ಕಬ್ಬಿನ ಗಣೇಶನಿಗೆ 4 ಸಾವಿರ ಕೆಜಿ ಬೃಹತ್ ಲಾಡು ಅರ್ಪಣೆ
Recommended Video

ಬೆಂಗಳೂರು, ಸೆಪ್ಟೆಂಬರ್ 11: ಗಣೇಶ ಚತುರ್ಥಿಯ ಅಂಗವಾಗಿ ನಗರದಲ್ಲಿ ಪ್ರಪ್ರಥಮ ಬಾರಿಗೆ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ 4 ಸಾವಿರ ಕೆಜಿ ತೂಕದ ಬೃಹದಾಕಾರದ ಲಾಡನ್ನು ಇಂದು ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.
ಇದೇ ವೇಳೆ 50 ಟನ್ ಕಬ್ಬಿನಲ್ಲಿ ಮಾಡಿದ ನಗರದಲ್ಲೇ ಅತಿದೊಡ್ಡ ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್ ಮೋಹನ ರಾಜ್ ಹೇಳಿದರು.
ಪ್ರತಿಬಾರಿ ಏನಾದರೂ ವಿಶಿಷ್ಟವಾದದ್ದನ್ನು ಭಕ್ತರಿಗೆ ನೀಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ 4 ಸಾವಿರ ತೂಕದ ಬೃಹತ್ ಲಾಡು ನಿರ್ಮಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು.
ಗಣೇಶ ಚತುರ್ಥಿಯ ಅಂಗವಾಗಿ ನಗರದಲ್ಲಿ ಪ್ರಪ್ರಥಮ ಬಾರಿಗೆ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 4 ಸಾವಿರ ಕೆಜಿ ತೂಕದ ಬೃಹದಾಕಾರದ ಲಾಡು ನಿರ್ಮಿಸಲಾಗಿದೆ. ಗಣೇಶ ಹಬ್ಬದ ನಂತರ ಈ ಲಾಡುವನ್ನು ಭಕ್ತರಿಗೆ ನೀಡಲು ದೇವಸ್ಥಾನದ ಮಂಡಳಿ ನಿರ್ಧರಿಸಿದೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ.

4 ಸಾವಿರ ತೂಕದ ಬೃಹತ್ ಲಾಡು
ಪ್ರತಿಬಾರಿ ಏನಾದರೂ ವಿಶಿಷ್ಟವಾದದ್ದನ್ನು ಭಕ್ತರಿಗೆ ನೀಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ 4 ಸಾವಿರ ತೂಕದ ಬೃಹತ್ ಲಾಡು ನಿರ್ಮಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು. ಈ ಬೃಹತ್ ಗಾತ್ರದ ಲಾಡು ನಿರ್ಮಿಸಲು 1000 ಕೆಜಿ ಕಡಲೆ ಹಿಟ್ಟು, 2000 ಕೆಜಿ ಸಕ್ಕರೆ, 700 ಕೆಜಿ ಸನ್ ಪ್ಯೂರ್ ಎಣ್ಣೆ, 300 ಕೆಜಿ ತುಪ್ಪ, 50 ಕೆಜಿ ಗೋಡಂಬಿ, 50 ಕೆಜಿ ಒಣ ದ್ರಾಕ್ಷಿ, 5 ಕೆಜಿ ಏಲಕ್ಕಿಯನ್ನು ಬಳಸಿ ಬೃಹತ್ ಗಾತ್ರದ ಲಾಡು ನಿರ್ಮಿಸಲಾಗುವುದು ಎಂದರು.

ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿ
ಅಲ್ಲದೆ, ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುವುದು. ಈ ಮೂರ್ತಿ ಪರಿಸರ ಸ್ನೇಹಿಯಾಗಿರಲಿದೆ. ಅಲ್ಲದೆ ಪರಿಸರಕ್ಕೆ ಯಾವುದೇ ರೀತಿಯಲ್ಲೂ ಹಾನಿಯನ್ನು ಉಂಟು ಮಾಡದ ರೀತಿಯಲ್ಲಿ ನಿರ್ಮಿಸಲಾಗುವುದು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದಾರೆ ಎಂದರು. ಗೌರಿ ಹಬ್ಬದ ದಿನದಿಂದ ಈ ಬೃಹತ್ ಲಾಡು ಹಾಗೂ ಕಬ್ಬಿನ ಗಣಪತಿಯನ್ನು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದರು

ಬೃಹತ್ ಲಡ್ಡು ತಯಾರಿಸುವುದು
ಹೈದರಾಬಾದ್, ಮುಂಬೈ ಹಾಗೂ ಇನ್ನಿತರ ಕಡೆಗಳಲ್ಲಿ ಈ ರೀತಿ ಬೃಹತ್ ಲಡ್ಡು ತಯಾರಿಸುವುದು ಸಾಮಾನ್ಯ ಸಂಗತಿ ಎನ್ನಬಹುದು. ಈ ಹಿಂದೆ ಹೈದರಾಬಾದಿನ ಖೈರ್ತಾಬಾದ್ ನಲ್ಲಿ ೫೬ ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, 4 ಸಾವಿರ ತೂಕದ ಲಡ್ಡುವನ್ನು ನೈವೇದ್ಯ ಮಾಡಲಾಗಿತ್ತು.

ಸಾವಿರಾರು ಕೆಜಿ ತೂಕದ ಲಡ್ಡು ತಯಾರಿಕೆ
ಕನಿಷ್ಟ 1,600 ಕೆಜಿ ಸಕ್ಕರೆ, 1,000 ಕೆಜಿ ಚನ್ನದಾಲ್ ಅಥವಾ ಹಿಟ್ಟು, 50 ಕೆಜಿ ಗೋಡಂಬಿ, 50 ಕೆಜಿ ಒಣ ದ್ರಾಕ್ಷಿ, 5 ಕೆಜಿ ಏಲಕ್ಕಿ, ಕರ್ಪೂರ, ಎಸೆನ್ಸ್ ಬೇಕಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ಸಾಮಾಗ್ರಿಗಳು ಬದಲಾಗಲಿವೆ, ಮುಂಬೈನಲ್ಲಿ ಬೃಹತ್ ಗಣೇಶ ಮೂರ್ತಿ, ಲಡ್ಡುಗಳಿಗೆ ವಿಮೆ ಕೂಡಾ ಮಾಡಿಸಲಾಗುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications