ತೈಲ ಪೂರೈಕೆ ಟ್ಯಾಂಕರ್ ಚಾಲಕರ ಪ್ರತಿಭಟನೆ: ದೇವನಗುಂದಿ ರಸ್ತೆ ದುರಸ್ತಿ ಆರಂಭ
ಬೆಂಗಳೂರು, ಜನವರಿ30 : ದೇವನಗುಂದಿ ತೈಲ ಹಾಗೂ ಅಡುಗೆ ಅನಿಲ ದಾಸ್ತಾನು ಘಟಕದಿಂದ ಮುಖ್ಯರಸ್ತೆಗೆ ಸಂಪರ್ಕ ಕಲ್ಪಸುವ ಮಾರ್ಗದ ದುರಸ್ತಿ ಕಾರ್ಯ ಆರಂಭವಾಗಿದೆ.
ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ಬಳಿ ರಸ್ತೆ ಗುಂಡಿಗಳಿಂದ ಬೇಸತ್ತಿರುವ ಪೆಟ್ರೋಲ್ ಪೂರೈಕೆ ಚಾಲಕರು ಸುಮಾರು 2 ಸಾವಿರ ಪೆಟ್ರೋಲ್ ಲಾರಿಗಳ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸ ಕೋಟೆಯ ದೇವನಗುಂ ಐಓಸಿ ಕೇಂದ್ರದ ಬಳಿ ಲಾರಿಗಳನ್ನು ನಿಲ್ಲಿಸಿ ಪ್ರತಿಭಟಿಸಿದ್ದರು .
ಲಾರಿಗಳಲ್ಲಿ ಪೆಟ್ರೋಲ್ ಗಳನ್ನು ತುಂಬಿಸಿಕೊಂಡು ಈ ರಸ್ತೆಗಳಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ, 10 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ಹೆಜ್ಜೆ ಹೆಜ್ಜೆಗೂ ಗುಂಡಿಗಳಿವೆ. ಮಾಲೂರು ಕ್ರಾಸ್-ದೇವನಗುಂಡಿ ಐಓಸಿ ಟರ್ಮಿನಲ್ ವರೆಗೂ ರಸ್ತೆ ಗುಂಡಿಗಳಿಂದಾಗಿ ತಿಂಗಳಿನಿಂದ ಪದೇ ಪದೇ ಲಾರಿ ಅಪಘಾತಗಳು ಹೆಚ್ಚಾಗುತ್ತಿದೆ ಇದರಿಂದ ಬೇಸತ್ತ ಪೆಟ್ರೋಲ್ ಸಾಗಾಣಿಕೆ ವಾಹನಗಳ ಚಾಲಕರ ಸಂಘದ ಸದಸ್ಯರು ದೂರಿದ್ದರು.

ಜೆಸಿಬಿ ಯಂತ್ರ ಹಾಗೂ ಕೆಲಸಗಾರರ ಸಮೇತ ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದರು. 8 ಕಿ.ಮೀವರೆಗಿರುವ ರಸ್ತೆಯ ಹಲವೆಡೆ ತಗ್ಗುಗಳು ಬಿದ್ದಿವೆ. ಆ ಸ್ಥಳಕ್ಕೆ ಜಲ್ಲಿ ಕಲ್ಲು ಹಾಕಿ ಸಮತಟ್ಟು ಮಾಡಲಾಗುತ್ತಿದೆ.
ರಸ್ತೆಯ ಅಕ್ಕ-ಪಕ್ಕದಲ್ಲಿ ಜಮೀನುಗಳಿವೆ. ಬೆಳೆಗೆ ಹರಿಸುವ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಅದೇ ಕಾರಣಕ್ಕೆ ರಸ್ತೆಯಲ್ಲಿ ತಗ್ಗುಗಳು ಬೀಳುತ್ತಿವೆ. ನೀರು ಹರಿದು ಬರುವ ಜಾಗದಲ್ಲಿ ಮಣ್ಣು ಸುರಿಯುತ್ತಿದ್ದೇವೆ. ಅದರಿಂದ ಹರಿಯುವಿಕೆ ಬಂದ್ ಆಗಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
ಟ್ಯಾಂಕರ್ ಗಳ ಓಡಾಟ ಹೆಚ್ಚಿರುವುದರಿಂದ, ರಸ್ತೆಯು ಪದೇ ಪದೇ ಹದಗೆಡುತ್ತಿದೆ. ಮೂರು ವರ್ಷದಲ್ಲಿ ಹಲವು ಬಾರಿ ದುರಸ್ತಿ ಕಾಮಗಾರಿ ಕೈಗೊಂಡಿದ್ದೇವೆ. ಪುನಃ ಸಮಸ್ಯೆ ಉದ್ಭವಿಸುತ್ತಿದೆ. ಶಾಶ್ವತ ಪರಿಹಾರಕ್ಕೆ ಯೋಚಿಸುತ್ತಿದ್ದೇವೆ ಎಂದರು.
ಡಾಂಬರೀಕರಣ ಮಾಡಲಿ: ಕೇವಲ ಜಲ್ಲಿ ಕಲ್ಲು ಹಾಕಿ, ರಸ್ತೆ ಸಮತಟ್ಟು ಮಾಡಿದರೆ ಸಾಲದು. ಡಾಂಬರೀಕರಣ ಮಾಡಿ ಟ್ಯಾಂಕರ್ ಓಡಾಟಕ್ಕೆ ಅನುಕೂಲ ಕಲ್ಪಿಸಬೇಕು. ಆ ರೀತಿಯಾದರೆ ಮಾತ್ರ ಚಾಲಕರು ನೆಮ್ಮದಿಯಿಂದ ಟ್ಯಾಂಕರ್ ಓಡಿಸಲಿದ್ದಾರೆ ಎಂದು ತೈಲ ಪೂರೈಕೆ ಟ್ಯಾಂಕರ್ ಗಳ ಚಾಲಕರ ಸಂಘದ ಅಧ್ಯಕ್ಷ ಶ್ರೀರಾಮ್ ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications