ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 15 ದಿನ ಗಡುವು
ಬೆಂಗಳೂರು, ಮೇ 6 : ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಕಸ ಮತ್ತು ಪ್ಲಾಸ್ಟಿಕ್ ಸಮಸ್ಯೆಯನ್ನು ಬಗೆಹರಿಸಲು ಬಿಬಿಎಂಪಿ ಅಧಿಕಾರಿಗಳು 15 ದಿನಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗಡುವು ನೀಡಿದ್ದಾರೆ.
ಸೋಮವಾರ ಕೆ.ಆರ್.ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರರೊಂದಿಗೆ ಪರಿಶೀಲನೆ ನಡೆಸಿದ ರಾಮಲಿಂಗಾ ರೆಡ್ಡಿ, ಅಂತಿಮ ಗಡುವಿನೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭೆ ಚುನಾವಣೆ ನೆಪ ಹೇಳಿಕೊಂಡು ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಗಮನಹರಿಸಿಲ್ಲ. ಕಳೆದ 2 ತಿಂಗಳಿನಿಂದ ಕಸ ವಿಲೇವಾರಿ ಕಾರ್ಯ ಸಮರ್ಪಕವಾಗಿ ನಡೆದಿಲ್ಲ ಎಂದ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಸದ ಗುತ್ತಿಗೆದಾರರಿಗೆ ತಪ್ಪದೇ ಬಿಲ್ ಪಾವತಿಯಾಗುತ್ತಿದೆ. ಆದರೆ, ಕಸ ವಿಲೇವಾರಿ ಆಗುತ್ತಿಲ್ಲ ಎಂದು ಸಚಿವರು ದೂರಿದರು. [ಕಸದ ಸಮಸ್ಯೆ ನಿವಾರಣೆಗೆ ವಿದೇಶಿ ತಂತ್ರಜ್ಞಾನ]
ಕಸ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ 15 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಈ ವಿಚಾರದ ಕುರಿತು ಬಿಬಿಎಂಪಿಯಲ್ಲಿ ಮೇ 25ರಂದು ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಆಗಲೂ ಸಮಸ್ಯೆ ಬಗೆಹರಿಯದಿದ್ದರೆ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಸೋಮಾರಿಗಳು : ಕಸ ವಿಲೇವಾರಿ ಕುರಿತು ಬಿಬಿಎಂಪಿ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರು ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲರೂ ತುಂಬಾ ಸೋಮಾರಿಗಳು ಎಂದು ಮೇಯರ್ ಕಟ್ಟೆ ಸತ್ಯನಾರಾಯಣ ಆರೋಪಿಸಿದ್ದಾರೆ.
ನಗರದಲ್ಲಿ ಕಸ ಸಮಸ್ಯೆ ಹೆಚ್ಚುತ್ತಲೇ ಇದ್ದು ಜಂಟಿ ಆಯುಕ್ತರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಸ ವಿಲೇವಾರಿ ನಿರ್ವಹಣೆಯನ್ನು ಕೇವಲ ಕಿರಿಯ ಆರೋಗ್ಯಾಧಿಕಾರಿಗಳಷ್ಟೇ ಮಾಡುತ್ತಿದ್ದು, ಇದರಲ್ಲಿ ಹಿರಿಯ ಆರೋಗ್ಯಾಧಿಕಾರಿಗಳು ಕೈ ಜೋಡಿಸುತ್ತಿಲ್ಲ ಎಂದು ಅವರು ದೂರಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications