ಬೆಂಗಳೂರಲ್ಲಿ ಮಳೆ ಜೊತೆ ಕಸ ಪ್ರಾಬ್ಲಂ, ಮೂರು ದಿನದಲ್ಲಿ ಇಷ್ಟು ಸಾವಿರ ಟನ್ ಕಸ!
ಬೆಂಗಳೂರಲ್ಲಿ ಧಾರಾಕಾರ ಮಳೆಯಾಗ್ತಿದೆ. ಇನ್ನೂ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿದ್ದು, ಹಸಿಕಸ ಗೊಬ್ಬು ನಾರುತ್ತಿದೆ. ಮಳೆಯಿಂದ ರಸ್ತೆಬದಿಯಲ್ಲಿ ಹಾಗೂ ಬ್ಲಾಕ್ಸ್ಪಾಟ್ಗಳಲ್ಲಿ ಬಿದ್ದಿರೊ ಕಸವನ್ನು ತಗಿಯೋಕೆ ಆಗ್ತಿಲ್ಲ. ಮಳೆ, ರಸ್ತೆಗುಂಡಿ ಹಾಗೂ ಕಸದ ಸಮಸ್ಯೆಯಿಂದ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಸಿಕಸ ಹಾಗೂ ಒಣಕಸ ಉತ್ಪತ್ತಿ ಪ್ರಮಾಣ ಹೆಚ್ಚಾಗ್ತಿದೆ. ಬಿಬಿಎಂಪಿಯು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬೆಂಗಳೂರಿನಲ್ಲಿ ಕಸ ತೆಗೆದುಹಾಕಲು ಶ್ರಮಿಸುತ್ತಿದೆ. ಆದರೆ, ಇಂದಿಗೂ ಬೆಂಗಳೂರಲ್ಲಿ ಕಸ ಸಮಸ್ಯೆ ಪರಿಹಾರ ಆಗಿಲ್ಲ. ಅದರಲ್ಲೂ ಹಬ್ಬದ ಸೀಸನ್ಗಳು ಬಂದ್ರಂತೂ ರಸ್ತೆ ಹಾಗೂ ಮಾರುಕಟ್ಟೆ ರೋಡ್ಗಳಲ್ಲಿ ರಾಶಿ..ರಾಶಿ ಕಸ ಬೀಳುತ್ತದೆ. ಇದನ್ನು ಬಿಬಿಎಂಪಿಯು ಮೂರ್ನಾಲ್ಕು ದಿನ ಸ್ವಚ್ಛ ಮಾಡಿದ್ರೂ, ರಸ್ತೆಗಳು ಸ್ವಚ್ಛವಾಗ್ತಿಲ್ಲ. ಈ ನಡುವೆ ಧಾರಾಕಾರ ಮಳೆಯಾಗ್ತಿರೋದು ಕೂಡ ಕಸ ವಿಲೇವಾರಿಗೆ ತೊಡಕಾಗಿದೆ.

ದಸರಾ ಹಬ್ಬ ಹಿನ್ನೆಲೆ ರಸ್ತೆ ಬದಿ, ಮಾರುಕಟ್ಟೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿ ಹೆಚ್ಚಾಗಿದೆ. ಕಳೆದೆರಡು ದಿನಗಳಿಂದ ಬಿಬಿಎಂಪಿ ಕಸ ವಿಲೇವಾರಿ ಮಾಡ್ತಿದೆ. ಆದರೆ, ಮಳೆ ಕಾರಣದಿಂದಾಗಿ ಬೆಂಗಳೂರಿನ ಹಲವು ಭಾಗದಲ್ಲಿ ಕಸ ಇನ್ನೂ ಅಲ್ಲಲ್ಲೇ ಇದೆ. ಬಿಬಿಎಂಪಿಯ ಪೌರಕಾರ್ಮಿಕರು ಕೆಲವು ಕಡೆ ಮಳೆಯ ನಡುವೆಯೂ ಕಸ ವಿಲೇವಾರಿ ಮಾಡ್ತಿದ್ದಾರೆ.
ದಸರಾ ಹಬ್ಬದ ಹಿನ್ನೆಲೆ ಆಯುಧ ಪೂಜೆಗಾಗಿ ನಗರದ ಬಹುತೇಕ ಮಾರುಕಟ್ಟೆ ಹಾಗೂ ರಸ್ತೆ ಬದಿಗಳಲ್ಲಿ ಬಾಳೆ ಕಂದು, ಬೂದು ಕುಂಬಳಕಾಯಿ, ಎಲೆಗಳು ಹಾಗೂ ಹೂವು ಮಾರಾಟ ಮಾಡಲಾಗಿತ್ತು. ಇದರಿಂದ ಕಸ ಜಾಸ್ತಿಯಾಗಿದೆ. ಈ ಕಸವನ್ನು ಅಲ್ಲಲ್ಲೇ ಬಿಡಲಾಗಿದೆ. ಈ ಕಸವನ್ನು ಬಿಬಿಎಂಪಿ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿ. ಸಂಸ್ಥೆಯಿಂದ ವಿಲೇವಾರಿ ಮಾಡಲಾಗ್ತಿದೆ.
ನಗರದಲ್ಲಿ ಪ್ರತಿನಿತ್ಯ ಸರಿಸುಮಾರು 4900 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ದಸರಾ ಹಬ್ಬದ ಇದ್ದಿದ್ದರಿಂದ ಕಸ ಜಾಸ್ತಿಯಾಗಿದೆ. ಅಕ್ಟೋಬರ್ 12ಕ್ಕೆ 6306 ಮೆ.ಟನ್, ಅ.13ಕ್ಕೆ 5561 ಮೆ.ಟನ್ ಹಾಗೂ ಸೋಮವಾರ ಅಂದಾಜು 5866 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗಿದೆ. ಹಸಿ ತ್ಯಾಜ್ಯವನ್ನು ಸಂಸ್ಕರಣಾ ಘಟಕಗಳು ಹಾಗೂ ಮಿಶ್ರ ತ್ಯಾಜ್ಯವನ್ನು ಲ್ಯಾಂಡ್ ಫಿಲ್ನಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಬಿಬಿಎಂಪಿ ಹೇಳಿದೆ.
ಮಾರುಕಟ್ಟೆಗಳಲ್ಲಿ ಕಸದ ರಾಶಿ: ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳಲ್ಲಿ ಕಸದ ರಾಶಿಯೇ ಸೃಷ್ಟಿಯಾಗಿದೆ. ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಾರುಕಟ್ಟೆಗಳು ಕೆಸರು ಗದ್ದೆಯಂತೆ ಬದಲಾಗಿದೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್ ಮಾರುಕಟ್ಟೆ, ಗಾಂಧಿಬಜಾರ್, ದೇವಸಂದ್ರ ಮಾರುಕಟ್ಟೆ, ಕೆ.ಆರ್ ಪುರ ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ, ರಸಲ್ ಮಾರುಕಟ್ಟೆ ಹಾಗೂ ಪಾಲಿಕೆ ಬಜಾರ್ ಸೇರಿದಂತೆ 12 ಮಾರುಕಟ್ಟೆಗಳಲ್ಲಿ ಕಸದ ರಾಶಿಯೇ ಸೃಷ್ಟಿಯಾಗಿದೆ. ಕಳೆದ 2 ದಿನಗಳಲ್ಲಿ 414 ಮೆಟ್ರಿಕ್ ಟನ್ ತ್ಯಾಜ್ಯವನ್ನು ಮಾರುಕಟ್ಟೆಗಳಿಂದ ತೆಗೆಯಲಾಗಿದೆ. ಸೋಮವಾರವೂ 150ಕ್ಕೂ ಹೆಚ್ಚು ಜಾಗದಲ್ಲಿ ಕಸ ತೆಗೆಯಲಾಗಿದೆ.
ಹೆಚ್ಚುವರಿ ಯಂತ್ರಗಳ ಬಳಕೆ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಹೆಚ್ಚಾಗುತ್ತಿರುವುದರಿಂದ ಮಾರುಕಟ್ಟೆ ಹಾಗೂ ರಸ್ತೆ ಬದಿಗಳಲ್ಲಿ ಕಸ ಜಾಸ್ತಿಯಾಗಿದೆ. ಹೀಗಾಗಿ, ಬೆಂಗಳೂರಿನ ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಕಸ ತೆಗೆಯುವುದಕ್ಕೆ ಕಸ ವಿಭಾಗದ ಅಧಿಕಾರಿಗಳು ಹಾಗೂ ಮಾರ್ಷಲ್ಗಳ ನೇತೃತ್ವದಲ್ಲಿ ಹೆಚ್ಚುವರಿಯಾಗಿ ಜೆಸಿಬಿಗಳನ್ನು ಬಳಸಿಕೊಳ್ಳಲಾಗ್ತಿದೆಯಂತೆ. ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ಗಳಲ್ಲಿ 3/4 ಟ್ರಿಪ್ ಕಸ ತುಂಬಿಕೊಂಡು ಬೇರೆ ಕಡೆ ವಿಲೇವಾರಿ ಮಾಡಲಾಗ್ತಿದೆ.
ಬೆಂಗಳೂರಿನಲ್ಲಿ ಮೂರು ದಿನದಲ್ಲಿ 17 ಸಾವಿರ ಮೆ.ಟನ್: ಬೆಂಗಳೂರಿನಲ್ಲಿ ದಸರಾ ಹಿನ್ನೆಲೆಯಲ್ಲಿ ಮೂರು ದಿನದಲ್ಲಿ ಬರೋಬ್ಬರಿ 17 ಸಾವಿರ ಮೆಟ್ರಿಕ್ ಟನ್ ಕಸ ಸೃಷ್ಟಿಯಾಗಿದೆ. ಈ ಪ್ರಮಾಣದ ಕಸವನ್ನು ಬಿಬಿಎಂಪಿ ಮೂರು ದಿನಗಳಲ್ಲಿ ವಿಲೇವಾರಿ ಮಾಡಿದೆ. ಅಲ್ಲದೇ ಬೆಂಗಳೂರಿನ ಪ್ರಮುಖ ಮಾರುಕಟ್ಟೆ, ರಸ್ತೆ ಬದಿಗಳಲ್ಲಿ ಕಸ ತೆಗೆಯಲಾಗ್ತಿದೆ.
ಮೂರು ದಿನಗಳಲ್ಲಿ 12-10-2024: 6306 ಮೆ.ಟ, 13-10-2024: 5561 ಮೆ.ಟ ಹಾಗೂ 14-10-2024 : 5866 ಮೆ.ಟ ಕಸ ವಿಲೇವಾರಿ ಮಾಡಲಾಗಿದೆ. ಆದರೆ, ಮಂಗಳವಾರ ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ, ಕಸದ ಗಾಡಿಗಳು ಬಹುತೇಕ ಭಾಗದಲ್ಲಿ ಮುಂದುವರಿದಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications