ಪೊಲೀಸ್ ವ್ಯವಸ್ಥೆ ಉತ್ತಮವಾಗಿದ್ದರೆ ರಾಜ್ಯ ಅಭಿವೃದ್ಧಿ: ಅಧಿಕಾರಿಗಳಿಗೆ ಜಿ.ಪರಮೇಶ್ವರ ಖಡಕ್ ಎಚ್ಚರಿಕೆ
ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈ ನಿಟ್ಟಿನಲ್ಲಿ ಡಿಸಿಆರ್ಇ ಪೊಲೀಸ್ ಠಾಣೆಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ 'ಹಿರಿಯ ಪೊಲೀಸ್ ಅಧಿಕಾರಿಗಳ 2ನೇ ದಿನದ ಸಮಾವೇಶ'ದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂತರ್ಜಾತಿ ವಿವಾಹವಾದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡುತ್ತಾನೆ ಎಂದರೆ ಹೇಗೆ ಸಹಿಸುವುದು. ಎಸ್ಸಿ, ಎಸ್ಟಿ ಸಮುದಾಯದ ಜನರ ಮೇಲಾಗುತ್ತಿರುವ ಶೋಷಣೆಯನ್ನು ತಡೆಗಟ್ಟಲು ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಡಿಸಿಆರ್ಇ ಠಾಣೆಗಳನ್ನು ಮಾಡಲಾಗಿದೆ. ಶೋಷಿತರೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸಬೇಕಲ್ಲವೇ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ತಿಳಿಸಿದರು.

ಈ ಬಾರಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಜನದಟ್ಟಣೆ ನಿಯಂತ್ರಣ, ಸೈಬರ್ ಕ್ರೈಂ, ಭಯೋತ್ಪಾದನಾ ಚಟುವಟಿಕೆ, ಡ್ರಗ್ಸ್ ದಂಧೆ, ಅಕ್ರಮ ವಲಸಿಗರು, ಎಫ್ಎಸ್ಎಲ್ ಕುರಿತ ವಿಷಯಗಳು ಸೇರಿದಂತೆ ಆಧುನಿಕ ಪೊಲೀಸ್ ವ್ಯವಸ್ಥೆಗೆ ಬೇಕಾದ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಈ ಎಲ್ಲ ವಿಚಾರಗಳು ಕೆಳಹಂತದ ಸಿಬ್ಬಂದಿಗಳಿಗೆ ತಲುಪಬೇಕು. ಅಂದಾಗ ಮಾತ್ರ ರಾಜ್ಯ ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪೊಲೀಸ್ ವ್ಯವಸ್ಥೆ ಉತ್ತಮವಾಗಿದ್ದರೆ ರಾಜ್ಯ ಅಭಿವೃದ್ಧಿ
ಪೊಲೀಸ್ ಇಲಾಖೆಯ ಮೇಲೆ ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಉತ್ತಮವಾಗಿದ್ದರೆ, ಆರ್ಥಿಕತೆ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲವೂ ಅಭಿವೃದ್ಧಿಯಾಗುತ್ತದೆ ಎಂದ ಅವರು, ಕೆಲವು ರಾಜ್ಯಗಳಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದೆ ಉಳಿದಿವೆ. ಅಲ್ಲಿನ ಕಾನೂನು ಸುವ್ಯವಸ್ಥೆ ಉತ್ತಮವಾಗದಿರುವುದೇ ಇದಕ್ಕೆ ಕಾರಣ.
ದೇಶದಲ್ಲಿ ಕಳೆದ 25 ವರ್ಷಗಳಿಂದ ಕರ್ನಾಟಕವನ್ನು ಬೇರೆಯೇ ದೃಷ್ಟಿಯಿಂದ ನೋಡಲಾಗುತ್ತಿದೆ. ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಕೋಟಿ ರೂ. ಹೂಡಿಕೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದು ಇದಕ್ಕೆ ಕಾರಣ ಎಂದರು.
ದ್ವೇಷ ಮೂಡಿಸುವ ಪೋಸ್ಟ್: ಕಾನೂನು ಕ್ರಮ ಕೈಗೊಳ್ಳಿ
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಮೂಡಿಸುವಂತ ವಿಚಾರಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ ಗಲಭೆಗಳಾಗುತ್ತವೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಆರಂಭಿಕ ಹಂತದಲ್ಲೇ ಮಟ್ಟ ಹಾಕಬೇಕು ಎಂದರು.
ರಾಜ್ಯದಲ್ಲಿ ಲಕ್ಷಾಂತರ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ವರದಿಯಾಗುತ್ತಿದೆ. ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ? ಪ್ರತಿ ಏರಿಯಾದ ಮಾಹಿತಿ ಪೊಲೀಸರಿಗೆ ಗೊತ್ತಿರಬೆಕೇಕು ಎಂಬ ಉದ್ದೇಶದಿಂದ 'ಮನೆಮನೆಗೆ ಪೊಲೀಸ್' ಕಾರ್ಯಕ್ರಮವನ್ನು ತರಲಾಗಿದೆ. ಯಾರು, ಎಲ್ಲಿಂದ ಬಂದಿದ್ದಾರೆ ಎಂದು ಪೊಲೀಸ್ ಠಾಣೆ ಹಂತದಲ್ಲಿ ತಿಳಿದುಕೊಳ್ಳಲು ಅಗುವುದಿಲ್ಲವೆ? ಎಂದು ತರಾಟೆಗೆ ತೆಗೆದುಕೊಂಡರು.

ಮುಲಾಜಿಲ್ಲದೇ ಕ್ರಮ ಎಂದ ಸಚಿವರು
ಪೊಲೀಸರು ಸಮಜಾಘಾತುಕರೊಂದಿಗೆ ಕೈಜೋಡಿಸಬಾರದು ಎಂದು ಪ್ರತಿ ಸಭೆಯಲ್ಲಿಯೂ ಎಚ್ಚರಿಸಲಾಗುತ್ತದೆ. ಆದಾಗ್ಯೂ ಈ ವಿಚಾರ ಮರುಕಳಿಸುತ್ತಿದೆ. ಠಾಣೆಯಲ್ಲಿ ಕುಳಿತು ಅಕ್ರಮ ವ್ಯವಹಾರ ನಡೆಸುವುದನ್ನು ಸಹಿಸುವುದಿಲ್ಲ. ಅಂಥವರ ಅನಿವಾರ್ಯತೆ ಪೊಲೀಸ್ ಇಲಾಖೆಗೆ ಇಲ್ಲ. ರೌಡಿಗಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದೆಲ್ಲವನ್ನು ನೋಡಿಕೊಂಡು ಸುಮ್ಮನಿರಬೇಕೆ? ಈ ಬಗ್ಗೆ ಎಲ್ಲ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಪೊಲೀಸ್ ಇಲಾಖೆ ತಾಂತ್ರಿಕವಾಗಿ ಬಲಗೊಳ್ಳಬೇಕು
ಡ್ರಗ್ಸ್ ದಂಧೆ, ಸೈಬರ್ ಅಪರಾಧಗಳನ್ನು ಮಟ್ಟ ಹಾಕುವುದು ಸವಾಲಾಗುತ್ತಿದೆ. ಇಲಾಖೆಯು ತಾಂತ್ರಿಕವಾಗಿ ಬಲಗೊಳ್ಳಬೇಕು. ಹೊಸ ತಂತ್ರಜ್ಞಾನ, ಆವಿಷ್ಕಾರಗಳನ್ನು ಅಳವಡಿಸಿಕೊಂಡು ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಬೇಕು ಎಂದು ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಉಪನ್ಯಾಸ ಮೂಲಕ ಯುವ ಸಮೂಹದಲ್ಲಿ ಬದಲಾವಣೆ ಮೂಡಿಸಬೇಕು ಎಂದರು.
ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡದಿದ್ದರೆ ಜನಸಮುದಾಯ ಹಾಳಾಗುತ್ತದೆ. ಎಲ್ಲ ಐಪಿಎಸ್ ಅಧಿಕಾರಿಗಳ ಹಿನ್ನೆಲೆ ಗೊತ್ತಿದೆ. ಬಹುತೇಕರು ಒಂದಲ್ಲ ಒಂದು ರೀತಿಯಲ್ಲಿ, ಬಡತನ, ಕಷ್ಟಗಳಿಂದ ಬಂದಿದ್ದೀರಿ. ಸಮಾಜದ ಪರಿಸ್ಥಿತಿಯ ಬಗ್ಗೆ ನಿಮಗೆ ಹೆಚ್ಚಿನ ಅರಿವಿದೆ. ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು. ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನ ಪಡೆಯಬೇಕು. ರಾಜ್ಯದ ಎಫ್ಎಸ್ಎಲ್ ಉತ್ತಮವಾಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಹೆಮ್ಮೆ ಇದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಅತ್ಯುತ್ತಮಗೊಳಿಸಲಾಗುವುದು ಎಂದು ಹೇಳಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications