ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ತ್ಯಾಜ್ಯಮುಕ್ತ ಮಾಡ್ತಾರೆ ಹೇಗೆ?
ಬೆಂಗಳೂರು, ಜು.24: ಲಾಲ್ಬಾಗ್ನಲ್ಲಿ ಆಗಸ್ಟ್ 4 ರಿಂದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆರಂಭವಾಗಲಿದೆ.
ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ತ್ಯಾಜ್ಯಮುಕ್ತವನ್ನಾಗಿಸಲು ತೋಟಗಾರಿಕೆ ಇಲಾಖೆ ಆಲೋಚಿಸಿದೆ, ಒಂದೊಮ್ಮೆ ಮಳಿಗೆಗಳು ಸ್ವಚ್ಛತೆ ಕಾಪಾಡದಿದ್ದರೆ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರದರ್ಶನದ ವೇಳೆ ಮತ್ತು ಮುಗಿದ ನಂತರ ಯಾರೂ ತಮ್ಮಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ವಿಂಗಡಿಸಿ ವಿಲೇವಾರಿ ಮಾಡುವುದಿಲ್ಲವೋ ಅಂತಹ ಮಳಿಗೆದಾರರ ಠೇವಣಿ ಹಣವನ್ನು ಮುಟ್ಟುಗೋಲು ಹಾಕಿಕೊಂಡು ಆ ಹಣದಲ್ಲಿ ಸ್ವಚ್ಛಗೊಳಿಸಲಾಗುತ್ತದೆ.ಫಲಪುಷ್ಪ ಪ್ರದರ್ಶನದ ವೇಳೆ ಉದ್ಯಾನದಲ್ಲಿ ಸುಮಾರು 120 ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತದೆ. ಈ ವೇಳೆ ಸಾಕಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ.

ಕೆಲವು ಮಳಿಗೆಗಳು ಉದ್ಯಾನದ ಪರಿಸರಕ್ಕೆ ಧಕ್ಕೆಯಾಗದಂತೆ ತ್ಯಾಜ್ಯ ವಿಂಗಡಿಸಿ, ವಿಲೇವಾರಿ ಮಾಡುತ್ತದೆ. ಆದರೆ ಕೆಲವರು ಪ್ರದರ್ಶನ ಮುಗಿದ ನಂತರ ತ್ಯಾಜ್ಯ ಸ್ವಚ್ಛಗೊಳಿಸದೆ, ಎಲ್ಲೆಂದರಲ್ಲಿ ಎಸೆದು ಹೊರಟುಬಿಡುತ್ತಾರೆ, ಇದರಿಂದ ಉದ್ಯಾನದ ಅಂದಕ್ಕೆ ಧಕ್ಕೆಯಾಗುವುದಷ್ಟೇ ಅಲ್ಲದೆ ತೀವ್ರ ಮಾರಕವೂ ಹೌದು.
ಉರಗ ತಜ್ಞರು, ಜೇನು ತಜ್ಞರು, ಶ್ವಾನ ತಜ್ಞರು ಹೀಗೆ ವಿವಿಧ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಅಧಿಕಾರಿಗಳು ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಯಾವುದೇ ಅಹಿತರಕರ ಘಟನೆಗಳು ನಡೆಯದ ರೀತಿಯಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications