ಬೆಂಗಳೂರಿನ ಜೂಜು ಅಡ್ಡೆಗಳ ಕಿಂಗ್ ಪಿನ್ ಗೂಂಡಾ ಕಾಯ್ದೆ ಅಡಿ ಸೆರೆ
ಬೆಂಗಳೂರು, ಏಪ್ರಿಲ್ 21: ರಾಜಧಾನಿಯಲ್ಲಿ ರಿಕ್ರಿಯೇಷನ್ ಕ್ಲಬ್, ವಿಡಿಯೋ ಗೇಮ್ನಂಥ ಜೂಜು ಅಡ್ಡೆಗಳನ್ನು ನಡೆಸುತ್ತಿದ್ದ ಪ್ರಮುಖ ಕಿಂಗ್ ಪಿನ್ ಹರಿರಾಜ್ ಶೆಟ್ಟಿ ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಧಾನಿಯಲ್ಲಿ ರಿಕ್ರಿಯೇಷನ್ ಕ್ಲಬ್ ಮತ್ತು ವಿಡಿಯೊ ಗೇಮ್ ಸೆಂಟರ್ ಗಳನ್ನು ನಡೆಸುತ್ತಿದ್ದ. ಈ ಮೂಲಕ ಬೆಂಗಳೂರಿನಲ್ಲಿ ದೊಡ್ಡ ಜಾಲ ಸೃಷ್ಟಿಸಿದ್ದ. ಈತನ ಅಕ್ರಮ ಜಾಲದ ವಿರುದ್ಧ ಕ್ರಮ ಜರುಗಿಸುವ ಪೊಲೀಸರಿಗೆ ಅಮಿಷ ಒಡ್ಡುವ ಮೂಲಕ ಖೆಡ್ಡಾಗೆ ಬೀಳಿಸಿ ತೇಜೋವಧೆ ಮಾಡುತ್ತಿದ್ದ ಎನ್ನಲಾಗಿದೆ.
ಬಿ. ಹರಿರಾಜ್ ಶೆಟ್ಟಿ ವಿರುದ್ಧ ವಯ್ಯಾಲಿಕಾವಲ್, ಹೈಗ್ರೌಂಡ್ಸ್, ಕಬ್ಬನ್ ಪಾರ್ಕ್, ಕೋರಮಂಗಲ, ಅಶೋಕನಗರ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ಈವರೆಗೂ ಹದಿಮೂರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಇಷ್ಟಾಗಿಯೂ ರಾಜಧಾನಿಯಲ್ಲಿ ತನ್ನ ಏಜೆಂಟರನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಇಸ್ಪೀಟ್ ದಂಧೆ ಆಡಿಸುತ್ತಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರಿಗೆ ಚಿತ್ರ ಹಿಂಸೆ ನೀಡುತ್ತಿದ್ದ.

Recommended Video
ಈತನ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ನೀಡಿದ ವರದಿಯನ್ನು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅನುಮೋದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್ ರಾಜ್ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಹರೀಶ್ ರಾಜ್ ನನ್ನು ಬಂಧಿಸಲಾಗಿದೆ. ಜೂಜುಕೋರರ ವಿರುದ್ಧ ಇದೇ ಪ್ರಥಮ ಬಾರಿಗೆ ಗುಂಡಾ ಕಾಯ್ದೆ ಅಸ್ತ್ರ ಪ್ರಯೋಗಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications