ಠಾಣೆ ಎಸಿಪಿ ಮಂಜುನಾಥ್ ಅವರು ವಿಚಾರಣೆ ನಡೆಸಿದ್ದರು. ನಂತರ ರಫೀಕ್ ಅವರಿಗೆ ಸ್ಟೇಷನ್ ಜಾಮೀನು ನೀಡಲಾಯಿತು. ವಿಚಾರಣೆಗೆ ಕರೆದಾಗ ಕೂಡಲೇ ಬರಬೇಕು. ಪ್ರತಿದಿನ ಸ್ಟೇಷನ್ ಗೆ ಬಂದು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ರಫೀಕ್ ರನ್ನು ಬಿಡುಗಡೆ ಮಾಡಲಾಗಿದೆ.
ಫ್ರೇಜರ್ಟೌನ್ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪುಲಿಕೇಶಿನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಹ್ಮದ್ ರಫೀಕ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಫ್ ಐಆರ್ ಹಾಕುವಂತೆ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರ ಆದೇಶಿಸಿದ್ದರು. ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 166(ಎ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. [ಇನ್ಸ್ ಪೆಕ್ಟರ್ ಮೇಲೆ ಎಫ್ಐಆರ್]

ಅದರಂತೆ ರಫೀಕ್ ಅವರ ಪತ್ತೆಗೆ ಹಲಸೂರು ಠಾಣೆ ಎಸಿಪಿಯೊಬ್ಬರಿಗೆ ಜವಾಬ್ದಾರಿ ವಹಿಸಲಾಗಿತ್ತು. ಇಂದು ಬೆಳಗ್ಗೆ ರಫೀಕ್ ಅವರನ್ನು ಪತ್ತೆಹಚ್ಚಿ ಆಯುಕ್ತರ ಮುಂದೆ ಹಾಜರು ಪಡಿಸಲಾಗಿದೆ ಎಂದು ಡಿಸಿಪಿ ಸತೀಶ್ಕುಮಾರ್ ಅವರು ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪುಲಿಕೇಶಿನಗರ(ಈ ಹಿಂದಿನ ಫ್ರೇಜರ್ ಟೌನ್) ಠಾಣಾಧಿಕಾರಿಗಳು ಹಾಗೂ ಹಲಸೂರು ಠಾಣೆ ಎಸಿಪಿ ಅವರು ನಾಪತ್ತೆಯಾಗಿರುವ ಇಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ಡಿಸಿಪಿ ಸತೀಶ್ ಹೇಳಿದರು.
22 ವರ್ಷದ ಯುವತಿ ನ್ಯಾಯಕೋರಿ ಠಾಣೆಗೆ ಬಂದಾಗ ಐಪಿಸಿ ಸೆಕ್ಷನ್ 376(ರೇಪ್) ಬದಲಾಗಿ ಐಪಿಸಿ ಸೆಕ್ಷನ್ 364 ಎ(ಕಿಡ್ನಾಪ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ರಫೀಕ್ ಅವರು ಈಗ ಬಂಧಿತರಾಗಿದ್ದಾರೆ. ಈ ರೀತಿ ಪ್ರಕರಣವನ್ನು ಬೇರೆ ಸೆಕ್ಷನ್ ನಲ್ಲಿ ದಾಖಲಿಸುವಂತೆ ಯಾರು ಒತ್ತಡ ಹೇರಿದ್ದರು ಎಂಬುದು ವಿಚಾರಣೆ ಬಳಿಕ ತಿಳಿಯುವ ಸಾಧ್ಯತೆಯಿದೆ.
Protesting inaction and failure of Govt, BJP Karnataka twitter & Facebook logo's will remain black for next 48 hours. Pls RT & Support.
— BJP Karnataka (@bjpkarnataka) July 18, 2014 ಆರೋಪಿಗಳಿಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇರುವುದು ಈಗಾಗಲೇ ಎಲ್ಲರಿಗೂ ತಿಳಿದ ಸತ್ಯವಾಗಿದ್ದು, ಈ ಬಗ್ಗೆ ಸದನದಲ್ಲೂ ಚರ್ಚೆ ನಡೆದಿತ್ತು. ಬಿಜೆಪಿ ಇನ್ನೂ 48 ಗಂಟೆಗಳಲ್ಲಿ ಗೃಹ ಸಚಿವ ಕೆಜೆ ಜಾರ್ಜ್ ಅವರು ರಾಜೀನಾಮೆ ನೀಡಬೇಕು ಎಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲ ತಾಣ ಖಾತೆಗಳಿಗೂ ಕಪ್ಪು ಪಟ್ಟಿ ಹಾಕಿ ಹೋರಾಟ ಮುಂದುವರೆಸಲಾಗಿದೆ.[ದೂರು ವಾಪಸ್ ಪಡೆ ಇಲ್ಲಾಂದ್ರೆ ಅಷ್ಟೇ..!]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications