ಸಾರಿಗೆ ಇಲಾಖೆ: ಮಹಿಳೆಯರಿಗೆ ಲಘುವಾಹನ ತರಬೇತಿ
ಬೆಂಗಳೂರು, ಫೆಬ್ರವರಿ 27 : ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಸಾರಿಗೆ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಲಘು ವಾಹನ ತರಬೇತಿಯನ್ನು ಆರಂಭಿಸಿದೆ ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಧಾರವಾಡದ ವಾಹನ ತರಬೇತಿ ಕೇಂದ್ರದಲ್ಲಿ 50 ಮಂದಿಯಂತೆ ಒಟ್ಟು 100 ಮಂದಿಗೆ 30 ದಿನಗಳ ಕಾಲ ಮಹಿಳೆಯರಿಗೆ ಲಘು ವಾಹನ ಚಾಲನಾ ತರಬೇತಿ ನೀಡಲಾಗುವುದು. ತರಬೇತಿ ನಂತರ ಚಾಲನಾ ಪರವಾನಗಿಯನ್ನೂ ಕೂಡ ವಿತರಿಸಲಾಗುವುದು. ಇದರಿಂದ ಪ್ರತಿಯೊಬ್ಬರಿಗೂ 19 ಸಾವಿರ ರೂ ವೆಚ್ಚವಾಗಲಿದೆ.
ಈಗಾಗಲೇ ಸರ್ಕಾರ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಲು 18.90 ಲಕ್ಷ ರೂ ನೀಡಿದೆ. ಲಘು ವಾಹನ ಚಾಲನಾ ತರಬೇತಿಗೆ ಮಹಿಳೆಯರಿಂದ ಸಿಗುವ ಸ್ಪಂದನೆ ಆಧರಿಸಿ ಭಾರಿ ವಾಹನಗಳ ಚಾಲನೆ ತರಬೇತಿ ವಿಸ್ತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಸ್ಸಿ, ಎಸ್ಟಿ ನಿರುದ್ಯೋಗಿಗಳಿಗೆ ಭಾರೀ ವಾಹನ ಚಾಲನಾ ತರಬೇತಿ ನೀಡಲಾಗುವುದು. ಒಟ್ಟು 200 ಮಂದಿಗೆ ತರಬೇತಿ ನೀಡಲಾಗುತ್ತದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಮೂಲಕ 15 ಲಕ್ಷದವರೆಗೂ ವಾಹನಖರೀದಿಗೆ ಸಾಲ ನೀಡಲಾಗುತ್ತದೆ. ಇದಕ್ಕಾಗಿ ಎರಡೂವರೆ ಕೋಟಿ ಒದಗಿಸಲಾಗಿದೆ.
ಭಾರೀ ಶಬ್ದ ಮಾಡುವ ವಾಹನಗಳ ಹಾರನ್ ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡು ಕಾನೂನು ರೀತಿ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications