ಮಣ್ಣಲ್ಲಿ ಮಣ್ಣಾದ ಪತ್ರಕರ್ತೆ ಗೌರಿ ಲಂಕೇಶ್
ಬೆಂಗಳೂರು, ಸೆಪ್ಟೆಂಬರ್ 06: 'ಗೌರಿ ಮತ್ತೊಮ್ಮೆ ಹುಟ್ಟಿ ಬಾ' ಎಂಬ ಘೋಷಣೆಗಳ ನಡುವೆ ಪತ್ರಕರ್ತೆ ಗೌರಿ ಲಂಕೇಶ್ ಮಣ್ಣಲ್ಲಿ ಮಣ್ಣಾದರು.
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಗೌರಿ ಲಂಕೇಶ್ ಅವರ ಅಂತ್ಯ ಸಂಸ್ಕಾರ ಬುಧವಾರ ಸಂಜೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪೊಲೀಸ್ ಗೌರವದೊಂದಿಗೆ ಯಾವುದೇ ಸಂಪ್ರದಾಯವನ್ನು ನೆರವೇರಿಸದೇ ಹೂವನ್ನು ಇಟ್ಟು ಪಾರ್ಥಿವ ಶರೀರವನ್ನು ಹೂಳಲಾಯಿತು

ಮುಖ್ಯಮಂತ್ರಿ ಸಿದ್ದರಾಮ್ಯಯ ಹಾಗೂ ಉಮಾಶ್ರೀ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಪ್ರಗತಿ ಪರ ಚಿಂತಕರು ಉಪಸ್ಥಿತರಿದ್ದರು.












Click it and Unblock the Notifications