ತೈಲ ಪೂರೈಕೆ ಟ್ಯಾಂಕರ್ ಚಾಲಕರ ಪ್ರತಿಭಟನೆ: ದೇವನಗುಂದಿ ರಸ್ತೆ ದುರಸ್ತಿ ಆರಂಭ
ಬೆಂಗಳೂರು, ಜನವರಿ30 : ದೇವನಗುಂದಿ ತೈಲ ಹಾಗೂ ಅಡುಗೆ ಅನಿಲ ದಾಸ್ತಾನು ಘಟಕದಿಂದ ಮುಖ್ಯರಸ್ತೆಗೆ ಸಂಪರ್ಕ ಕಲ್ಪಸುವ ಮಾರ್ಗದ ದುರಸ್ತಿ ಕಾರ್ಯ ಆರಂಭವಾಗಿದೆ.
ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ಬಳಿ ರಸ್ತೆ ಗುಂಡಿಗಳಿಂದ ಬೇಸತ್ತಿರುವ ಪೆಟ್ರೋಲ್ ಪೂರೈಕೆ ಚಾಲಕರು ಸುಮಾರು 2 ಸಾವಿರ ಪೆಟ್ರೋಲ್ ಲಾರಿಗಳ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸ ಕೋಟೆಯ ದೇವನಗುಂ ಐಓಸಿ ಕೇಂದ್ರದ ಬಳಿ ಲಾರಿಗಳನ್ನು ನಿಲ್ಲಿಸಿ ಪ್ರತಿಭಟಿಸಿದ್ದರು .
ಲಾರಿಗಳಲ್ಲಿ ಪೆಟ್ರೋಲ್ ಗಳನ್ನು ತುಂಬಿಸಿಕೊಂಡು ಈ ರಸ್ತೆಗಳಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ, 10 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಗುಂಡಿಗಳಿವೆ. ಮಾಲೂರು ಕ್ರಾಸ್-ದೇವನಗುಂಡಿ ಐಓಸಿ ಟರ್ಮಿನಲ್ ವರೆಗೂ ರಸ್ತೆ ಗುಂಡಿಗಳಿಂದಾಗಿ ತಿಂಗಳಿನಿಂದ ಪದೇ ಪದೇ ಲಾರಿ ಅಪಘಾತಗಳು ಹೆಚ್ಚಾಗುತ್ತಿದೆ ಇದರಿಂದ ಬೇಸತ್ತ ಪೆಟ್ರೋಲ್ ಸಾಗಾಣಿಕೆ ವಾಹನಗಳ ಚಾಲಕರ ಸಂಘದ ಸದಸ್ಯರು ದೂರಿದ್ದರು.

ಜೆಸಿಬಿ ಯಂತ್ರ ಹಾಗೂ ಕೆಲಸಗಾರರ ಸಮೇತ ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದರು. 8 ಕಿ.ಮೀವರೆಗಿರುವ ರಸ್ತೆಯ ಹಲವೆಡೆ ತಗ್ಗುಗಳು ಬಿದ್ದಿವೆ. ಆ ಸ್ಥಳಕ್ಕೆ ಜಲ್ಲಿ ಕಲ್ಲು ಹಾಕಿ ಸಮತಟ್ಟು ಮಾಡಲಾಗುತ್ತಿದೆ.
ರಸ್ತೆಯ ಅಕ್ಕ-ಪಕ್ಕದಲ್ಲಿ ಜಮೀನುಗಳಿವೆ. ಬೆಳೆಗೆ ಹರಿಸುವ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಅದೇ ಕಾರಣಕ್ಕೆ ರಸ್ತೆಯಲ್ಲಿ ತಗ್ಗುಗಳು ಬೀಳುತ್ತಿವೆ. ನೀರು ಹರಿದು ಬರುವ ಜಾಗದಲ್ಲಿ ಮಣ್ಣು ಸುರಿಯುತ್ತಿದ್ದೇವೆ. ಅದರಿಂದ ಹರಿಯುವಿಕೆ ಬಂದ್ ಆಗಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
ಟ್ಯಾಂಕರ್ ಗಳ ಓಡಾಟ ಹೆಚ್ಚಿರುವುದರಿಂದ, ರಸ್ತೆಯು ಪದೇ ಪದೇ ಹದಗೆಡುತ್ತಿದೆ. ಮೂರು ವರ್ಷದಲ್ಲಿ ಹಲವು ಬಾರಿ ದುರಸ್ತಿ ಕಾಮಗಾರಿ ಕೈಗೊಂಡಿದ್ದೇವೆ. ಪುನಃ ಸಮಸ್ಯೆ ಉದ್ಭವಿಸುತ್ತಿದೆ. ಶಾಶ್ವತ ಪರಿಹಾರಕ್ಕೆ ಯೋಚಿಸುತ್ತಿದ್ದೇವೆ ಎಂದರು.
ಡಾಂಬರೀಕರಣ ಮಾಡಲಿ: ಕೇವಲ ಜಲ್ಲಿ ಕಲ್ಲು ಹಾಕಿ, ರಸ್ತೆ ಸಮತಟ್ಟು ಮಾಡಿದರೆ ಸಾಲದು. ಡಾಂಬರೀಕರಣ ಮಾಡಿ ಟ್ಯಾಂಕರ್ ಓಡಾಟಕ್ಕೆ ಅನುಕೂಲ ಕಲ್ಪಿಸಬೇಕು. ಆ ರೀತಿಯಾದರೆ ಮಾತ್ರ ಚಾಲಕರು ನೆಮ್ಮದಿಯಿಂದ ಟ್ಯಾಂಕರ್ ಓಡಿಸಲಿದ್ದಾರೆ ಎಂದು ತೈಲ ಪೂರೈಕೆ ಟ್ಯಾಂಕರ್ ಗಳ ಚಾಲಕರ ಸಂಘದ ಅಧ್ಯಕ್ಷ ಶ್ರೀರಾಮ್ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications