ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ: ವ್ಯಾಟ್ ಇಳಿಸಲ್ಲ ಅಂದ್ರು ಎಚ್ಡಿಕೆ
Recommended Video

ಬೆಂಗಳೂರು, ಆಗಸ್ಟ್ 31: ಪೆಟ್ರೋಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇಳಿಯುವಂತೆ ಕಾಣುತ್ತಿಲ್ಲ ಹೀಗಿದ್ದರೂ ಕೂಡ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಇಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇದೀಗ ಪೆಟ್ರೋಲ್ ಬೆಲೆ 81ರೂ ತಲುಪಿದೆ, ಡೀಸೆಲ್ ಬೆಲೆ 71 ಆಗಿದೆ, ಈಗಲಾದರೂ ಸ್ಥಳೀಯ ತೆರಿಗೆಯನ್ನು ಇಳಿಸಿ ಗ್ರಾಹಕರಿಗೆ ಸರ್ಕಾರ ನೆರವಾಗುವುದೇ ಎಂಬ ಕುತೂಹಲ ಸಾರ್ವಜನಿಕರಲ್ಲಿ ಮೂಡಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ದರ ಏರಿಕೆಯಾಗುತ್ತಿದ್ದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಳ ದರ ಗರಿಷ್ಠ ಮಟ್ಟವನ್ನು ಈಗಾಗಲೇ ತಲುಪಿದೆ.

ಸದ್ಯಕ್ಕೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳ ಟಿಕೆಟ್ ದರ ಹೆಚ್ಚಿಗೆ ಮಾಡಿಲ್ಲ ಅದೂ ಆದರೆ ಸಾರ್ವಜನಿಕರಿಗೆ ಇನ್ನೂ ಕಷ್ಟವಾಗಲಿದೆ. ಸ್ವಂತ ವಾಹ ಬಿಟ್ಟು ಈಗಾಗಲೇ ಸಮೂಹ ಸಾರಿಗೆ ಮೊರೆ ಹೋಗುತ್ತಿದ್ದಾರೆ.
ಮೆಟ್ರೋ, ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.ಬಿಜೆಪಿ ಗೆ ಹೋಲಿಸಿದರೆ ರಾಜ್ಯದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಅಗ್ಗ. ಸಾಲಮನ್ನಾದಂಥ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ನಾವು ಆದ್ಯತೆ ನೀಡಿದ್ದೇವೆ, ತೆರಿಗೆ ತಗ್ಗಿಸುವ ಪ್ರಿಸ್ಥಿತಿಯಲ್ಲಿ ನಾವಿಲ್ಲ ಎನ್ನುತ್ತಿದ್ದಾರೆ.
ಕಳೆದ ಬುಧವಾರ ದಾಖಲೆಯ ಮಟ್ಟಕ್ಕೆ ಇಂಧನ ದರಗಳು ಏರಿಕೆಯಾಗಿದ್ದವು.ಬೆಂಗಳೂರಿನಲ್ಲಿ ಡೀಸೆಲ್ ದರ ಲೀಟರ್ ಗೆ 71.99 ಪೆಟ್ರೋಲ್ ದರ 80.73ಕ್ಕೆ ಏರಿಕೆಯಾಗಿದ್ದವು.
ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ , ಡೀಸೆಲ್ ಅನ್ನು ತರಬೇಕು ಎನ್ನುವ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ರಾಜ್ಯಗಳು ಅಷ್ಟೇನೂ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ, ಒಂದು ವೇಳೆ ಜಿಎಸ್ ಟಿ ವ್ಯಾಪ್ತಿಗೆ ಬಂದರೆ ಗ್ರಾಹಕರಿಗೆ ಅನುಕೂಲವಾಗುತ್ತದೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ










Click it and Unblock the Notifications