ಎಟಿಎಂ ದರೋಡೆ, ಸಾವು ಬದುಕಿನ ನಡುವೆ ಗಾರ್ಡ್
ಬೆಂಗಳೂರು, ಜು.12: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಮತ್ತೊಮ್ಮೆ ಹಲ್ಲೆ ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ತಡರಾತ್ರಿ ನಡೆಸಿದ ಎಟಿಎಂ ಕಳುವು ಯತ್ನ ವಿಫಲಗೊಂಡಿದೆ. ದುಷ್ಕರ್ಮಿಗಳನ್ನು ತಡೆಯುವ ಯತ್ನದಲ್ಲಿ ಹಲ್ಲೆಗೊಳ್ಳಲಾದ ಸೆಕ್ಯುರಿಟಿ ಗಾರ್ಡ್ ಈಗ ಜೀವನ್ಮರಣ ಹೋರಾಟ ನಡೆಸಿದ್ದಾನೆ.
ನಗರದ ಎಚ್.ಎಸ್.ಆರ್ ಲೇಔಟ್ ನಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಲಗ್ಗೆ ಇಟ್ಟ ದುಷ್ಕರ್ಮಿಗಳ ಗುಂಪು ಹಾರೆ ಮೂಲಕ ಎಟಿಎಂ ಕೇಂದ್ರದ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸೆಕ್ಯುರಿಟಿ ಗಾರ್ಡ್ ಷಂಶುಲ್ ದುಷ್ಕರ್ಮಿಗಳಿಗೆ ತಡೆಯೊಡ್ಡಿದ್ದಾರೆ.
ಸೆಕ್ಯುರಿಟಿ ಗಾರ್ಡ್ ಮೇಲೆ ಹಾರೆಯಿಂದ ಹಲ್ಲೆ ಮಾಡಿದ್ದಾರೆ. ನಂತರ ದುಷ್ಕರ್ಮಿಗಳ ತಂಡ ಎಟಿಎಂ ಒಡೆಯಲು ಯತ್ನಿಸಿ ವಿಫಲವಾಗಿದೆ. ಹಲ್ಲೆಗೊಳಗಾಗಿ ನೋವಿನಿಂದ ಚೀರುತ್ತಿದ್ದ ಸೆಕ್ಯುರಿಟಿ ಗಾರ್ಡ್ ಮೇಲೆ ಮತ್ತೊಮ್ಮೆ ಹಾರೆಯಿಂದ ಹೊಡೆದು ಅಲ್ಲಿಂದ ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಇನ್ನೂ ವಿವರಗಳು ತಿಳಿದು ಬಂದಿಲ್ಲ, ಷಂಶುಲ್ ಅವರು ಎಟಿಎಂ ಕಳುವು ಯತ್ನವನ್ನು ತಪ್ಪಿಸಲು ಹೋರಾಟ ನಡೆಸಿ ತೀವ್ರವಾಗಿ ಹಲ್ಲೆಗೊಳಗಾಗಿದ್ದಾರೆ. ಸದ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಚ್ಎಸ್ ಆರ್ ಪೊಲೀಸ್ ಠಾಣಾಧಿಕಾರಿ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಆಗ್ನೇಯ ವಲಯದ ಡಿಸಿಪಿ ಟಿಡಿ ಪವಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಜ್ಯೋತಿ ಯಾದವ್ ಹಲ್ಲೆ ಪ್ರಕರಣ: ನಗರ ಜೆ.ಸಿ.ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಹಲ್ಲೆಗೊಳಗಾಗಿದ್ದ ಜ್ಯೋತಿ ಉದಯ್ ಈಗ ಆರೋಗ್ಯವಾಗಿದ್ದು, ಬ್ಯಾಂಕ್ ಉದ್ಯೋಗಕ್ಕೆ ಎಂದಿನಂತೆ ಹಾಜರಾಗುತ್ತಿದ್ದಾರೆ. ಆದರೆ, ಜ್ಯೋತಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಕಳೆದ ನವೆಂಬರ್ 19 ರಂದು ಬೆಳಗ್ಗೆ 7.15 ರ ಸುಮಾರಿಗೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪುನಃ ನವೀಕರಿಸಲಾಗಿದೆ. 10 ಸಬ್ ಇನ್ಸ್ ಪೆಕ್ಟರ್, 8 ಇನ್ಸ್ ಪೆಕ್ಟರ್ ಹಾಗೂ ಸೈಬರ್ ತಜ್ಞರುಳ್ಳ ವಿಶೇಷ ತಂಡವೊಂದನ್ನು ರಚಿಸಲಾಗಿದೆ.
ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ ಹಾಗೂ ಆಂಧ್ರಪ್ರದೇಶ ಗಡಿ ಭಾಗದಲ್ಲಿ ಹಲ್ಲೆಕೋರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸರು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications