ಗಾರ್ಮೆಂಟ್ಸ್ ನೌಕರರ ಪ್ರತಿಭಟನೆಯ ಸಚಿತ್ರ ವಿವರ
ಬೆಂಗಳೂರು, ಏಪ್ರಿಲ್, 19: ಬಸ್ ಗೆ ಬೆಂಕಿ, ಅಮಾಯಕರಿಗೆ ಗುಂಡೇಟು, ಪೊಲೀಸ್ ಸ್ಟೇಶನ್ ಮೇಲೆ ಉದ್ರಿಕ್ತರ ದಾಳಿ, ಲಾಠಿ ಚಾರ್ಜ್, ಟ್ರಾಫಿಕ್ ಸಮಸ್ಯೆ, ಹೈರಾಣರಾದ ಸಾಮಾನ್ಯ ಜನ ಇದು ಮಂಗಳವಾರದ ಬೆಂಗಳೂರಿನ ಕತೆ.
ಕೇಂದ್ರ ಸರ್ಕಾರದ ಹೊಸ ಪಿಎಫ್ ನೀತಿ ಖಂಡಿಸಿ ಗಾರ್ಮೆಂಟ್ಸ್ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿದಿತ್ತು. ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಮಿಕರು ಬೆಂಗಳೂರಿನ ವಿವಿಧೆಡೆ ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. [ಪಿಎಫ್ ನೀತಿ ಖಂಡನೆ, ಪ್ರತಿಭಟನೆ, ಹೊಸೂರು ರಸ್ತೆ ಟ್ರೆಂಡಿಂಗ್]
ಹೊಸೂರು ರಸ್ತೆಯ ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹುಳಿಮಾವು, ಕೊಡಿಚಿಕ್ಕನಹಳ್ಳಿ ಹಾಗೂ ಹೊಸರೋಡ್, ಮತ್ತು ಜಾಲಹಳ್ಳಿ ಕ್ರಾಸ್ ಬಳಿಯ ಎಲ್ಲ ಗಾರ್ಮೆಂಟ್ಸ್ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರು ಕೊಂಚ ಮುನ್ನೆಚ್ಚರಿಕೆ ತೆಗೆದುಕೊಳ್ಳದ ಕಾರಣ ಇಡೀ ದಿನ ಪರಿಸ್ಥಿತಿ ಕೈ ಮೀರಿ ಹೋಗಿತ್ತು.[ಬೊಮ್ಮನಹಳ್ಳಿ: ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಪ್ರತಿಭಟನೆ]

ತುಮಕೂರು ರಸ್ತೆಯಲ್ಲೂ ಪ್ರತಿಭಟನೆ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ರಾಜಾಜಿನಗರ,ವೆಸ್ಟ್ ಆಫ್ ಕಾರ್ಡ್ ರೋಡ್, ಕಂಠೀರವ ಸ್ಟುಡಿಯೋ, ತುಮಕೂರು ರಸ್ತೆ, ಸುಮನಹಳ್ಳಿ ಜಂಕ್ಷನ್, ಮಾಗಡಿ ರಸ್ತೆ, ಜಾಲಹಳ್ಳಿ ರಸ್ತೆ ಸಂಪೂರ್ಣ ಜಾಮ್ ಆಗಿದ್ದು ವಾಹನ ಸವಾರರು ಪರಿತಪಿಸಿದರು. ['ಗಾರ್ಮೆಂಟ್ ಫ್ಯಾಕ್ಟರಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್']

[ಚಿತ್ರಗಳು-ಫೇಸ್ ಬುಕ್, ಬೆಂಗಳೂರು ಪೊಲೀಸ್]
ಪೀಣ್ಯದ ಪಿಎಫ್ ಕಚೇರಿ ಎದುರು ಪ್ರತಿಭಟನೆ ಜೋರಾಗಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಪ್ರತಿಭಟನಾಕಾರರ ಮೇಲೆ ಪೊಲೀಸರು ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಿದರು.
ಬೆಂಗಳೂರಿನ ವಿವಿಧೆಡೆ ರಸ್ತೆ ತಡೆನಡೆಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇನ್ನೊಂದೆಡೆ ರಾಮಮಗರ, ಆನೇಕಲ್ ನಲ್ಲೂ ಕಾರ್ಮಿಕರು ಹೋರಾಟ ನಡೆಸಿದರು.
ಯಾಕಾಗಿ ಪ್ರತಿಭಟನೆ?
ಕೇಂದ್ರ ಸರ್ಕಾರ ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ನೀತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 1952 ರ ಪಿಎಫ್ ಶಾಸನಕ್ಕೆ ತಿದ್ದುಪಡಿ ಮಾಡಲಾಗಿದೆ. ಒಂದು ವೇಳೆ ಕಾರ್ಮಿಕರೊಬ್ಬರು ತಮ್ಮ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲು ಮುಂದಾದರೆ ಅವರ ಖಾತೆಯಿಂದ ಮುರಿದುಕೊಂಡ ಹಣ ಮಾತ್ರ ಪಡೆದುಕೊಳ್ಳಲು ಸಾಧ್ಯ. ಕಂಪನಿಯ ಕಾಂಟ್ರಿಬ್ಯುಶನ್ ಅನ್ನು ಪಡೆದುಕೊಳ್ಳಲು ವ್ಯಕ್ತಿ 58 ವರ್ಷಗಳವರೆಗೆ ಕಾಯಬೇಕು. ಇದನ್ನೇ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
5.30: ಕಾರ್ಮಿಕರ ಪ್ರತಿಭಟನೆ ಮತ್ತು ಪಿಯು ಉಪನ್ಯಾಸಕರ ಪ್ರತಿಭಟನೆಗೆ ಸಂಬಂಧಿಸಿ ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರು ಮತ್ತು ಅಧಿಕಾರಿಗಳ ಸಭೆ ಆರಂಭವಾಗಿದೆ.
4.45: ಎಸಿಪಿ ಓಬಳೇಶ್ ಸೇರದಂತೆ 23 ಪೊಲೀಸರು ಘರ್ಷಣೆಯಲ್ಲಿ ಗಾಯಗೊಂಡಿದ್ದು ಅವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
4.30: ನಾರಾಯಣ ಹೃದಯಾಲಯದಲ್ಲಿ ಗುಂಟೇಟು ತಗುಲಿದ್ದ ಯುವತಿಗೆ ಚಿಕಿತ್ಸೆ
4.10: ಜಾಲಹಳ್ಳಿಯಲ್ಲಿ 144 ಸೆಕ್ಷನ್ ಜಾರಿ, 45 ವರ್ಷದ ರಾಜ್ ಕುಮಾರ್, 23 ವರ್ಷದ ಸಂಜೀವ್ ಗೆ ತಗುಲಿದ ಪೊಲೀಸರ ಗುಂಡೇಟು, ಗಾಯಾಳುವನ್ನು ಆಸ್ಪತ್ರಗೆ ದಾಳಿ
4.00: ಜಾಲಹಳ್ಳಿ ಕ್ರಾಸ್ ಮತ್ತು ಪೀಣ್ಯ ಬಳಿ ಉದ್ವಿಗ್ನ ಪರಿಸ್ಥಿತಿ. ಹೋಂ ಗಾರ್ಡ್ ಮತ್ತು ಪೇದೆಗಳ ಮೇಲೆ ಪ್ರಭಟನಾಕಾರರಿಂದ ಹಲ್ಲೆ.
3.30: ಹೆಬ್ಬಗೋಡಿ ಬಳಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಲಕ್ಷ್ಮೀ ಲೇಔಟ್ ನ ಯುವತಿ ಪ್ರೀತಿ ಎಂಬುವರಿಗೆ ಪೊಲೀಸರ ಗುಂಡು ತಗುಲಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹಾರಿಸಿದ ಗುಂಡು ಯುವತಿ ಕಾಲಿಗೆ ತಾಗಿದೆ.
3.00: ಜಾಲಹಳ್ಳಿ ಕ್ರಾಸ್ ಬಳಿ 10ಕ್ಕೂ ಅಧಿಕ ಬಸ್ ಗಳಿಗೆ ಬೆಂಕಿ, ಕಿಲೋಮೀಟರ್ ದೂರಕ್ಕೆ ಚಾಚಿದ ಹೊಗೆ
2.50: ಐವರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
2.50: ಟಿವಿ ಮಾಧ್ಯಮದ ಪ್ರತಿನಿಧಿಗಳ ಮೇಲೆ ಹಲ್ಲೆ
2.50: ಬಿಎಂಟಿಸಿ ಮತ್ತು ಸರ್ಕಾರಿ ಬಸ್ ಗಳಿಗೆ ಬೆಂಕಿ
2.45: ಹೆಬ್ಬಗೋಡಿ ಪೊಲೀಸ್ ಠಾಣೆ ಮುತ್ತಿಗೆಗೆ ಯತ್ನ
1.45: ಹೆಬ್ಬಗೋಡಿ ಬಳಿ ಉದ್ರಿಕ್ತ ಕಾರ್ಮಿಕರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ, ಅಶ್ರವಾಯು ಪ್ರಯೋಗ
1.00: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಬೀದಿಗಿಳಿದ ಕಾರ್ಮಿಕರ ಮೇಲೆ ಲಾಠಿಚಾರ್ಜ್
1.00: ತುಮಕೂರು ರಸ್ತೆ ಗೋರಗುಂಟೆ ಪಾಳ್ಯದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಪೊಲೀಸರೊಂದಿಗೆ ಕಾರ್ಮಿಕರ ಘರ್ಷಣೆ
12.50: ಬೆಂಗಳೂರು ಮೆಟ್ರೋ ಸಂಚಾರ ಸಹ ಬಂದ್, ಮೆಟ್ರೋ ದ್ವಾರವನ್ನು ಮುಚ್ಚಿದ ಸಿಬ್ಬಂದಿ
12.50: ಬನ್ನೇರುಘಟ್ಟ ರಸ್ತೆ ಬಿಎಂಟಿಸಿ ಮೇಲೆ ಕಲ್ಲು ತೂರಾಟ
12.50: ಮೆಜೆಸ್ಟಿಕ್ ಗೆ ತೆರಳಲು ಸಾಧ್ಯವಾಗದೇ ಹೈರಾಣರಾದ ನಾಗರಿಕರು
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications