ಪೊಲೀಸರಿಗೆ ವಸತಿ: ಸಿಹಿಸುದ್ದಿ ಕೊಟ್ಟ ಸಚಿವ ಜಿ.ಪರಮೇಶ್ವರ್
ಬೆಂಗಳೂರು, ಜೂನ್ 27: ಕರ್ನಾಟಕ ರಾಜ್ಯ ಗೃಹ ಇಲಾಖೆಯ ಆಧುನೀಕರಣಗೊಳಿಸಲು ವಿಶೇಷ ಅನುದಾನದ ಅಗತ್ಯವಿದೆ. ಹೀಗಾಗಿ ಈ ಕುರಿತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾಹಿತಿ ನೀಡಿದರು.
ಗುರುವಾರ ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಯ ಕೆಲ ಯೋಜನೆಗಳು ಬಾಕಿ ಉಳಿದಿವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನನ್ನನ್ನು ದೆಹಲಿಗೆ ಕರೆದಿದ್ದಾರೆ ಎಂದರು.

ಶೇ. 75ರಷ್ಟು ಪೊಲೀಸರಿಗೆ ಸೂರು
ಪೊಲೀಸ್ ಗೃಹ ಯೋಜನೆಯಡಿ 10 ಸಾವಿರ ಮನೆ ನಿರ್ಮಾಣ ಮಾಡಲಾಗಿದೆ. ರಾಜ್ಯ ಸರ್ಕಾರವು ಶೇ. 75ರಷ್ಟು ಪೊಲೀಸರಿಗೆ ಮನೆ ನಿರ್ಮಿಸಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ಪ್ರಸ್ತುತ ಶೇ. 40ರಷ್ಟು ಮನೆ ನಿರ್ಮಿಸಲಾಗಿದೆ. ಅಲ್ಲದೇ, ಇಲಾಖೆಯ ಆಧುನೀಕರಣಕ್ಕೆ ಅನುದಾನ ನೀಡುವಂತೆಯೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಕರ್ನಾಟಕಕ್ಕೆ ಬರಬೇಕಾದ ಅನುದಾನದ ಬಗ್ಗೆ ಸಿಎಂ ಅವರು ಪ್ರಧಾನ ಮಂತ್ರಿಯ ಸಮಯ ಕೇಳಿದ್ದಾರೆ. ಅಲ್ಲಿಯೂ ಪ್ರಸ್ತಾಪ ಮಾಡಲಾಗುವುದು ಎಂದು ಹೇಳಿದರು.
ದೆಹಲಿಯಲ್ಲಿ ಎಚ್ಡಿಕೆ ಭೇಟಿ
ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಕೇಂದ್ರದ ಎಲ್ಲ ಸಚಿವರನ್ನು ಹಾಗೂ ಎಲ್ಲ ಸಂಸದರನ್ನು ಆಹ್ವಾನಿಸಲಾಗಿದೆ. ರಾಜ್ಯದ ಸಮಸ್ಯೆಗಳನ್ನು ಗಮನಕ್ಕೆ ತರಬೇಕೆಂಬುದು ಉದ್ದೇಶ. ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸುತ್ತೇವೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ರಾಜ್ಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಕೇಂದ್ರದ ಕ್ಯಾಬಿನೆಟ್ ಸಚಿವರಾಗಿರುವುದರಿಂದ ರಾಜ್ಯಕ್ಕೆ ಹೆಚ್ಚು ಅನುದಾನ ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ. ಕೊಡಿಸಲಿಲ್ಲವಾದರೆ ರಾಜ್ಯಕ್ಕೆ ನಿರಾಸೆ ಮಾಡಿದರು ಎಂದು ಮುಂದೆ ಹೇಳಬೇಕಾಗುತ್ತದೆ ಎಂದರು.
ಹೆಚ್ಚುವರಿ ಡಿಸಿಎಂ ನೇಮಕ : ಗೃಹ ಸಚಿವರ ಪ್ರತಿಕ್ರಿಯೆ
ಹೆಚ್ಚುವರಿ ಡಿಸಿಎಂ ನೇಮಕ ಜೊತೆಗೆ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ಮುಂದೆ ಒತ್ತಾಯಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜಣ್ಣ ಅವರು ಈ ಸಭೆಗೆ ಬರುತ್ತಿಲ್ಲ. ಬಂದಿದ್ದರೆ ಅವರು ಒತ್ತಾಯಿಸುತ್ತಿದ್ದರೋ ಏನೋ ಗೊತ್ತಿಲ್ಲ. ಈ ವಿಚಾರ ಹೈಕಮಾಂಡ್ ಬಿಟ್ಟಿದ್ದು. ಕೆಲವರು ಅವರ ಅಭಿಪ್ರಾಯ ಹೆಳುತ್ತಾರೆ. ಅದನ್ನು ತಪ್ಪು ಅಂತ ಯಾರು ಕೂಡ ಭಾವಿಸಬಾರದು. ಹೈಕಮಾಂಡ್ ಗಮನಿಸಿದರೆ ನಿರ್ಧಾರ ಮಾಡುತ್ತಾರೆ. ನಾವ್ಯಾರು ಅದರ ತೀರ್ಮಾನ ಮಾಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ದಂಪತಿ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿ, ಇಲಾಖೆಯ ಪತಿ-ಪತ್ನಿ ಸಿಬ್ಬಂದಿ ವರ್ಗಾವಣೆಯ ಕುರಿತು ಕಳೆದ ಎರಡು ತಿಂಗಳಿಂದ ಬೇಡಿಕೆ ನೀಡಿದ್ದಾರೆ. ವರ್ಗಾವಣೆ ಮಾಡಲು ನಿಯಮಗಳಿರಲಿಲ್ಲ. ಅಂತರ ಜಿಲ್ಲಾ ವರ್ಗಾವಣೆ ಹಾಗೂ ಪತಿ-ಪತ್ನಿ ವರ್ಗಾವಣೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications