ನಾಡಗೀತೆಗೆ ದೃಶ್ಯನಮನ ಸಲ್ಲಿಸಿದ ಗಾಲಿ ಜನಾರ್ದನ ರೆಡ್ಡಿ
ಬೆಂಗಳೂರು, ನವೆಂಬರ್ 01: ನಗರದ ಚಾಮುಂಡೇಶ್ವರಿ ಚಲನಚಿತ್ರ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಲಾದ ನಾಡಗೀತೆಗೆ ದೃಶ್ಯನಮನ ದೃಶ್ಯಗೀತೆಯನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಡುಗಡೆ ಮಾಡಿದರು.
ಮಾರ್ಚ್ 2018 ರಿಂದ ಕನ್ನಡ ಚಲನ ಚಿತ್ರರಂಗ ಪ್ರವೇಶಿಸುವ ಉದ್ದೇಶವಿದೆ.ಮುಂಬರುವ ದಿನಗಳಲ್ಲಿ ಕನ್ನಡ ಚಲನಚಿತ್ರರಂಗದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಹೇಳಿದರು.
ನಾನು ಪೋಲೀಸ್ ಕಾನ್ಸ್ ಸ್ಟೇಲ್ ಮಗ. ಶಾಲಾ ದಿನಗಳಲ್ಲಿ ವಿಶ್ವ ಹಿಂದು ಪರಿಷತ್ ಆಯೋಜಿಸುವ ರಾಮಾಯಣ ಮತ್ತು ಮಹಾಭಾರತ ಪಠಣ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಶ್ರೇಯಾಂಕ ಪಡೆದಿದ್ದೆ. ಎಲ್ಲಾ ಸಂಧರ್ಭಗಳಲ್ಲೂ ನನ್ನನ್ನೂ ಸೂಜಿಗಲ್ಲಿನಂತೆ ಸೆಳೆದಿದ್ದು ನಾಡಗೀತೆ.
ಅಮೆರಿಕಾದ ಮ್ಯಾಂಚೆಸ್ಟರ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಸಂಧರ್ಭದಲ್ಲಿ ನಾನು ನಾಡಗೀತೆಗೆ ಧ್ವನಿಗೂಡಿಸಿದ್ದೇನೆ. ನಾನು ದೊಡ್ಡ ಗಾಯಕ ಅಲ್ಲದೇ ಹೋದರೂ ಕೂಡಾ ನಾಡಗೀತೆಗೆ ದನಿಗೂಡಿಸಿದ್ದೇನೆ ಎಂದರು.

ನಾಡು ನುಡಿಯ ಬಗ್ಗೆ ಅಭಿಮಾನವಿದೆ: ಗಾಲಿರೆಡ್ಡಿ
ನಾನು ಮೊದಲಿನಿಂದಲೂ ನಾಡು ನುಡಿಯ ಬಗ್ಗೆಯೂ ಕೂಡಾ ಅಭಿಮಾನ ಹೊಂದಿದ್ದೇನೆ. ಮೊದಲಿನಿಂದಲೂ ಕನ್ನಡ ಚಿತ್ರರಂಗ ನನ್ನನ್ನು ಸೂಜಿಗಲ್ಲಿನಂತೆ ಸೆಳೆದಿದೆ.

ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶ
ಈ ಹಿನ್ನಲೆಯಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದ ಚಿತ್ರರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶ ಹೊಂದಿದ್ದೇನೆ. ಅಲ್ಲದೆ, ರಾಜಕೀಯ ಹಾಗೂ ಚಲನ ಚಿತ್ರರಂಗ ಎರಡೂ ನನ್ನ ಕಣ್ಣುಗಳು ಎಂದರು.

ನಾಡಗೀತೆಗೆ ಹೊಸದೊಂದು ರೂಪ
ನಾಡಗೀತೆಗೆ ಹೊಸದೊಂದು ರೂಪವನ್ನು ನೀಡುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಕಲಾವಿದ ಹಾಗೂ ನಿರ್ದೇಶಕ ಅಯ್ಯಪ್ಪ ಶರ್ಮಾ ಅವರ ಪರಿಕಲ್ಪನೆಯಲ್ಲಿ ಮೂಡಿರುವ ದೃಶ್ಯಗೀತೆಯನ್ನು ಜನರ ಮುಂದಿಡುವ ಪ್ರಯತ್ನ ಇದಾಗಿದೆ ಎಂದರು.

ತಾಂತ್ರಿಕ ವರ್ಗದ ಶ್ರಮ ಸಾರ್ಥಕವೆಂದ ರೆಡ್ಡಿ
ಈ ದೃಶ್ಯಗೀತೆ ಛಾಯಗ್ರಹಣವನ್ನು ರಾಜೇಶ್ ಕಾಟ, ಸಂಗೀತ ಕೌಶಿಕ್ ಹರ್ಷ, ಕಲೆ ಶಶಿಧರ ಅಡಪ ಓದಗಿಸಿದ್ದು, ಲಕ್ಷ್ಮಣರೆಡ್ಡಿ ಸಂಕಲ ಮಾಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಅಯ್ಯಪ್ಪ ಶರ್ಮ ಸೇರಿದಂತೆ ತಾಂತ್ರಿಕ ವರ್ಗದವರು ಪಾಲ್ಗೊಂಡಿದ್ದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications