ಯುವತಿಯರಿಗೆ ಉಚಿತವಾಗಿ ಐಎಎಸ್ ಕೋಚಿಂಗ್ ಯೋಜನೆಗೆ ಚಾಲನೆ
ಬೆಂಗಳೂರು ಏಪ್ರಿಲ್ 11: ರಾಜ್ಯದ ಗ್ರಾಮೀಣ ಪ್ರದೇಶದ 20 ಯುವತಿಯರಿಗೆ ಉಚಿತವಾಗಿ ಐಎಎಸ್ ಕೋಚಿಂಗ್ ನೀಡುವ ದ ಐಎಎಸ್ ಹಬ್ನ ನೂತನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.
ದೇಶದಲ್ಲೇ ಸಿವಿಲ್ ಸರ್ವೀಸ್ ಪರೀಕ್ಷೆಗಳಿಗೆ ಅತ್ಯುತ್ತಮ ಗುಣಮಟ್ಟದ ತರಬೇತಿಯನ್ನು ನೀಡಲಾಗುವ ದ ಐಎಎಸ್ ಹಬ್ ನ ಬೆಂಗಳೂರು ಶಾಖೆಗೆ ಇಂದು ಪಶು ವೈದ್ಯಕೀಯ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್, ನಿವೃತ್ತ ಡಿಜಿಪಿ ಶಂಕರ್ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ ರವಿ ಸುರಪುರ, ಸೇಲಂ ನ ಪೊಲೀಸ್ ವರಿಷ್ಠಾಧಿಕಾರಿ ದೀಪಾ ಗಾಣಿಗೇರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದ ಐಎಎಸ್ ಹಬ್ ನ ಸಿಎಂಡಿ ಎಂ ಕೆ ಯಾದವ್, ಬೆಂಗಳೂರು ಶಾಖೆಯ ನಿರ್ದೇಶಕಿ ಶ್ರೀಮತಿ ಜ್ಯೋತಿ ಗಾಣೀಗೇರ್ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಮಾತನಾಡಿದ ನಿವೃತ್ತ ಡಿಜಿಪಿ ಶಂಕರ್ ಬಿದರಿ, ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ. ಈ ವಿದ್ಯಾರ್ಥಿಗಳಿಗೆ ಅಗತ್ಯ ಕೋಚಿಂಗ್ ಸಿಕ್ಕಲ್ಲಿ ಉನ್ನತ ಸಾಧನೆ ಮಾಡಬಲ್ಲರು. ಅವರಲ್ಲಿ ಹಲವರಿಗೆ ಆರ್ಥಿಕ ತೊಂದರೆಯಿಂದ ಬಳಲುತ್ತಿರುವವರಿಗೆ ಇಂತಹ ಉಚಿತ ಕೋಚಿಂಗ್ ಸೌಲಭ್ಯಗಳು ಬಹಳ ಅನುಕೂಲ ಮಾಡಿಕೊಡುತ್ತವೆ. ಅತ್ಯಾಧುನಿಕ ಸೌಲಭ್ಯಗಳು ಹಾಗೂ ಗುಣಮಟ್ಟದ ಕೋಚಿಂಗ್ ಕೇಂದ್ರಗಳು 20 ಯವತಿಯರಿಗೆ ಉಚಿತವಾಗಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿ ಕೋಚಿಂಗ್ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಪಿ ಮಣಿವಣ್ಣನ್ ಮಾತನಾಡಿ, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಉನ್ನತ ಪರೀಕ್ಷೆಗಳಿಗೆ ತಯಾರಾಗಲು ಅತ್ಯುತ್ತಮ ಸೌಲಭ್ಯಗಳು ದೊರಯುತ್ತಿವೆ. ಇದನ್ನು ಸದಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ದ ಐಎಎಸ್ ಹಬ್ನಿಂದ ಕೋಚಿಂಗ್ ಪಡೆದು 2019 ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ಜಿಂದಾಲ್ ಮಾತನಾಡಿ, ಐಎಎಸ್ ಹಬ್ ಕೋಚಿಂಗ್ ಕ್ಲಾಸ್ ನಿಂದ ಹಲವಾರು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋಚಿಂಗ್ ನೀಡಲಾಗುತ್ತದೆ. ಅಲ್ಲದೆ, ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋಚಿಂಗ್ ಕೂಡಾ ನೀಡುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಸಿವಿಲ್ ಸರ್ವೀಸಸ್ ಪರೀಕ್ಷೆಗಳಲ್ಲಿ ದ ಐಎಎಸ್ ಕ್ಲಬ್ನ ವಿದ್ಯಾ ರ್ಥಿಗಳು ಉತ್ತಮ ಸಾಧನೆ ತೋರಿಸುತ್ತಿದ್ದಾರೆ ಎಂದರು.

Recommended Video
ದ ಐಎಎಸ್ ಹಬ್ನ ಬೆಂಗಳೂರು ಶಾಖೆ, ಎಲ್ಟೆನ್ ಟೆಕ್ನಾಲಜೀಸ್ ಮತ್ತು ಐ ಫೋಕಸ್ ಟೆಕ್ನಾಲಜಿ ಸರ್ವೀಸಸ್ನ ನಿರ್ದೇಶಕಿ ಜ್ಯೋತಿ ಗಾಣೀಗೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ಯುವತಿಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಾವು ಈ ಯೋಜನೆಯನ್ನು ಘೋಷಿಸಿದ್ದೇವೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ನಾವು ಇತರೆ ಕೋರ್ಸ್ಗಳಲ್ಲೂ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದು ಗ್ರಾಮೀಣ ಪ್ರದೇಶದ ಪ್ರತಿಭಾವಂತರಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications