ಗೌರಿ ಹತ್ಯೆ ಹಿಂದೆ ಯಾರು? ಅಕ್ಕ ಏರಿಗೆ, ತಮ್ಮ ನೀರಿಗೆ!
ಗೌರಿ ಲಂಕೇಶ್ ಅವರಿಗೆ ಕೆಲ ದಿನಗಳ ಹಿಂದೆ ತಮ್ಮನ್ನು ಯಾರೋ ಫಾಲೋ ಮಾಡುತ್ತಿರುವುದರ ಬಗ್ಗೆ ಶಂಕೆ. ಈ ಅನುಮಾನವನ್ನು ಹಿಂದೆಯೇ ವ್ಯಕ್ತಪಡಿಸಿದ್ದ ಗೌರಿ ಲಂಕೇಶ್.
Recommended Video

ಬೆಂಗಳೂರು, ಸೆಪ್ಟೆಂಬರ್ 7: ಇತ್ತೀಚೆಗೆ ಹತ್ಯೆಗೊಳಗಾದ ಗೌರಿ ಲಂಕೇಶ್ ಅವರು ಒಂದು ತಿಂಗಳ ಹಿಂದೆ ತಮ್ಮ ತಾಯಿಗೆ ಯಾರೋ ಅಪರಿಚಿತನೊಬ್ಬ ತನ್ನ ಕಾರನ್ನು ಹಿಂಬಾಲಿಸುತ್ತಿರುವುದಾಗಿ ತಿಳಿಸಿದ್ದರೆಂದು ಅವರ ತಂಗಿ ಹಾಗೂ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಮಧ್ಯಾಹ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ನನ್ನ ಅಕ್ಕನಿಗೆ (ಗೌರಿ) ತಮ್ಮನ್ನು ಯಾರೋ ಅಪರಿಚಿತರು ಫಾಲೋ ಮಾಡುತ್ತಿದ್ದಾರೆಂಬ ಅನುಮಾನ ಬಂದಿತ್ತು. ಒಂದೊಮ್ಮೆ ಕಾರಿನಲ್ಲಿ ಅವರು ಪ್ರಯಾಣ ಮಾಡುವಾಗ ತನ್ನ ತಾಯಿಯ ಫೋನ್ ಕರೆಯನ್ನು ಸ್ವೀಕರಿಸಿ ಮಾತನಾಡಿದ್ದರು. ಆಗ, ಯಾರೋ ಅಪರಿಚಿತನೊಬ್ಬ ತನ್ನ ಕಾರನ್ನು ಹಿಂಬಾಲಿಸುತ್ತಿರುವುದಾಗಿ ಅವರು ತಿಳಿಸಿದ್ದರು'' ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಗೌರಿ ಲಂಕೇಶ್ ಅವರ ಸಹೋದರ, ಪತ್ರಕರ್ತ ಹಾಗೂ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ, ''ನಮ್ಮ ಅಕ್ಕನಿಗೆ ಯಾರೂ ಶತ್ರುಗಳೇ ಇರಲಿಲ್ಲ. ಆದರೆ ಅವರ ಹತ್ಯೆಯಾಗಿರುವುದು ಆತಂಕ ಹುಟ್ಟಿಸಿದೆ. ರಾಜ್ಯ ಸರ್ಕಾರವು ಸದ್ಯಕ್ಕೆ ಈ ತನಿಖೆಯನ್ನು ಎಸ್ಐಟಿಗೆ ವಹಿಸಿದೆ. ನಾವೂ ಅದರ ತನಿಖಾ ವರದಿಗಾಗಿ ಕಾಯುತ್ತೇವೆ. ಅದರ ತನಿಖಾ ವರದಿಯು ನಮಗೆ ಸಮಾಧಾನ ತರದಿದ್ದರೆ ನಾವು ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸುತ್ತೇವೆ'' ಎಂದರು.
ಹತ್ಯೆ ಹಿಂದಿರುವ ವ್ಯಕ್ತಿಗಳ ಬಗ್ಗೆ ತಮಗಿರುವ ಅನುಮಾನಗಳ ಬಗ್ಗೆ ಹೇಳಿಕೊಂಡ ಇಂದ್ರಜಿತ್, ನಮಗೆ ಬಲಪಂಥೀಯರು ಹಾಗೂ ನಕ್ಸಲರ ಮೇಲೆ ಅನುಮಾನವಿದೆ. ಆದರೆ, ಸೂಕ್ತ ತನಿಖೆಯಿಂದಷ್ಟೇ ಸತ್ಯಾಂಶ ಹೊರಬೀಳಬೇಕಿದೆ ಎಂದರು.
ಎರಡು ವರ್ಷಗಳ ಹಿಂದೆ ಚಿಂತಕ ಎಂ.ಎಂ. ಕಲಬುರಗಿಯವರ ಹತ್ಯೆಯಾಗಿತ್ತು. ಆದರೆ, ಅವರ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ನನ್ನ ಅಕ್ಕನ ಪ್ರಕರಣವೂ ಆ ರೀತಿ ಆಗಬಾರದು ಎಂದು ಅವರು ಆಗ್ರಹಿಸಿದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications