ಗಣೇಶ ಹಬ್ಬ: ಆಚರಣೆಗೆ ಬಿಬಿಎಂಪಿ ಮಹತ್ವದ ಸೂಚನೆ, ವಿಸರ್ಜನೆಗೆ ಎಲ್ಲೆಲ್ಲಿ ವ್ಯವಸ್ಥೆ ಇದೆ?
ಬೆಂಗಳೂರು, ಸೆಪ್ಟಂಬರ್ 01: ರಾಜಧಾನಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಬೇಕು. ಈ ಮೂಲಕ ಗಣೇಶೋತ್ಸವಕ್ಕೆ ಸಹಕರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಜೊತೆ ಶುಕ್ರವಾರ ಜಂಟಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಪ್ರತಿ ವರ್ಷದಂತೆ ಬಿಬಿಎಂಪಿ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ನಗರದ ಕೆಲವು ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುತ್ತದೆ. ಅಂತಹ ಪ್ರದೇಶಗಳಲ್ಲಿ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.
ವಿಸರ್ಜನಾ ಸ್ಥಳಗಳಲ್ಲಿ ಈ ವ್ಯವಸ್ಥೆಗೆ ಸೂಚನೆ
ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್ ಅಳವಡಿಸಬೇಕು. ಎಲ್ಲ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯ ಪ್ರಕಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು.

ಮುಖ್ಯವಾಗಿ ಗಣೇಶ ಮೂರ್ತಿ ವಿಸರ್ಜಜನಾ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸುವಂತೆ ಅವರು ಕಟ್ಟಿನಿಟ್ಟಿನ ತಾಕೀತು ಮಾಡಿದರು.
ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು (ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್ಗಳ ಮೂಲಕ ಅಗಿದ್ದಾಗ ತೆರವು ಮಾಡಬೇಕು. ಅಲ್ಲಿ ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ತಿಳಿಸಿದರು.
ಪೊಲೀಸರಿಗೆ ನೀಡಿದ ಸೂಚನೆ ಏನು?
ಗಣೇಶ್ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್ಗಳ ವ್ಯವಸ್ಥೆ, ಕ್ರೇನ್ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಹೇಳಿದರು.
ನಗರದಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದೆ. ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದರು.
ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್/ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹ ಸಹಕರಿಸುವಂತೆ ಮನವಿ ಮಾಡಿದರು.
ಪರಿಸರ ಸ್ನೇಹಿ ಮೂರ್ತಿ ಪೂಜೆಗೆ ಮನವಿ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ/ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಮುಖ್ಯ ಆಯುಕ್ತರು ಮನವಿ ಮಾಡಿದ್ದಾರೆ.
ಸಭೆಯಲ್ಲಿ ಬಿಬಿಎಂಪಿಯ ಎಲ್ಲಾ ವಿಶೇಷ/ವಲಯ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಉಪ ಆಯುಕ್ತರು(ಆಡಳಿತ), ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
-
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications