ಕಸ ವಿಂಗಡಣೆ : ಜನ ಪಾಸ್, ಸರ್ಕಾರ ಫೇಲ್ : ಸಿಎನ್ ಅಶ್ವತ್ಥ ನಾರಾಯಣ
ಬೆಂಗಳೂರು, ಮಾರ್ಚ್ 02 : ಜನರು ವಿಂಗಡಿಸಿ ನೀಡಿದ ತ್ಯಾಜ್ಯವನ್ನು ವಿಲೇವಾರಿ ಮಾಡುವ ವಿಷಯದಲ್ಲಿಯೂ ಸರ್ಕಾರ ಹಾಗು ಬಿಬಿಎಂಪಿ ನಿರಂತರವಾಗಿ ವೈಫಲ್ಯವನ್ನು ಕಾಣುತ್ತಿದೆ ಎಂದು ಮಲ್ಲೇಶ್ವರಂ ಶಾಸಕರಾದ ಡಾ. ಸಿ. ಎನ್. ಅಶ್ವತ್ ನಾರಾಯಣ್ ಅವರು ಆರೋಪಿಸಿದ್ದಾರೆ.
ತನ್ನ ಸೋಲನ್ನು ಒಪ್ಪಿಕೊಳ್ಳದ ಸರ್ಕಾರ ಯಾವುದೇ ಸತ್ಯಾಂಶವಿಲ್ಲದ/ವಾಸ್ತವಕ್ಕೆ ನಿಲುಕದ ಪೊಳ್ಳು ಸಮೀಕ್ಷೆಯ ನಾಟಕವಾಡಿ, ಜನರ ವಿಶ್ವಾಸ ಗಳಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ ಎಂದು ಅಶ್ವತ್ ನಾರಾಯಣ್ ಅವರು ವಿಧಾನಸೌಧದ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ನಗರಾಭಿವೃದ್ದಿ ಸಚಿವರು, ಬಿಬಿಎಂಪಿ ಆಯುಕ್ತರು ಮತ್ತು ಜಂಟಿ ಆಯುಕ್ತರು, ಘನ ತ್ಯಾಜ್ಯ ತಂಡ ವಾರ್ಡ್ಗಳಲ್ಲಿ ಕಸ ವಿಂಗಡಣೆ ಪ್ರಮಾಣದ ಸಮೀಕ್ಷೆ ಮಾಡಿದ್ದು, 5 ವಾರ್ಡ್ಗಳಲ್ಲಿ ಶೇ.80ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕಸ ವಿಂಗಡಣೆಯಾಗುತ್ತಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದ್ದಾರೆ.

ಬೊಮ್ಮನಹಳ್ಳಿ, ದಾಸರಹಳ್ಳಿ ಮತ್ತು ಯಲಹಂಕ ವಲಯದಲ್ಲಿ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕಸ ವಿಂಗಡಣೆಯಾಗುತ್ತಿದೆ. ಆರ್.ಆರ್. ನಗರ, ದಕ್ಷಿಣ, ಪಶ್ಚಿಮ, ಪೂರ್ವ ಮತ್ತು ಮಹದೇವಪುರ ವಲಯಗಳಲ್ಲಿ ಶೇ.40ರಿಂದ 60ರಷ್ಟು ಪ್ರಮಾಣದಲ್ಲಿ ಕಸ ವಿಂಗಡಣೆಯಾಗುತ್ತಿದೆ.
ಅಧಿಕಾರಿಗಳ ಹೇಳಿಕೆಯಂತೆ, ಶೇ.75 ಅಂದರೆ 1143 ಟನ್ ಹಸಿ ಕಸ ಉತ್ಪತಿಯಾಗುತ್ತಿದ್ದು. ವಿಲೇವಾರಿ ಘಟಕಗಳಿಗೆ ಕೇವಲ 165ರಿಂದ 180 ಟನ್ ಮಾತ್ರ ರವಾನೆಯಾಗುತ್ತಿದೆ. ಹಾಗಾದರೇ ಉಳಿದ ಹಸಿ ಕಸ ಎಲ್ಲಿಗೆ ರವಾನಿಸಲಾಗುತ್ತಿದೆ ಅಥವಾ ನೀಡಿರುವ ಅಂಕಿಗಳು ತಪ್ಪಾಗಿದೆಯೇ? ಎಂದು ಅವರು ಸರ್ಕಾರ ಹಾಗು ಬಿಬಿಎಂಪಿಯನ್ನು ಪ್ರಶ್ನಿಸಿದರು.
ಅಲ್ಲದೇ, ಕಸ ವಿಲೇವಾರಿಯಲ್ಲಿ ಬಿ.ಬಿ.ಎಂ.ಪಿ ವೈಫಲ್ಯವನ್ನು ಜನರ ಮೇಲೆ ಹಾಕಿ, ಜನರು ಕಸ ಬೇರ್ಪಡಿಸಲು ಸಹಕರಿಸುತ್ತಿಲ್ಲ ಎಂದು ಹೇಳುವ ಅಧಿಕಾರಿಗಳು, ಬೇರ್ಪಡಿಸಿದ ಕಸ ಎಲ್ಲಿಗೆ ಹೋಗುತ್ತಿದೆ ಹಾಗೂ ಆ ಕಸ ಹೇಗೆ ವಿಲೇವಾರಿ ಯಾಗುತ್ತಿದೆ ಎಂದು ಮೊದಲು ತಿಳಿಸಲಿ ಎಂದು ಆಗ್ರಹಿಸಿದರು.

ಕಸ ವಿಂಗಡಣೆಯಲ್ಲಿ ಜನರು ಪಾಸ್, ವಿಂಗಡಿಸಿದ ಕಸ ವಿಲೇವಾರಿಯಲ್ಲಿ ಸರ್ಕಾರ ಫೇಲ್! ವಿಲೇವಾರಿಯಾಗುತ್ತಿರುವ ಹಸಿ ಕಸ 180 ಟನ್ ಮಾತ್ರ. ಉಳಿದ ಹಸಿ ಕಸ ಎಲ್ಲಿಗೆ ಹೋಗುತ್ತಿದೆ? ಬಹುತೇಕ ಸ್ಥಳಗಳ ಖಾಲಿ ನಿವೇಶನ, ಮೋರಿ, ರಸ್ತೆ ಬದಿಗಳಲ್ಲಿ ಕಸದ ರಾಶಿ ಬೀಳುತ್ತಿದ್ದು, ಹಲವೆಡೆ ಬೆಂಕಿ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ಬಿಬಿಎಂಪಿ ಸುಮಾರು 800 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ, ಪ್ರತಿದಿನ 2800 ಟನ್ ಸಾಮರ್ಥ್ಯದ ಕಸ ವಿಲೇವಾರಿ ಘಟಕ ನಿರ್ಮಿಸಿದ್ದು, ಶೇ.7 ಸಾಮರ್ಥ್ಯ ಕೂಡ ಬಳಕೆಯಾಗುತ್ತಿಲ್ಲ. ಜನರ ತೆರಿಗೆ ಹಣದಲ್ಲಿ 1 ಕೆ.ಜಿ ಕಸ ವಿಲೇವಾರಿಗೆ ರೂ.13 ಖರ್ಚು. ಆದರೂ ಫಲಿತಾಂಶ ಮಾತ್ರ ಶೂನ್ಯ ಎಂದು ಅವರು ವ್ಯಂಗ್ಯವಾಡಿದರು.
ಬಿಬಿಎಂಪಿಯು ವಾರ್ಷಿಕ ರೂ.1632 ಕೋಟಿ ಹಣವನ್ನು ಕಸ ಸಂಗ್ರಹಣೆ ಹಾಗೂ ವಿಲೇವಾರಿಗೆ ಖರ್ಚು ಮಾಡುತ್ತಿದೆ. ಜನರು ಬೇರ್ಪಡಿಸಿ ನೀಡಿದ ಕಸವನ್ನು ಕೂಡ ವೈಜ್ಞಾನಿಕ ವಿಲೇವಾರಿ ಮಾಡಲಾಗುತ್ತಿಲ್ಲ. ನಿಜವಾಗಿಯೂ ಈ ಹಣ ಕಸ ವಿಲೇವಾರಿಗೆ ಖರ್ಚು ಮಾಡಲಾಗುತ್ತಿದೆಯೆ? ಎಂದು ಅವರು ಪ್ರಶ್ನಿಸಿದರು.
ಒಂದೆಡೆ ಎಲೆಕ್ಟ್ರಿಕ್ ವಾಹನ ಖರೀದಿಸಿ ಬೆಂಗಳೂರಿನ ಮಾಲಿನ್ಯ ತಡೆಯಲು ಮುಂದಾಗಿರುವ ಸರ್ಕಾರ, ಇನ್ನೊಂದೆಡೆ ಅವೈಜ್ಞಾನಿಕ ರೀತಿ ಕಸ ವಿಲೇವಾರಿ ಮಾಡಿ, ಈ ಮೂಲಕ ಉತ್ಪತಿಯಾಗುತ್ತಿರುವ ಮಿಥೇನ್ ಅನಿಲದಿಂದ ಪರಿಸರವನ್ನು ಮತ್ತಷ್ಟು ಹಾಳುಮಾಡಲು ಮುಂದಾಗಿದೆ. ಇದು ಯಾವ ಸೀಮೆ ಪರಿಸರ ಕಾಳಜಿ? ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications