ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ!
ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಳವಾಗಿದ್ದು. ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿರುವುದು ಹೆಚ್ಚಾಗಿದೆ. ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಯು ಕಳೆದ 15 ದಿನಗಳಿಂದ ಹೆಚ್ಚಳವಾಗಿದೆ. ಇದೀಗ ಬೆಂಗಳೂರಿನಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು. ಕೆಲವು ಕಡೆಗಳಲ್ಲಿ ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದ ಕಸದ ಸಮಸ್ಯೆಯನ್ನು ನಿವಾರಣೆ ಮಾಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಿರುವ ಅವರು, ನಗರದಲ್ಲಿ ಮಿಟ್ಟಗಾನಹಳ್ಳಿ ಹಾಗೂ ಕಣ್ಣೂರು ಭೂಭರ್ತಿ ಪ್ರದೇಶದದಲ್ಲಿ ಕಸ ವಿಲೇವಾರಿ ಮಾಡುವ ವಿಚಾರವಾಗಿ ಸ್ಥಳೀಯರಿಂದ ಆಗಿದ್ದ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದೆ. ಎಂದಿನಂತೆ ಕಸ ವಿಲೇವಾರಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಆದರೆ ಮಂಗಳವಾರವೂ ನಗರದ ವಿವಿಧ ಭಾಗದಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿರುವುದು ಮುಂದುವರಿದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಕ್ಕೆ ಸಂಬಂಧಿಸಿದಂತೆ ಮಿಶ್ರ ಕಸವನ್ನು ಭೂಭರ್ತಿ ಘಟಕ, ಹಸಿ ಕಸವನ್ನು ಸಂಸ್ಕರಣಾ ಘಟಕಗಳು ಹಾಗೂ ಒಣ ಕಸವನ್ನು ಕಸ ತ್ಯಾಜ್ಯ ಸಂಗ್ರಹಣಾ ಘಟಕಗಳಿಗೆ ಕಳುಹಿಸಲಾಗುತ್ತಿದೆ. ಘನತ್ಯಾಜ್ಯಕ್ಕಾಗಿ ಹೊಸ ಯೋಜನೆಯಂತೆ ಟೆಂಡರ್ ಕರೆಯಲಾಗಿತ್ತು. ಆ ಟೆಂಡರ್ನಲ್ಲಿ ಭಾಗವಹಿಸಿದ್ದವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಹೀಗಾಗಿ, ಟೆಂಡರ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆದಾರರು ಯಾಕೆ ಭಾಗವಹಿಸಿಲ್ಲ ಎನ್ನುವ ಕಾರಣಗಳನ್ನು ಗುರುತಿಸಲಾಗಿದೆ. ಇದೀಗ ಎಲ್ಲಾ ಅಂಶಗಳನ್ನು ಸೇರ್ಪಡೆ ಮಾಡಿ ಪುನರ್ ಟೆಂಡರ್ ಕರೆಯಲಾಗುತ್ತಿದೆ. ಅಲ್ಲದೆ ಘನತ್ಯಾಜ್ಯ ಸಮಗ್ರ ವಿಲೇವಾರಿಗಾಗಿ ಹೊಸದಾಗಿ ಜಾಗಗಳನ್ನು ಕೂಡಾ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ಸ್ಥಳೀಯರು ಹಾಗೂ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ನಡುವೆ ಕೆಲ ಭಿನ್ನಾಭಿಪ್ರಾಯಗಳಿಂದ ಕಸದ ಸಮಸ್ಯೆ ಉಂಟಾಗಿತ್ತು. ಬಹುತೇಕ ಸಮಸ್ಯೆಯನ್ನು ಬಗೆಹರಿಸಲಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಭಿವೃದ್ಧಿಗಾಗಿ ವ್ಯಯಿಸಬೇಕಿರುವ ಹಣದ ವಿಚಾರವಾಗಿ ಟೆಂಡರ್ ಮಾಡಿ ಕಾರ್ಯಾದೇಶ ನೀಡಿ ಶೀಘ್ರ ಕೆಲಸ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ರಾತ್ರಿ ವೇಳೆ ಕಸ ವಿಲೇವಾರಿ ಮಾಡಲಾಗುತ್ತಿದೆ. ಹಗಲಿನಲ್ಲಿಯೂ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇರುವ ಸಣ್ಣ-ಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಇರುವ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಎಂದು ಹೇಳಿದರು.
ಲಿಚೆಟ್ ಸಂಸ್ಕರಣೆಗೆ ಕ್ರಮ: ಮಿಟ್ಟಗಾನಹಳ್ಳಿ ಭೂಭರ್ತಿ ಘಟಕದಲ್ಲಿ 275 ಕೋಟಿ ಲೀಟರ್ ಲಿಚೆಟ್ ಸಂಗ್ರಹವಾಗಿದೆ. ಈ ನೀರಿನ್ನು ಸಂಸ್ಕರಿಸಲು ಟೆಂಡರ್ ಕರೆಯಲಾಗಿದ್ದು. 3 ರಿಂದ 4 ವರ್ಷಗಳಲ್ಲಿ ಸಮಸ್ಯೆ ಬಗೆಹರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೀಗ 100 ಕೆ.ಎಲ್.ಡಿ ಹಾಗೂ 25 ಕೆ.ಎಲ್.ಡಿ ಸಂಸ್ಕರಣ ಘಟಕಗಳಿವೆ. ಹೊಸದಾಗಿ 2000 ಕೆ.ಎಲ್.ಡಿ ಘಟಕವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರ ಮೂಲಕ ಲಿಚೆಟ್ ಅನ್ನು ಸಂಸ್ಕರಿಸಲಾಗುವುದು. ಲಿಚೆಟ್ ಸಂಸ್ಕರಣೆಗಾಗಿ ಸರಾಸರಿ 474 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂದಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications