ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಪರು ಪರೀಕ್ಷೆಗೆ ಗೌರಿ ಹತ್ಯೆ ಆರೋಪಿ ಒಪ್ಪಿಗೆ, ಹೊರ ಬರುತ್ತಾ ಸತ್ಯ?

By Manjunatha
|
Google Oneindia Kannada News

ಬೆಂಗಳೂರು, ಜೂನ್ 28: ಕಳೆದ ಬಾರಿ ಕೊನೆಯ ಹಂತದಲ್ಲಿ ಮಂಪರು ಪರೀಕ್ಷೆಯಿಂದ ಹಿಂದೆ ಸರಿದಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ ಕೆ.ಟಿ.ನವೀನ್ ಕುಮಾರ್‌ ಈ ಬಾರಿ ಒಪ್ಪಿಗೆ ನಿಡಿದ್ದು, ಈ ಬಾರಿಯಾದರೂ ಸುಗಮವಾಗಿ ಪರೀಕ್ಷೆ ನಡೆಯುತ್ತದೆಯಾ ಕಾದು ನೋಡಬೇಕಿದೆ.

ಕಳೆದ ಬಾರಿ ನ್ಯಾಯಾಲಯವು ನವೀನ್ ಕುಮಾರ್‌ಗೆ ಮಂಪರು ಪರೀಕ್ಷೆಗೆ ಒಳಗಾಗಲು ಒಪ್ಪಿಗೆ ನೀಡಿತ್ತು ಆತನನ್ನು ಗುಜರಾತ್‌ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಲಾಗಿತ್ತು ಆದರೆ ಅಲ್ಲಿನ ವೈದ್ಯಕೀಯ ಅಧಿಕಾರಿಗಳ ಮಾತು ಕೇಳಿದ ಬಳಿಕ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಒಪ್ಪಲಿಲ್ಲ.

ಗೌರಿ ಹತ್ಯೆ ಆರೋಪಿಯಿಂದ ಮತ್ತೊಂದು ಸ್ಫೋಟಕ ಮಾಹಿತಿ ಹೊರಕ್ಕೆಗೌರಿ ಹತ್ಯೆ ಆರೋಪಿಯಿಂದ ಮತ್ತೊಂದು ಸ್ಫೋಟಕ ಮಾಹಿತಿ ಹೊರಕ್ಕೆ

ಇದೀಗ ಮಂಪರು ಪರೀಕ್ಷೆ ಮಾಡಿಸಿಕೊಳ್ಳಲು ತಾನು ಸಿದ್ಧವಿರುವುದಾಗಿ ನವೀನ್ ಕುಮಾರ್ ಹೇಳಿದ್ದು, ಈ ಬಗ್ಗೆ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಎಸ್‌ಐಟಿ ಪರ ವಕೀಲ ವೇದಮೂರ್ತಿ ತಿಳಿಸಿದ್ದಾರೆ.

Gauri Lankesh murder accused ready to take narcotic test

ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಗೌರಿ ಹತ್ಯೆ ಪ್ರಕರಣದಲ್ಲಿ ಈ ವರೆಗೆ ಬಂಧಿಸಲಾಗಿರುವ ಎಲ್ಲ ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಕಾರಣ ಎಲ್ಲಾ ಆರೋಫಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಗೌರಿ ಲಂಕೇಶ್‌ರನ್ನು ಕೊಲ್ಲಲು ಕೊಟ್ಟಿದ್ದು ಕೇವಲ 13000 ರೂಪಾಯಿಗೌರಿ ಲಂಕೇಶ್‌ರನ್ನು ಕೊಲ್ಲಲು ಕೊಟ್ಟಿದ್ದು ಕೇವಲ 13000 ರೂಪಾಯಿ

ಎಸ್‌ಐಟಿ ಬಂದಿಸಿರುವ ಕೆ.ಟಿ.ನವೀನ್‌ ಕುಮಾರ್, ಪರಶುರಾಮ್ ವಾಘ್ಮೋರೆ, ಮನೋಹರ ದುಂಡಪ್ಪ ಯಡವೆ, ಅಮೋಲ್ ಕಾಳೆ, ಅಮಿತ್ ದೆಗ್ವೇಕರ್, ಸುಜಿತ್ ಕುಮಾರ್ ಅಲಿಯಾಸ್ ಪ್ರವೀನ್ ಅವರುಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

English summary
Gauri Lankesh Murder accused KT Naveen Kumar ready to take Narcotic test. Last time he was taken to Gujarat for narcotic test but he step back to take test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X