ಹೊಸ ಸರ್ಕಾರದ ಮುಂದೆ ಬೇಡಿಕೆ ಇಡಲು ಮುಂದಾದ ಗಾರ್ಮೆಂಟ್ಸ್ ನೌಕರರು
ಬೆಂಗಳೂರು, ಮೇ 28 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸರ್ಕಾರದ ಮುಂದೆ ತಮ್ಮ ಬೇಡಿಕೆ ಮುಂದಿಡಲು ಗಾರ್ಮೆಂಟ್ಸ್ ನೌಕರರು ಸಜ್ಜಾಗುತ್ತಿದ್ದಾರೆ.
ಕನಿಷ್ಠ ವೇತನ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು ಎಂದು ಗಾರ್ಮೆಂಟ್ಸ್ ನೌಕರರು ಬೇಡಿಕೆ ಇಡಲಿದ್ದಾರೆ. ಬೇಡಿಕೆ ಈಡೇರುವ ತನಕ ಧರಣಿ ನಡೆಸಲು ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿಯೇ ಸುಮಾರು 4.5 ಲಕ್ಷ ನೌಕರರು ಇದ್ದಾರೆ, ಇವರಲ್ಲಿ ಮಹಿಳೆಯರೇ ಅಧಿಕ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಈ ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. 2018ರ ಫೆಬ್ರವರಿಯಲ್ಲಿ ಕರಡು ಸಿದ್ಧವಾಗಿತ್ತು. ಆದರೆ, ಮಾರ್ಚ್ನಲ್ಲಿ ಇದನ್ನು ವಾಪಸ್ ಪಡೆಯಲಾಗಿತ್ತು. ಈಗ ಹೊಸ ಸರ್ಕಾರ ಬಂದ ಮೇಲೆ ನೌಕರರು ಮತ್ತೊಮ್ಮೆ ಕಾಯ್ದೆ ತಿದ್ದುಪಡಿಗೆ ಬೇಡಿಕೆ ಇಡಲಿದ್ದಾರೆ.

ತಿದ್ದುಪಡಿ ಕಾಯ್ದೆಯ ಕರಡು ಪ್ರತಿಯಲ್ಲಿ ಈಗಿರುವ ದಿನದ ವೇತವನ್ನು ಎರಡು ಪಟ್ಟು ಹೆಚ್ಚಿಸಲು ಪ್ರಸ್ತಾವನೆ ಸಿದ್ಧವಾಗಿತ್ತು. 220 ರಿಂದ 445 ರೂ.ಗಳಿಗೆ ದಿನದ ವೇತನ ಹೆಚ್ಚಳ ಮಾಡಲು ಕರಡು ಸಿದ್ಧವಾಗಿತ್ತು.
ಬೆಂಗಳೂರು ನಗರದಲ್ಲಿ ಗಾರ್ಮೆಂಟ್ಸ್ನಲ್ಲಿ ಪ್ರತಿದಿನ ಗರಿಷ್ಠ ವೇತನ 593 ರೂ. ಆಗಿದೆ. ಆದರೆ, ಕಾರ್ಮಿಕ ಇಲಾಖೆ ಸಿದ್ಧಪಡಿಸಿದ ಪ್ರಸ್ತಾವನೆಗೆ ಗಾರ್ಮೆಂಟ್ಸ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದರು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ವೇತನ ಜಾಸ್ತಿ ಇದೆ ಎಂದು ಅವರು ವಾದ ಮುಂದಿಟ್ಟಿದ್ದರು.
ಗಾರ್ಮೆಂಟ್ಸ್ ಮಾಲೀಕರ ವಿರೋಧದಿಂದಾಗಿ ಪ್ರಸ್ತಾವನೆಯನ್ನು ವಾಪಸ್ ಪಡೆಯಲಾಗಿತ್ತು. ಈಗ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದ್ದರಿಂದ ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು ಎಂದು ಗಾರ್ಮೆಂಟ್ಸ್ ನೌಕರರು ಬೇಡಿಕೆ ಮುಂದಿಡಲು ಸಿದ್ಧರಾಗತ್ತಿದ್ದಾರೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications