6 ತಿಂಗಳಿನಲ್ಲಿ ಬೆಂಗಳೂರು ತುಂಬಾ ಉಚಿತ ವೈ-ಫೈ
Recommended Video

ಬೆಂಗಳೂರು, ಸೆಪ್ಟೆಂಬರ್ 23 : 'ಆರು ತಿಂಗಳಿನಲ್ಲಿ ಬೆಂಗಳೂರಿನ ಎಲ್ಲಾ ಪ್ರದೇಶದಲ್ಲಿ ಉಚಿತ ವೈ-ಫೈ ಸೇವೆ ದೊರೆಯುವ ವ್ಯವಸ್ಥೆ ಮಾಡಲಾಗುತ್ತದೆ' ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಭಾನುವಾರ ಗೋವಿಂದರಾಜನಗರದಲ್ಲಿ ನಿರ್ಮಿಸಿರುವ ಪಾಲಿಕೆ ಸೌಧ, ಅಟಲ್ ಜೀ ಕ್ರೀಡಾ ಸಂಕೀರ್ಣ, ಜನೌಷಧಿ ಮಳಿಗೆ ಮುಂತಾದವುಗಳನ್ನು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, 'ಬೆಂಗಳೂರು ನಗರ ಹೈಟೆಕ್ ಸಿಟಿಯಾಗಿ ಬೆಳೆಯುತ್ತಿದೆ. ದೇಶದ 130 ಕೋಟಿ ಜನಸಂಖ್ಯೆಯಲ್ಲಿ 110 ಕೋಟಿ ಜನರು ಮೊಬೈಲ್ ಬಳಸುತ್ತಿದ್ದಾರೆ. 60 ಕೋಟಿ ಜನರು ಇಂಟರ್ ನೆಟ್ ಬಳಕೆ ಮಾಡುತ್ತಿದ್ದಾರೆ' ಎಂದರು.

'ಐಟಿ-ಬಿಟಿಯಲ್ಲಿ ಬೆಂಗಳೂರು ನಗರ ವಿಶ್ವಕ್ಕೆ ಮಾದರಿಯಾಗಿದೆ. ಗೋವಿಂದರಾಜನಗರದಲ್ಲಿ ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ ಉಚಿತವಾಗಿ ವೈ-ಫೈ ಸೇವೆ ಒದಗಿಸಿದ್ದಾರೆ. ಅವರಿಂದ ಮಾಹಿತಿ ಪಡೆದಿದ್ದೇನೆ. 6 ತಿಂಗಳಿನಲ್ಲಿ ನಗರದ ಎಲ್ಲಾ ಪ್ರದೇಶದಲ್ಲಿ ಉಚಿತ ವೈ-ಫೈ ಸೇವೆ ದೊರೆಯುವಂತೆ ವ್ಯವಸ್ಥೆ ಮಾಡಲಾಗುತ್ತದೆ' ಎಂದು ತಿಳಿಸಿದರು.
'ಕಳೆದ ಬಾರಿ ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ಬಜೆಟ್ ಮಂಡನೆ ಮಾಡಲಾಗಿದೆ. ಈ ದೊಡ್ಡ ಮಟ್ಟದ ಬಜೆಟ್ಗೆ ಅನುಮೋದನೆ ನೀಡುವುದು ಬೇಡ ಎಂದು ನಿರ್ಧರಿಸಲಾಗಿತ್ತು. ಆದರೆ, ನಗರದ ಅಭಿವೃದ್ಧಿಗಾಗಿ ಅನುಮೋದನೆ ನೀಡಲಾಗಿದೆ' ಎಂದು ಪರಮೇಶ್ವರ ಹೇಳಿದರು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications