ಬೆಂಗಳೂರಿನಲ್ಲಿ ಜು.17ರಂದು ಬೃಹತ್ ಉಚಿತ ಆರೋಗ್ಯ ಶಿಬಿರ
ಬೆಂಗಳೂರು, ಜುಲೈ 16 : ವಾಸವಿ ಕ್ಲಬ್ಸ್ ಇಂಟರ್ನ್ಯಾಷನಲ್ (ಜಿಲ್ಲೆ -ವಿ 301ಎ) ವತಿಯಿಂದ 3ನೇ ಬಾರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಂಗಳೂರಿನಲ್ಲಿ ಜುಲೈ 17ರಂದು ಭಾನುವಾರ ಆಯೋಜಿಸಲಾಗಿದೆ.
ಭಾನುವಾರ ಜುಲೈ 17ರಂದು ನಡೆಯುವ ಆರೋಗ್ಯ ಶಿಬಿರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಉದ್ಘಾಟಿಸಲಿದ್ದು, ಮಾಜಿ ಗೃಹ ಸಚಿವ ಪಿಜಿಆರ್ ಸಿಂಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಿಮ್ಸ್ ಹಾಸ್ಪಿಟಲ್, ವಿಎಸ್ ಡೆಂಟಲ್ ಕೇರ್, ಒಕ್ಕಲಿಗರ ಸಂಘ ಡೆಂಟಲ್ ಕಾಲೇಜು ಮತ್ತು ಅಪೊಲೋ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ಈ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಇದೇ ಮೊದಲ ಬಾರಿಗೆ ತಜ್ಞ ವೈದ್ಯರು ವಿವಿಧ ರೀತಿಯ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. [ನಿಯಮಿತ ಯೋಗ ಮಹಿಳೆಯ ಸೌಂದರ್ಯಕ್ಕೆ ರಾಮಬಾಣ]

ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ, ಬಿಪಿ, ಇಸಿಜಿ, ಎಕೋ, ಶುಗರ್ ಟೆಸ್ಟ್, ಆರ್ಥೋಪೆಡಿಕ್ಸ್, ನರರೋಗ ತಪಾಸಣೆ, ಥೈರಾಯಿಡ್, ಸ್ತ್ರೀರೋಗ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ; ದಂತ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ತಜ್ಞವೈದ್ಯರು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.
ಈ ಬಾರಿಯ ಶಿಬಿರದಲ್ಲಿ ದಂತ ತಪಾಸಣೆಗಾಗಿಯೇ 2 ಕೋಟಿ ರು. ಮೌಲ್ಯದ ಸರ್ಜಿಕಲ್ ವಿಶೇಷ ಬಸ್ ಆಗಮಿಸಲಿದೆ. ದಂತ ತಪಾಸಣೆ, ಚಿಕಿತ್ಸೆ ಸೇರಿದಂತೆ ಹಲವು ಆಧುನಿಕ ಚಿಕಿತ್ಸಾ ಸೌಲಭ್ಯಗಳು ಈ ಬಸ್ನಲ್ಲಿರುವುದು ವಿಶೇಷ. [ರಕ್ತದೊತ್ತಡ ಮಿದುಳಿಗೆ ಕೊಡಲಿ ಪೆಟ್ಟು ನೀಡೀತು, ಹುಷಾರ್!]
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ, ಇದರ ಲಾಭ ಪಡೆಯಬಹುದು ಎಂದು ರಜತಾ ಡೆವಲಪರ್ಸ್ ಅಧ್ಯಕ್ಷ ವಿಎನ್. ಕೆಸಿಜಿಎಫ್ ಭೂಪಾಳಂ ಸುನಿಲ್ ಹೇಳಿದ್ದಾರೆ. ಜತೆಗೆ ಕಣ್ಣಿನ ಪೊರೆ ಇದ್ದವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸಾ ಸೌಲಭ್ಯವನ್ನೂ ಕಲ್ಪಿಸಲಾಗುವುದು ಎಂದೂ ಅವರು ತಿಳಿಸಿದರು. [ಮಲೇರಿಯಾ ಬಗ್ಗೆ ತಿಳಿಯಲೇಬೇಕಾದ 10 ಸಂಗತಿಗಳು]
ದಿನಾಂಕ : 17 ಜುಲೈ, 2016, ಭಾನುವಾರ
ಸಮಯ : ಬೆಳಗ್ಗೆ 9 ಗಂಟೆಯಿಂದ
ಸ್ಥಳ : ಆದಿಲಕ್ಷ್ಮಮ್ಮ ಕನ್ವೆನ್ಷನ್ ಹಾಲ್, ವಾಸವಿ ದೇವಸ್ಥಾನದ ಎದುರು, ವಿವಿಪುರಂ, ಬೆಂಗಳೂರು.
-
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications