ಬೆಂಗಳೂರಿನ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ
ಬೆಂಗಳೂರು, ಜ. 21: ಫ್ರೆಂಚ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರು ಭಾರತದ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಅತಿಥಿಯಾಗಿರುವುದನ್ನು ವಿರೋಧಿಸಿ ಬೆದರಿಕೆ ಪತ್ರ ಬಂದಿದೆ. ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ ಪತ್ರ ಜನವರಿ 11ರಂದೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತಂತೆ ಬೆಂಗಳೂರು ಪೊಲೀಸರು ಜನವರಿ 14ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಭಾರತಕ್ಕೆ ಫ್ರೆಂಚ್ ಅಧ್ಯಕ್ಷ ಹೊಲ್ಲಾಂಡೆ ಬರುವುದನ್ನು ವಿರೋಧಿಸುತ್ತೇವೆ ಎಂದು ಚೆನ್ನೈನಿಂದ ಬಂದಿರುವ ಪತ್ರದಲ್ಲಿ ಹೇಳಲಾಗಿದೆ. [ಚಿತ್ರಗಳು : ದೆಹಲಿಯಲ್ಲಿ ಫ್ರಾನ್ಸ್ ಸೈನಿಕರ ತಾಲೀಮು]

ಇಂಗ್ಲೀಷ್ ಭಾಷೆಯಲ್ಲಿರುವ ಪತ್ರ ಚೆನ್ನೈನಿಂದ ಪೋಸ್ಟ್ ಆಗಿರುವುದು ದೃಢಪಟ್ಟಿದೆ. ಆದರೆ, ವಿಳಾಸ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಹೇಳಿದ್ದಾರೆ. [ಗಣರಾಜ್ಯೋತ್ಸವದ ಮೇಲೆ ISIS ಕಣ್ಣು]
ಗಣತಂತ್ರದಿನದ ಸಂಭ್ರಮ ವೀಕ್ಷಿಸಲು ಭಾರತಕ್ಕೆ ಬರಲಿರುವ ಫ್ರೆಂಚ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲ್ಲಾಂಡೆ ಅವರ ಮೇಲೆ ಗುಂಪೊಂದು ದಾಳಿ ಮಾಡುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಈ ರೀತಿ ಪತ್ರ ಬಂದಿರುವುದು ಆತಂಕ ಮೂಡಿಸಿದೆ.
ಇರಾಕಿ ಉಗ್ರ ಸಂಘಟನೆ ಐಎಸ್ಐಎಸ್ ವಿರುದ್ಧ ಸಮರ ಸಾರಿರುವ ಫ್ರಾನ್ಸ್ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ತಿರುಗಿ ಬೀಳುವ ಶಂಕೆ ವ್ಯಕ್ತವಾಗಿದೆ. ಐಎಸ್ ಐಎಸ್ ಸಂಘಟನೆ ಪ್ಯಾರೀಸ್ ನಲ್ಲಿ ಇತ್ತೀಚೆಗೆ ದಾಳಿ ನಡೆಸಿ ಅನೇಕ ಜನರ ಸಾವಿಗೆ ಕಾರಣವಾಗಿತ್ತು. (ಒನ್ಇಂಡಿಯಾ ಸುದ್ದಿ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ











Click it and Unblock the Notifications