ಸಂಸ ಬಯಲು ರಂಗಮಂದಿರದಲ್ಲಿ ಗೌರಿ ಲಂಕೇಶ್ ಅಂತಿಮ ದರ್ಶನ
Recommended Video

ಬೆಂಗಳೂರು, ಸೆಪ್ಟೆಂಬರ್ 06 : ದುಷ್ಕರ್ಮಿಗಳಿಂದ ಹತ್ಯೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅಂತ್ಯಕ್ರಿಯೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ. ಮರಣೋತ್ತರ ಪರೀಕ್ಷೆ ಬಳಿಕ ದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ.
ಬುಧವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಇಂದ್ರಜಿತ್ ಲಂಕೇಶ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದರು. 'ಮರಣೋತ್ತರ ಪರೀಕ್ಷೆ ಬಳಿಕ ಸಂಸ ಬಯಲು ರಂಗಮಂದಿರಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ' ಎಂದರು.

'ಕುಟುಂಬದವರು ಎಲ್ಲರೂ ಚರ್ಚಿಸಿ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಕೈಗೊಂಡಿದ್ದೇವೆ' ಎಂದು ಇಂದ್ರಜಿತ್ ಲಂಕೇಶ್ ಹೇಳಿದರು.
ಮರಣೋತ್ತರ ಪರೀಕ್ಷೆ ಆರಂಭ : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಆರಂಭವಾಗಿದೆ. ಕವಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಟ ಪ್ರಕಾಶ್ ರೈ, ನಿರ್ಮಾಪಕ ಕೆ.ಮಂಜು ಸೇರಿದಂತೆ ಹಲವರು ಆಸ್ಪತ್ರೆಗೆ ಆಗಮಿಸಿದ್ದಾರೆ.
ಪೊಲೀಸರ ತನಿಖೆ ಚುರುಕು : ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಪೊಲೀಸರು ರಾತ್ರಿಯೇ ತನಿಖೆ ಆರಂಭಿಸಿದ್ದಾರೆ. ಗೌರಿ ಲಂಕೇಶ್ ನಿವಾದಲ್ಲಿನ ಎರಡು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಿದ್ದರಾಮಯ್ಯಗೆ ಮಾಹಿತಿ : ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಲುಪಿಸಲಾಗುತ್ತಿದೆ. ಇಂದಿನ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿರುವ ಸಿದ್ದರಾಮಯ್ಯ ಪ್ರಕರಣದ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಸೆ.5ರ ಮಂಗಳವಾರ ರಾತ್ರಿ ಗುಂಡು ಹಾರಿಸಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications