ಚಿನ್ನಸ್ವಾಮಿ ಸ್ಟೇಡಿಯಂನಿಂದ ಲಂಡನ್ ನ ಕೋರ್ಟ್ ಬೆಂಚಿನವರೆಗೆ
ಒಂಬತ್ತು ವರ್ಷಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಮ್ಮ ತಂಡಕ್ಕೆ ಉತ್ತೇಜನ ನೀಡುತ್ತಿದ್ದ ವಿಜಯ್ ಮಲ್ಯ, ಅದೇ ದಿನ ಅಂದರೆ ಏಪ್ರಿಲ್ 18ರಂದು 2017ರಲ್ಲಿ ಲಂಡನ್ ನ ಕೋರ್ಟ್ ಬೆಂಚಿನಲ್ಲಿ ಕೂರುವಂತಾಗಿದೆ
ಬೆಂಗಳೂರು, ಏಪ್ರಿಲ್ 18: ನಸೀಬು ಕೈ ಕೊಟ್ಟರೆ ಬದುಕಿಗೆ ಎಂಥ ಲಾತಾ ಬೀಳುತ್ತದೆ ಅನ್ನೋದಕ್ಕೆ ವಿಜಯ್ ಮಲ್ಯ ಸರಿಯಾದ ಉದಾಹರಣೆ. 9 ವರ್ಷದ ಹಿಂದೆ, ಸರಿಯಾಗಿ ಏಪ್ರಿಲ್ 18ನೇ ತಾರೀಕು ವಿಜಯ್ ಮಲ್ಯ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯದಲ್ಲಿ ರಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರೋತ್ಸಾಹಿಸುತ್ತಾ ಇದ್ದರು.
2008ರ ಏಪ್ರಿಲ್ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೊದಲನೇ ಪಂದ್ಯದಲ್ಲಿ ವಿಜಯ್ ಮಲ್ಯ ಇದ್ದರು. ಒಂಬತ್ತು ವರ್ಷಗಳ ನಂತರ ಅಂದರೆ ಏಪ್ರಿಲ್ 18, 2017ರಲ್ಲಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಲ್ಯ, ವೆಸ್ಟ್ ಮಿನಿಸ್ಟರ್ ಕೋರ್ಟ್ ನಲ್ಲಿ ಕೂತಿದ್ದಾರೆ.[ಅರೆಸ್ಟ್ ಆದ 3 ಗಂಟೆಯೊಳಗೆ ಮಲ್ಯಗೆ ಜಾಮೀನು!!!]

9 ವರ್ಷದ ಹಿಂದೆ ಇದೇ ದಿನ ರಾಯಲ್ ಚಾಲೆಂಜರ್ಸ್ ನ ಹೆಮ್ಮೆಯ ಮಾಲೀಕತ್ವ ವಹಿಸಿದ್ದ ಮಲ್ಯ, ರಾಹುಲ್ ದ್ರಾವಿಡ್ ನಾಯಕತ್ವದ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯದ ಪಂದ್ಯವನ್ನು ವೀಕ್ಷಿಸಿದ್ದರು. ಕೋಲ್ಕತ್ತಾ ತಂಡ ಬೆಂಗಳೂರು ವಿರುದ್ಧ 140 ರನ್ ಗಳಿಂದ ಜಯ ಸಾಧಿಸಿತ್ತು. ಬ್ರೆಂಡನ್ ಮೆಕಲಂ ಬಾರಿಸಿದ 158 ರನ್ ನಿಂದ ಕೋಲ್ಕತ್ತಾ ಜಯ ಸಾಧಿಸಿತ್ತು.[ವಿಜಯ್ ಮಲ್ಯ ಯುಕೆಯಲ್ಲಿ ಬಂಧನಕ್ಕೊಳಗಾಗಿದ್ದು ಹೇಗೆ?]
ವಿಜಯ್ ಮಲ್ಯರ ಐಪಿಎಲ್ ಮೇಲಿನ ಪ್ರೀತಿ 2016ರ ಅಟಗಾರರ ಹರಾಜಿನವರೆಗೆ ಮುಂದುವರಿದಿತ್ತು. ಮದ್ಯ, ಮಹಿಳೆಯರ ಮಧ್ಯೆ ಪಾರ್ಟಿಗಳಲ್ಲಿ ಮಿಂಚುತ್ತಿದ್ದ ಮಲ್ಯರ ಒಳ್ಳೆ ದಿನಗಳು ಕೊನೆಯಾಗಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications