ಗೌರಿ ಲಂಕೇಶ್ ಹತ್ಯೆ : 7.65 ಎಂಎಂ ಪಿಸ್ತೂಲ್ ನಕ್ಸಲರ ಮೆಚ್ಚಿನ ಆಯುಧ
ಬೆಂಗಳೂರು, ಸೆಪ್ಟೆಂಬರ್ 07 : ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಯಾರು ಹತ್ಯೆ ಮಾಡಿದ್ದಾರೆ? ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದರೆ, ಹತ್ಯೆಗೆ ಬಳಸಿರುವ ಪಿಸ್ತೂಲ್ ನಕ್ಸಲರು ಬಳಸುವ ಮಾದರಿಯದ್ದಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಎಸ್ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದೆ. 7.65 ಎಂಎಂ ಪಿಸ್ತೂಲ್ನಿಂದ ಗುಂಡು ಹಾರಿಸಲಾಗಿದೆ ಎಂಬುದು ಸದ್ಯದ ಮಾಹಿತಿ. ಇಂತಹ ಬಂದೂಕನ್ನು ನಕ್ಸಲರು ಬಳಸುವುದು ಹೆಚ್ಚು. ಈ ಆಯಾಮದ ಕುರಿತು ತನಿಖೆ ನಡೆದಿದೆ. ಯಾವುದೇ ಅಂತಿಮ ನಿರ್ಧಾರಕ್ಕೆ ಇನ್ನೂ ಬರಲಾಗಿಲ್ಲ.

ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು 7.65 ಎಂಎಂ ಪಿಸ್ತೂಲ್ನಿಂದ ಗುಂಡು ಹಾರಿದೆ. ದೇಹಕ್ಕೆ ಆಗಿರುವ ಗಾಯವನ್ನು ಪರಿಶೀಲಿಸಿದರೆ ಬೇರೆ ಮಾದರಿ ಆಯುಧ ಬಳಸಿಲ್ಲ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಿದ್ದಾರೆ.
ಎಂ.ಎಂ.ಕಲಬುರ್ಗಿ ಅವರ ಹತ್ಯೆಗೂ ಗೌರಿ ಲಂಕೇಶ್ ಅವರ ಹತ್ಯೆಗೂ ಸಾಮ್ಯತೆ ಇದೆ. ಕಲಬುರ್ಗಿ ಅವರ ಹತ್ಯೆಗೂ ಇದೇ ಮಾದರಿಯ ಪಿಸ್ತೂಲ್ ಬಳಕೆ ಮಾಡಲಾಗಿತ್ತು. ಈ ಪಿಸ್ತೂಲ್ ಸುಲಭವಾಗಿ ಸಿಗುತ್ತದೆ ಮತ್ತು ಕೆಲವು ವರ್ಷಗಳ ನಕ್ಸಲ್ ಕಾರ್ಯಾಚರಣೆಯಲ್ಲಿ ಇದನ್ನು ಬಳಸಿರುವ ಉದಾಹರಣೆಗಳಿವೆ.
ಎಂ.ಎಂ.ಕಲಬುರ್ಗಿ, ಗೋವಿಂದ ಪನ್ಸಾರೆ, ನರೇದ್ರ ದಾಬೋಲ್ಕರ್ ಹತ್ಯೆಗೆ ಒಂದೇ ಮಾದರಿಯ ಆಯುಧ ಬಳಸಲಾಗಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಪ್ರಕಾರ ಸುಮಾರು 10 ಅಡಿ ದೂರದಿಂದ ಗುಂಡಿನ ದಾಳಿ ನಡೆಸಲಾಗಿದೆ. ಗೇಟ್ ಮತ್ತು ಅವರ ಮನೆ ಬಾಗಿಲಿನ ನಡುವೆ ಈ ದಾಳಿ ನಡೆಸಿದೆ.
ಪತ್ರಕರ್ತೆ ಮತ್ತು ಚಿಂತಕಿ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಮಂಗಳವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ









Click it and Unblock the Notifications