ಬೆಂಗಳೂರು : ಗಣೇಶ ವಿಸರ್ಜನೆಗೆ 36 ಕೆರೆ, 269 ಸಂಚಾರಿ ಘಟಕದ ವ್ಯವಸ್ಥೆ

ಬೆಂಗಳೂರು, ಆಗಸ್ಟ್, 25 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶಮೂರ್ತಿಗಳ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಮಾಡಿದೆ. ರಾತ್ರಿ 10.30ರ ಬಳಿಕ ಗಣೇಶಮೂರ್ತಿಗಳ ವಿಸರ್ಜನೆ ಮಾಡುವಂತಿಲ್ಲ.

ಬಿಬಿಎಂಪಿ ಮಲ್ಲೇಶ್ವರಂನ ಸ್ಯಾಂಕಿ ಸೇರಿದಂತೆ 36 ಕೆರೆಗಳಲ್ಲಿ ತಾತ್ಕಾಲಿಕ ಪುಷ್ಕರಣಿಗಳನ್ನು ನಿರ್ಮಿಸಿದೆ. ಪಾಲಿಕೆ ವತಿಯಿಂದ 227, ಮಾಲಿನ್ಯ ನಿಯಂತ್ರಣ ಮಂಡಳಿ ವಯಿಯಿಮದ 42 ಸೇರಿ ಒಟ್ಟು 269 ಸಂಚಾರಿ ಘಟಕಗಳ ವ್ಯವಸ್ಥೆ ಮಾಡಲಾಗಿದೆ.

Ganesh Chaturthi : Lists of BBMP immersion ponts

ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಗಣೇಶ ಚತುರ್ಥಿ ಸಮಾರಂಭದಲ್ಲಿ ಪ್ಲಾಸ್ಟಿಕ್ ಅಥವ ಪರಿಸರಕ್ಕೆ ಹಾನಿ ಮಾಡುವ ಬ್ಯಾನರ್, ಬಂಟಿಗ್ಸ್ ಬಳಸುವುದನ್ನು ನಿಷೇಧಿಸಲಾಗಿದೆ' ಎಂದರು.

'ನಗರದಲ್ಲಿ ರಾತ್ರಿ 10.30ರ ಬಳಿಕ ಗಣೇಶಮೂರ್ತಿ ವಿಸರ್ಜನೆ ಮಾಡಲು ಅವಕಾಶವಿಲ್ಲ. ವಿಸರ್ಜನೆ ವೇಳೆ ಕೆರೆಗಳ ಬಳಿ ಪಟಾಕಿ ಸಿಡಿಸುವುದು, ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ಅಗ್ನಿ ಶಾಮಕ ದಳದ ಮತ್ತು ಬಿಬಿಎಂಪಿ ಸಿಬ್ಬಂದಿಗಳು ನೀಡುವ ಸೂಚನೆಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು' ಎಂದು ಮೇಯರ್ ಹೇಳಿದರು.

ಪಾಲಿಕೆ ವೆಬ್ ಸೈಟ್ ನೋಡಿ : ಗಣೇಶ ವಿಸರ್ಜನೆಗೆ ಗುರುತಿಸಿರುವ ಕೆರೆಗಳು, ಪುಷ್ಕರಣಿ, ಸಂಚಾರಿ ಘಟಕಗಳು ನಿಲ್ಲುವ ಸ್ಥಳಗಳಗಳ ಬಗ್ಗೆ ಮಾಹಿತಿ ಪಡೆಯಲು ಪಾಲಿಕೆಯ ವೆಬ್ ಸೈಟ್‌ ನೋಡಬಹುದಾಗಿದೆ. ಅಗತ್ಯ ಮಾಹಿತಿಗಳು ಬೇಕಾದಲ್ಲಿ 22660000/22221188 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+