ಮಹಾನಗರದ ಚಿಂತೆ ಬಿಡಿ, ಮಳವಳ್ಳಿ ಕಡೆ ರಸ್ತೆ ಹಿಡಿ
ಬೆಂಗಳೂರು, ಸೆ. 5: ಮಹಾನಗರದ ಜಂಜಾಟಗಳಿಂದ, ಪ್ರತಿದಿನದ ಕೆಲಸದ ಒತ್ತಡದಿಂದ ಮೈ ಜಿಡ್ಡುಟ್ಟಿದಂತಾಗಿದೆಯೇ? ವಾರಾಂತ್ಯದಲ್ಲಿ ಯಾವುದು ವಿಶೇಷ ಸಂಗತಿಗಳಿಲ್ಲ ಎಂದೆನಿಸುತ್ತಿದೆಯೇ? ಹಾಗಾದರೆ ಚಿಂತೆ ಬಿಡಿ, ಮಂಡ್ಯ ಮಳವಳ್ಳಿ ಕಡೆ ರಸ್ತೆ ಹಿಡೀರಿ.
ಹೌದು.. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತ ಸೆ. 6 ಮತ್ತು 7ರಂದು(ಶನಿವಾರ, ಭಾನುವಾರ) ಝಗಮಗಿಸಲಿದೆ. ಜಲಪಾತ 5ನೇ ವರ್ಷದ ಜಲಪಾತೋತ್ಸವಕ್ಕೆ ಸಿದ್ಧವಾಗುತ್ತಿದ್ದು ಲೇಸರ್ ಬೆಳಕು ಮತ್ತು ವಿದ್ಯುತ್ ಕಿರಣಗಳು ಅಂದವನ್ನು ಇಮ್ಮಡಿಗೊಳಿಸಲಿವೆ.(ಭರಚುಕ್ಕಿ ಮತ್ತು ಗಗನಚುಕ್ಕಿ ಜಲಪಾತಗಳು, ಶಿವನಸಮುದ್ರ)

ಈ ಬಾರಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಸಾರಿ ಮಳೆ ಬಂದು ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಜಲನಿರೋಧಕ ವೇದಿಕೆ ನಿರ್ಮಿಸಲಾಗಿದೆ, ಜಲಪಾತದ ಬಳಿ ನಿರ್ಮಾಣವಾಗಿರುವ 'ಶಿವ ವೇದಿಕೆ'ಯಲ್ಲಿ ಮನರಂಜನೆ ಕಾರ್ಯಕ್ರಮಗಳು ನಡೆಯಲಿವೆ.
ಒಂದೆಡೆ ಬೆಳಕಿನ ಚಿತ್ತಾರ, ಇನ್ನೊಂದೆಡೆ ಇಂಪಾದ ಸಂಗೀತ ಕಣ್ಮನಗಳಿಗೆ ಮುದ ನೀಡಲಿದ್ದು, ಬಾಣ ಬಿರುಸುಗಳ ಪ್ರದರ್ಶನವು ನಡೆಯಲಿದೆ.
ಸುಲಭ ಸಾರಿಗೆ ವ್ಯವಸ್ಥೆ
ಪ್ರವಾಸಿಗರ ಅನುಕೂಲಕ್ಕಾಗಿ ಮಂಡ್ಯ, ಮೈಸೂರು, ಮಳವಳ್ಳಿ ತಾಲೂಕಿನ ವಿವಿಧ ಹೋಬಳಿಗಳಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ತೆರಳುವವರು ಮದ್ದೂರು ಮಾರ್ಗವಾಗಿ ಮಳವಳ್ಳಿ ಸೇರಬಹುದು. ಅಲ್ಲದೇ ಪ್ರವಾಸಿಗರಿಗೆ ಜಲಪಾತೋತ್ಸವದ ಎರಡು ದಿನ ಉಚಿತ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ.
ಸುಮಾರು 270 ಅಡಿ ಎತ್ತರದಿಂದ ಧುಮ್ಮಿಕ್ಕುವ ಕಾವೇರಿ ನದಿ ನೀರನ್ನು ಬೆಳಕು ಮತ್ತು ಸಂಗೀತದ ಸಂಯೋಜನೆಯಲ್ಲಿ ಆಸ್ವಾದಿಸಲು ಉತ್ತಮ ಅವಕಾಶವೊಂದು ಎದುರಾಗಿದೆ. ಪ್ರವಾಸಿಗರಿಗೆ ಇದೊಂದು ವಿನೂತನ ರೀತಿಯ ಅನುಭವ ನೀಡುವುದರಲ್ಲಿ ಅನುಮಾನವಿಲ್ಲ ಎಂದೇ ಹೇಳಬಹುದು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications