ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಸುಧಾಕರ ಚತುರ್ವೇದಿ ಇನ್ನಿಲ್ಲ
ಬೆಂಗಳೂರು, ಫೆಬ್ರವರಿ 27: ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ಸಮೀಪದಿಂದ ಕಂಡಿದ್ದ ಸ್ವಾತಂತ್ರ್ಯ ಹೋರಾಟಗಾರ, ನಾಲ್ಕೂ ವೇದಗಳ ಪಾರಂಗತ, ಶತಾಯುಷಿ ಸುಧಾಕರ ಚತುರ್ವೇದಿ (124) ಗುರುವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.
1897ರ ಏಪ್ರಿಲ್ 20ರಂದು ಬೆಂಗಳೂರಿನ ಬಳೇಪೇಟೆಯಲ್ಲಿ ಜನಿಸಿದ್ದ ಅವರು 11ನೇ ವಯಸ್ಸಿನಲ್ಲಿಯೇ ಉತ್ತರ ಭಾರತದ ಪ್ರಸಿದ್ಧ ಕಾಂಗಡಿ ಗುರುಕುಲದಲ್ಲಿ ಸೇರಿಕೊಂಡು ನಾಲ್ಕೂ ವೇದಗಳನ್ನು ಅಧ್ಯಯನ ಮಾಡಿದ್ದರು. ವೇದಗಳ ಕುರಿತು ಅನೇಕ ಲೇಖನಗಳನ್ನು ಬರೆದಿರುವ ಅವರು, ನಾಲ್ಕೂ ವೇದಗಳಿಗೆ ಭಾಷ್ಯ ಬರೆಯುವ ಮೂಲಕ ಚತುರ್ವೇದಿ ಎಂಬ ವಿಶೇಷಣ ಪಡೆದುಕೊಂಡಿದ್ದರು.
ಸುಧಾಕರ್ ಅವರ ತಂದೆ ತುಮಕೂರಿನ ಕ್ಯಾತಸಂದ್ರ ಮೂಲದವರು. ತಂದೆ ಟಿ.ವಿ. ಕೃಷ್ಣರಾವ್ ಶಿಕ್ಷಣ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಅವರ ತಾಯಿ ಲಕ್ಷ್ಮಮ್ಮ. 1915ರಲ್ಲಿ ಹರಿದ್ವಾರದ ಗುರುಕುಲಕ್ಕೆ ಸೇರಿ ವಿದ್ಯಾಭ್ಯಾಸ ಮುಂದುವರಿಸಿದ್ದರು. ಅಲ್ಲಿಯೇ ಅವರಿಗೆ ಗಾಂಧೀಜಿ ಅವರ ಪರಿಚಯವಾಗಿತ್ತು.

ಲಾಹೋರ್ನಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಇವರ ವಿದ್ಯಾರ್ಥಿಯಾಗಿದ್ದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಸುಧಾಕರ ಚತುರ್ವೇದಿ ಅವರು, ಗಾಂಧೀಜಿ ಹಾಗೂ ಅನೇಕ ಹೋರಾಟಗಾರರ ಒಡನಾಡಿಯಾಗಿದ್ದರು. 13 ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದರು.
1919ರ ಏಪ್ರಿಲ್ 13ರಂದು ಪಂಜಾಬ್ನ ಅಮೃತಸರದ ಜಲಿಯನ್ ವಾಲಾಬಾಗ್ನಲ್ಲಿ ಶಾಂತಿಯುತ ಪ್ರತಿಭಟನೆಗೆ ಸೇರಿದ್ದ ಜನರ ಮೇಲೆ ಕರ್ನಲ್ ರಿಜಿನಾಲ್ಡ್ ಡಯರ್ ಗುಂಡು ಹಾರಿಸಲು ಆದೇಶ ನೀಡಿದ್ದ. ಆಗ ಸಾವಿರಾರು ಜನರು ಜೀವ ಕಳೆದುಕೊಂಡಿದ್ದರು. ಅದೇ ಸ್ಥಳದಲ್ಲಿದ್ದ ಸುಧಾಕರ ಚತುರ್ವೇದಿ ಅವರು ಚರಂಡಿಯಲ್ಲಿ ಅಡಗಿಕುಳಿತು ಜೀವ ಉಳಿಸಿಕೊಂಡಿದ್ದರು. ಬಳಿಕ ಹತ್ಯಾಕಾಂಡದಲ್ಲಿ ಬಲಿಯಾದವರನ್ನು ಮಹಾತ್ಮ ಗಾಂಧಿ ಅವರ ಸೂಚನೆಯಂತೆ ನದಿ ತೀರದಲ್ಲಿ ಅಂತ್ಯಸಂಸ್ಕಾರ ಮಾಡಿದ್ದರು.
ಕನ್ನಡ, ಸಂಸ್ಕೃತ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 50 ಕೃತಿಗಳನ್ನು ರಚಿಸಿದ್ದಾರೆ. ಹಾಗೆಯೇ ಅವರ ನಾಲ್ಕು ವೇದಗಳ ಬರಹ 20 ಬೃಹತ್ ಸಂಪುಟಗಳಲ್ಲಿ ಪ್ರಕಟಗೊಂಡಿವೆ. ರಾಜ್ಯದ ವಿವಿಧೆಡೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಆರ್ಯಮಿತ್ರ, ಸುಧಾಕರ ಚತುರ್ವೇದಿ ಅವರ ದತ್ತುಪುತ್ರರಾಗಿದ್ದಾರೆ.
ಜಯನಗರದ ಕೃಷ್ಣಸೇವಾಶ್ರಮದ ಎದುರು ಮೊಮ್ಮಕ್ಕಳ ಜತೆ ವಾಸವಾಗಿದ್ದರು. ಅವರ ಪಾರ್ಥಿವ ಶರೀರ ವೀಕ್ಷಣೆಗೆ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, 4 ಗಂಟೆಗೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ












Click it and Unblock the Notifications