ರಾಜ್ಯದ ಮಾಜಿ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣ?: ಡಾ.ಜಿ.ಪರಮೇಶ್ವರ

ಬೆಂಗಳೂರು, ಏಪ್ರಿಲ್ 21: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ. ತನಿಖೆಯಲ್ಲಿ ಏನೆಲ್ಲ ಮಾಹಿತಿ ಸಿಗುತ್ತದೆ ಎಂಬುದನ್ನು ನೋಡಬೇಕಿದೆ. 2025ರಲ್ಲಿ ನಾನು ಗೃಹ ಸಚಿವನಾಗಿದ್ದ ವೇಳೆ ಓಂಪ್ರಕಾಶ್ ಅವರು ಡಿಜಿಪಿಯಾಗಿ ಕೆಲಸ ಮಾಡಿದ್ದರು. ಒಳ್ಳೆಯ ಅಧಿಕಾರಿ, ಒಳ್ಳೆಯ ವ್ಯಕ್ತಿ. ಈ ರೀತಿಯಾಗಬಾರದಿತ್ತು ಎಂದು ಡಾ.ಜಿ.ಪರಮೇಶ್ವರ ಅವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಅಗುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ. ಪ್ರಕರಣದ ತನಿಖೆಯಾಗುವವರೆಗೂ ಘಟನೆಗೆ ಇದೇ ಕಾರಣ ಎಂದು ಹೇಳಲು ಆಗುವುದಿಲ್ಲ. ನಿರ್ಧಿಷ್ಟವಾಗಿ ಹೇಳಲು ಬರುವುದಿಲ್ಲ. ಕೌಟುಂಬಿಕ ಕಾರಣದ ಬಗ್ಗೆ ಹಿಂದೆ ದೂರು ಕೊಟ್ಟಿರುವುದನ್ನು ತನಿಖೆಯಲ್ಲಿ ಪರಿಶೀಲಿಸುತ್ತಾರೆ ಎಂದು ತಿಳಿಸಿದರು.

G Parameshwara Responds on Ex DGP Om Prakash Case and Lost Main Copy of Caste Survey Report

ಎಲ್ಲವನ್ನು ಸಮಗ್ರವಾಗಿ ತನಿಖೆ ಮಾಡುವವರೆಗೂ ಯಾವುದನ್ನು ಹೇಳಲು ಆಗುವುದಿಲ್ಲ‌. ಓಂಪ್ರಕಾಶ್ ಅವರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ‌ ಎಂದು ಹೇಳಿದರು.

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದಾಳಿಗೆ ಯಾವ ಶಸ್ತ್ರವನ್ನು ಬಳಸಿದ್ದರು? ಅದಕ್ಕೆ ಏನಾದರು ಕುರುಹು ಸಿಗುತ್ತದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಗಂಭೀರವಾಗಿ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಇಂತಹ ಘಟನೆಗಳನ್ನು ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

G Parameshwara Responds on Ex DGP Om Prakash Case and Lost Main Copy of Caste Survey Report

ಬಿಜೆಪಿ ಆರೋಪಗಳ ಬಗ್ಗೆ ಸಂಪುಟದಲ್ಲಿ ಚರ್ಚೆ

ರಾಜ್ಯ ಬಿಜೆಪಿ ನಾಯಕರು ಎಲ್ಲ ವಿಷಯದಲ್ಲಿ ಆರೋಪಗಳನ್ನು ಮಾಡುತ್ತಾರೆ. ಸರ್ಕಾರದ ಬಗ್ಗೆ ಸಕಾರಾತ್ಮಕ ಟೀಕೆಗಳನ್ನು ಮಾಡುವಂತೆ ಹೇಳುತ್ತೇವೆ. ಆದರೆ, ಅನವಶ್ಯಕ ಆರೋಪಗಳನ್ನು ಮಾಡುವುದರಿಂದ ಪ್ರಯೋಜನವಿಲ್ಲ. ಮೂಲ ಪ್ರತಿ ಇಲ್ಲದೇ ವರದಿ ಸಿದ್ಧಪಡಿಸಲು ಹೇಗೆ ಸಾಧ್ಯ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುವಾಗ ವಿಪಕ್ಷದವರ ಆರೋಪಗಳನ್ನು ಗಮನಿಸುತ್ತೇವೆ. ಗಂಭೀರವಾದ ಆರೋಪಗಳಾಗಿರುವುದರಿಂದ ನಾವು ಚರ್ಚೆ ಮಾಡುತ್ತೇವೆ‌ ಎಂದು ಜಾತಿಗಣತಿ ವರದಿ ಮೂಲಪ್ರತಿ ನಾಪತ್ತೆ ಬಗ್ಗೆ ಬಿಜೆಪಿ ಆರೋಪಕ್ಕೆ ಉತ್ತರಿಸಿದರು.

Take a Poll

ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂಬ ನಿಟ್ಟಿನಲ್ಲಿ ಈವರೆಗೆ ಹತ್ತು ಸಮಿತಿಗಳಾಗಿವೆ. ಕೆಲವು ಸಮಿತಿಗಳು ಸಮೀಕ್ಷೆ ಮಾಡಿವೆ. ಕೆಲವು ಸ್ಯಾಂಪಲ್ ಡೇಟಾ ಸಂಗ್ರಹಿಸಿ ವರದಿ ಮಾಡಿದ್ದಾರೆ‌. ಇದೇ ಮೊದಲನೇ ಬಾರಿಗೆ ಸಂಪೂರ್ಣ ಡೇಟಾ ಸಂಗ್ರಹಿಸಿ ವರದಿ ನೀಡಿದ್ದಾರೆ. ಇದಕ್ಕೆ ಹೆಚ್ಚು ಮಹತ್ವ ಬರುತ್ತದೆಯೇ ವಿನಃ, ಬೇರೆ ಯಾವುದಕ್ಕು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಾತಿ, ಜನಸಂಖ್ಯೆ, ಸ್ಥಿತಿಗತಿಗೆ ಆದ್ಯತೆ ನೀಡಬೇಕು

ನಾವು ಮೂಲವಾಗಿ ನೋಡಬೇಕಿರುವುದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ವರದಿ ಕೊಡಬೇಕು ಎನ್ನುವುದು. ಆ ದೃಷ್ಟಿನಲ್ಲಿ ಸ್ವಾಭಾವಿಕವಾಗಿ ಜನಗಣತಿಯು ಆಗಬೇಕಾಗುತ್ತದೆ. ಸಮುದಾಯಗಳು ಹಿಂದುಳಿದಿದ್ದಾವೆಯೇ ಅಥವಾ ಮುಂದುವರಿದಿವೆಯೇ ಎಂಬುದನ್ನು ಅಧ್ಯಯನ ಮಾಡಿ ಹೇಳಬೇಕಾದರೆ, ಆ ಜಾತಿಯ ಸಂಖ್ಯೆಗಳನ್ನು ನೋಡಬೇಕಾಗುತ್ತದೆ.

ಜನಸಂಖ್ಯೆ ಆಧಾರದ ಮೇಲೆ ವಿಶ್ಲೇಷಣೆಗಳಾಗುತ್ತಿವೆ. ಕೆಲವರು ಸರಿ ಇದೆ ಎನ್ನುತ್ತಾರೆ. ಕೆಲವರು ಸರಿ ಇಲ್ಲ ಎನ್ನುತ್ತಾರೆ. ಚರ್ಚೆ, ವಿಶ್ಲೇಷಣೆ, ತಪ್ಪು-ಒಪ್ಪುಗಳನ್ನು ಅಧ್ಯಯನ ಮಾಡಿ ಆನಂತರ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರಬೇಕಾಗುತ್ತದೆ. ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಕ್ಯಾಬಿನೆಟ್‌ಗೆ ತಂದು ಚರ್ಚೆಯಾಗಿದೆ. ಸಂಪೂರ್ಣವಾಗಿ ಚರ್ಚೆಯಾಗಿಲ್ಲ ಎಂಬ ಕಾರಣದಿಂದ ಮುಂದಕ್ಕೆ ಹಾಕಲಾಗಿದೆ. ಮುಂದೆ ಮತ್ತೊಂದು ದಿನ ಚರ್ಚೆ ಮಾಡುತ್ತೇವೆ. ಬಹಳಷ್ಟು ಮಂತ್ರಿಗಳು ತಮ್ಮ ಸಮುದಾಯಗಳ ಬಗ್ಗೆ ಮಾತನಾಡಿದ್ದಾರೆ. ಅದನ್ನು ಗಮನದಲ್ಲಿಟ್ಟು ಸರ್ಕಾರ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+