ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 15 ದಿನ ಗಡುವು
ಬೆಂಗಳೂರು, ಮೇ 6 : ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಕಸ ಮತ್ತು ಪ್ಲಾಸ್ಟಿಕ್ ಸಮಸ್ಯೆಯನ್ನು ಬಗೆಹರಿಸಲು ಬಿಬಿಎಂಪಿ ಅಧಿಕಾರಿಗಳು 15 ದಿನಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗಡುವು ನೀಡಿದ್ದಾರೆ.
ಸೋಮವಾರ ಕೆ.ಆರ್.ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರರೊಂದಿಗೆ ಪರಿಶೀಲನೆ ನಡೆಸಿದ ರಾಮಲಿಂಗಾ ರೆಡ್ಡಿ, ಅಂತಿಮ ಗಡುವಿನೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲೋಕಸಭೆ ಚುನಾವಣೆ ನೆಪ ಹೇಳಿಕೊಂಡು ಅಧಿಕಾರಿಗಳು ಕಸ ವಿಲೇವಾರಿ ಬಗ್ಗೆ ಗಮನಹರಿಸಿಲ್ಲ. ಕಳೆದ 2 ತಿಂಗಳಿನಿಂದ ಕಸ ವಿಲೇವಾರಿ ಕಾರ್ಯ ಸಮರ್ಪಕವಾಗಿ ನಡೆದಿಲ್ಲ ಎಂದ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಸದ ಗುತ್ತಿಗೆದಾರರಿಗೆ ತಪ್ಪದೇ ಬಿಲ್ ಪಾವತಿಯಾಗುತ್ತಿದೆ. ಆದರೆ, ಕಸ ವಿಲೇವಾರಿ ಆಗುತ್ತಿಲ್ಲ ಎಂದು ಸಚಿವರು ದೂರಿದರು. [ಕಸದ ಸಮಸ್ಯೆ ನಿವಾರಣೆಗೆ ವಿದೇಶಿ ತಂತ್ರಜ್ಞಾನ]
ಕಸ ವಿಲೇವಾರಿ ಮತ್ತು ಪ್ಲಾಸ್ಟಿಕ್ ನಿಯಂತ್ರಣದ ಬಗ್ಗೆ 15 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಈ ವಿಚಾರದ ಕುರಿತು ಬಿಬಿಎಂಪಿಯಲ್ಲಿ ಮೇ 25ರಂದು ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಆಗಲೂ ಸಮಸ್ಯೆ ಬಗೆಹರಿಯದಿದ್ದರೆ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಸೋಮಾರಿಗಳು : ಕಸ ವಿಲೇವಾರಿ ಕುರಿತು ಬಿಬಿಎಂಪಿ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರು ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲರೂ ತುಂಬಾ ಸೋಮಾರಿಗಳು ಎಂದು ಮೇಯರ್ ಕಟ್ಟೆ ಸತ್ಯನಾರಾಯಣ ಆರೋಪಿಸಿದ್ದಾರೆ.
ನಗರದಲ್ಲಿ ಕಸ ಸಮಸ್ಯೆ ಹೆಚ್ಚುತ್ತಲೇ ಇದ್ದು ಜಂಟಿ ಆಯುಕ್ತರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಸ ವಿಲೇವಾರಿ ನಿರ್ವಹಣೆಯನ್ನು ಕೇವಲ ಕಿರಿಯ ಆರೋಗ್ಯಾಧಿಕಾರಿಗಳಷ್ಟೇ ಮಾಡುತ್ತಿದ್ದು, ಇದರಲ್ಲಿ ಹಿರಿಯ ಆರೋಗ್ಯಾಧಿಕಾರಿಗಳು ಕೈ ಜೋಡಿಸುತ್ತಿಲ್ಲ ಎಂದು ಅವರು ದೂರಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications