ಗೌರಿ ಲಂಕೇಶ್ ಹತ್ಯೆ ಪ್ರಾಥಮಿಕ ತನಿಖೆಯ ಮುಖ್ಯಾಂಶಗಳು
Recommended Video

ಬೆಂಗಳೂರು, ಸೆಪ್ಟೆಂಬರ್ 6 : ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪೂರ್ವ ನಿಯೋಜಿತವಾದದ್ದು, ತಂತ್ರಗಾರಿಕೆಯಿಂದ ಈ ಹತ್ಯೆ ಮಾಡಲಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇಬ್ಬರು ಆಕೆಯನ್ನು ಹಿಂಬಾಲಿಸಿದ್ದಾರೆ. ಒಬ್ಬ ಅದಾಗಲೇ ಗೌರಿ ಅವರ ಮನೆ ಬಳಿ ಕಾದಿದ್ದು, ಈ ದುಷ್ಕೃತ್ಯ ಎಸಗಿದ್ದಾರೆ.
ರಾಜರಾಜೇಶ್ವರಿ ನಗರದ ಮನೆ ಬಳಿ ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ಈ ಕೃತ್ಯವನ್ನು ಮನೆಯ ಬಳಿಯೇ ಮಾಡಿರುವುದು ಕೂಡ ತಂತ್ರಗಾರಿಕೆ. ಆ ರಸ್ತೆಯಲ್ಲಿ ಬೆಳಕು ಕಡಿಮೆ ಹಾಗೂ ಸಂದಿ ರಸ್ತೆಗಳು ಹೆಚ್ಚು ಇರುವುದರಿಂದ ತಪ್ಪಿಸಿಕೊಳ್ಳುವುದಕ್ಕೆ ಸಹಕಾರಿ ಎಂಬ ಕಾರಣಕ್ಕೆ ಮನೆಯ ಬಳಿಯೇ ಹತ್ಯೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಗೌರಿ ಲಂಕೇಶ್ ಮನೆ ಎದುರು ಬೀದಿ ದೀಪ ಇದೆ. ಅದಾದ ನಂತರ ನಾನೂನು ಮೀಟರ್ ದೂರದಲ್ಲಿ ಮತ್ತೊಂದು ಇದೆ. ಜತೆಗೆ ಆಕೆಯ ಮನೆ ಎದುರಿಗೆ ಎರಡು ಅಪಾರ್ಟ್ ಮೆಂಟ್ ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಬಡಾವಣೆಯ ಯಾರೂ ಕೂಡ ಹತ್ಯೆ ಮಾಡುದವರನ್ನು ನೋಡಿದ್ದೇವೆ ಹೇಳಿಕೊಂಡಿಲ್ಲ.
ಈ ಪ್ರದೇಶದಲ್ಲಿ ಸಂದಿ ರಸ್ತೆಗಳು ಹೆಚ್ಚಿರುವುದರಿಂದ ದುಷ್ಕರ್ಮಿಗಳು ಸುಲಭವಾಗಿ ತಪ್ಪಿಸಿಕೊಂಡಿದ್ದಾರೆ. ಈ ಹತ್ಯೆಗೂ ಮುನ್ನ ತುಂಬ ದಿನ ಗಮನಿಸಲಾಗಿದೆ. ಗೌರಿ ಲಂಕೇಶ್ ಅವರು ಸಾಮಾನ್ಯವಾಗಿ ರಾತ್ರಿ ಒಂಬತ್ತರ ನಂತರವೇ ಕಚೇರಿಯಿಂದ ಹೊರಡುತ್ತಾರೆ. ಆದರೆ ಮಂಗಳವಾರ ಬೇಗ ಹೊರಟಿದ್ದರು.
ಗೌರಿ ಲಂಕೇಶ್ ಚಲನವಲನದ ಮೇಲೆ ನಿಗಾ ವಹಿಸಲಾಗಿತ್ತು ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲ ಎಂದು ಕರ್ನಾಟಕ ಪೊಲೀಸ್ ಹಿರಿಯ ಅಧಿಕಾರಿ ಆರ್.ಕೆ.ದತ್ತಾ ಅವರು ತಿಳಿಸಿದ್ದಾರೆ.
ಆ ಬಡಾವಣೆಯ ಜನರಿಗೆ ಪಿಸ್ತೂಲಿನಿಂದ ಹಾರಿದ ಗುಂಡಿನ ಸದ್ದು ಕೇಳಿದೆ. ಆ ನಂತರ ಏನಾಯಿತು ಎಂದು ನೋಡಲು ಹೊರಗೆ ಬಂದಿದ್ದಾರೆ. ಪ್ರತ್ಯಕ್ಷದರ್ಶಿಗಳು ಹತ್ಯೆ ಮಾಡಿದವರನ್ನು ನೋಡಿಲ್ಲವಾದ್ದರಿಂದ ಅವರು ಎಷ್ಟು ಮಂದಿ ಇದ್ದರು ಎಂದು ನಿರ್ಧಾರ ಮಾಡುವುದು ಕೂಡ ಕಷ್ಟ.
ಗೌರಿ ಲಂಕೇಶ್ ರ ಮನೆ ಹೊರಗೆ ಇರುವ ಸಿಸಿಟಿವಿಯನ್ನೇ ಸಾಕ್ಷ್ಯವಾಗಿ ನೆಚ್ಚಿಕೊಳ್ಳಬೇಕಿದೆ ಹಾಗೂ ಆ ಮೂಲಕವೇ ಪ್ರಕರಣವನ್ನು ಭೇದಿಸಬೇಕಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications