Get Updates
Get notified of breaking news, exclusive insights, and must-see stories!

ಭಾನುವಾರ ಹಾಗೂ ರಾತ್ರಿ ವೇಳೆಯೂ ಸಂಚರಿಸಲಿದೆ ಕೆಎಸ್ಆರ್‌ಟಿಸಿ

ಬೆಂಗಳೂರು, ಜುಲೈ 31: ಭಾರತದಲ್ಲಿ ಅನ್‌ಲಾಕ್‌ 3 ಪ್ರಾರಂಭವಾಗುತ್ತಿದ್ದು, ಲಾಕ್‌ಡೌನ್‌ ನಿಯಮಗಳಲ್ಲಿ ಮತ್ತಷ್ಟು ವಿನಾಯಿತಿ ಸಿಕ್ಕಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬೆನ್ನಲ್ಲೆ ರಾಜ್ಯ ಸರ್ಕಾರವೂ ಮಾರ್ಗಸೂಚಿ ಪ್ರಕಟಿಸಿತ್ತು.

ಅನ್‌ಲಾಕ್‌ 3 ಮಾರ್ಗಸೂಚಿಯಲ್ಲಿ ಭಾನುವಾರದ ಲಾಕ್‌ಡೌನ್ ಮತ್ತು ರಾತ್ರಿ ವೇಳೆ ಜಾರಿಯಲ್ಲಿರುತ್ತಿದ್ದ ಕರ್ಫ್ಯೂ ರದ್ದು ಮಾಡಿದೆ. ಆಗಸ್ಟ್ 1 ರಿಂದ ರಾತ್ರಿ ಕರ್ಫ್ಯೂ ಇರಲ್ಲ. ಬಾನುವಾರದ ಲಾಕ್‌ಡೌನ್ ಸಹ ಇರಲ್ಲ.

ಈ ಹಿನ್ನೆಲೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಭಾನುವಾರ ಮತ್ತು ರಾತ್ರಿ ಕರ್ಫ್ಯೂ ಸಮಯದಲ್ಲಿ ಬಸ್ ಸಂಚಾರ ಮಾಡುತ್ತಿರಲಿಲ್ಲ. ಆದ್ರೆ, ಆಗಸ್ಟ್ 1 ರಿಂದ ಭಾನುವಾರ ಹಾಗೂ ರಾತ್ರಿ ಸಮಯದಲ್ಲೂ ಕೆಎಸ್ಆರ್ ಟಿಸಿ ಬಸ್ ಸಂಚರಿಸಲಿದೆ.

From August 1st, Ksrtc Buses Will Travel On Sunday And Night Time Also.

ಈ ಕುರಿತು ಕೆಎಸ್ಆರ್ ಟಿಸಿ ಆಡಳಿತ ಮಂಡಳಿ ಅಧಿಕೃತಗೊಳಿಸಿದ್ದು, 'ರಾಜ್ಯಾದ್ಯಂತ ಭಾನುವಾರಗಳಂದು ಜಾರಿಯಲ್ಲಿದ್ದ ಲಾಕ್ ಡೌನ್ ಹಾಗೂ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಕರ್ಫ್ಯೂವನ್ನು ದಿನಾಂಕ 01.08.2020 ರಿಂದ‌ ಜಾರಿಗೆ ಬರುವಂತೆ ಘನ ಸರ್ಕಾರವು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ‌ನಿಗಮದ ಸಾರಿಗೆಗಳನ್ನು ವಾರದ ಎಲ್ಲಾ ದಿನಗಳಂದು ಹಾಗೂ ರಾತ್ರಿ ಸಾರಿಗೆಗಳನ್ನು ಯಥಾಸ್ಥಿತಿ ಕಾರ್ಯಾಚರಣೆ ಮಾಡಲಾಗುವುದು' ಎಂದು ಪ್ರಕಟಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+